ಹಾಸ್ಯ ನಟ ಎಂ.ಎಸ್.ಉಮೇಶ್ ನಿಧನ: ಗಣ್ಯರಿಂದ ಸಂತಾಪ.!

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಎಂ.ಎಸ್.ಉಮೇಶ್ ಅವರು ಭಾನುವಾರ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದಾಗಿ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದ ಉಮೇಶ್ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಕಿದ್ವಾಯಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಎಂ. ಎಸ್. ಉಮೇಶ್ ಮೈಸೂರಿನಲ್ಲಿ ಏಪ್ರಿಲ್ 22, 1945ರಲ್ಲಿ ಜನಿಸಿದರು. ರಂಗಭೂಮಿ ಮತ್ತು ಚಲನಚಿತ್ರ ನಟರಾಗಿ 1948ರಿಂದ ಸಕ್ರಿಯರಾಗಿದ್ದರು. ಮಕ್ಕಳ ರಾಜ್ಯ, ಭಾಗ್ಯವಂತರು, ಕಿಲಾಡಿ ಜೋಡಿ, ಗುರು ಶಿಷ್ಯರು, ಭೂಮಿಗೆ ಬಂದ ಭಗವಂತ, ಹಾಲು ಜೇನು, ಕಾಮನಬಿಲ್ಲು, ಅಪೂರ್ವ […]

ಶ್ರೀಲಂಕಾದಲ್ಲಿ ಭಾರಿ ಮಳೆ, ಭೂಕುಸಿತ: 56 ಮಂದಿ ಮೃತ್ಯು; 600ಕ್ಕೂ ಹೆಚ್ಚು ಮನೆಗೆ ಹಾನಿ

ಶ್ರೀಲಂಕಾದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರೊಂದಿಗೆ ಅಲ್ಲಲ್ಲಿ ಭೂಕುಸಿತಗಳೂ ಸಂಭವಿಸಿದ್ದು, ಈವರೆಗೆ ಮೃತಪಟ್ಟವರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ನಿರಂತರ ಮಳೆಯಿಂದಾಗಿ ಮನೆಗಳು, ಹೊಲಗಳು, ರಸ್ತೆಗಳು ಜಲಾವೃತವಾಗಿದ್ದು, ಭೂಕುಸಿತ ಸಂಭವಿಸಿದೆ. ಇದುವರೆಗೆ 600ಕ್ಕೂ ಹೆಚ್ಚು ಮನೆಗಳು ತೀವ್ರ ಹಾನಿಗೊಳಗಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಶುಕ್ರವಾರ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಾಲೆಗಳಿಗೆ ಶ್ರೀಲಂಕಾ ಸರ್ಕಾರ ರಜೆ ಘೋಷಣೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯ ವಾತಾವರಣ ಮುಂದುವರಿದರೆ, ಬಂದ್ […]

ಬಾಲಕಿಯನ್ನು ಅಪಹರಿಸಿ 90,000 ಕ್ಕೆ ಮಾರಾಟ ಮಾಡಿದ ಸೋದರ ಮಾವ; ಮುಂಬೈ ಪೋಲಿಸರಿಂದ ಬಾಲಕಿ ರಕ್ಷಣೆ!

ಮುಂಬೈ: ಸೋದರ ಮಾವನೇ ಬಾಲಕಿಯನ್ನು ಅಪಹರಿಸಿ ₹ 90 ಸಾವಿರಕ್ಕೆ ಮಾರಾಟ ಮಾಡಿದ್ದ ಪ್ರಕರಣವನ್ನು ಭೇದಿಸಿರುವ ಮುಂಬೈ ಪೊಲೀಸರು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಈ ಘಟನೆಯಲ್ಲಿ ಅಪಹರಣಕ್ಕೆ ಒಳಗಾಗಿ ಮಾರಾಟವಾಗಿದ್ದ ಬಾಲಕಿ ಸುರಕ್ಷಿತವಾಗಿ ತಾಯಿ ಮಡಿಲು ಸೇರಿದ್ದಾಳೆ. ವಕೋಲಾ ಪ್ರದೇಶದಿಂದ ಬಾಲಕಿಯ ಸೋದರ ಮಾವ ಹಾಗೂ ಇತರ ಐವರು ಗುರುವಾರ ಮಧ್ಯರಾತ್ರಿ ಅಪಹರಿಸಿದ್ದರು. ನಂತರ * 90 ಸಾವಿರಕ್ಕೆ ಮಾರಾಟ ಮಾಡಿದ್ದರು. ನಂತರ ಆಕೆಯನ್ನು ಖರೀದಿಸಿದ್ದ ವ್ಯಕ್ತಿ ₹1,80,000ಕ್ಕೆ ಮರು ಮಾರಟ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. […]

ವಿಯೆಟ್ನಾಂನಲ್ಲಿ ಭಾರಿ ಮಳೆ, ಪ್ರವಾಹ; 90 ಮಂದಿ ಮೃತ್ಯು.

ಹನೋಯಿ: ಕೇಂದ್ರ ವಿಯೆಟ್ನಾಂನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತದಲ್ಲಿ ಕನಿಷ್ಠ 90 ಮಂದಿ ಮೃತಪಟ್ಟಿದ್ದಾರೆ ಎಂದು ವಿಕೋಪ ನಿಯಂತ್ರಣ ಸಂಸ್ಥೆ ನೀಡಿದ ಮಾಹಿತಿ ಆಧರಿಸಿ ಇಲ್ಲಿನ ಮಾಧ್ಯಮಗಳು ಭಾನುವಾರ ವರದಿ ಮಾಡಿವೆ. ದಾಖಲೆ ‍ಪ್ರಮಾಣದ ಮಳೆ ಮತ್ತು ಪ್ರಬಲ ‘ಕಾಲ್‌ಮೇಗಿ’ ಚಂಡಮಾರುತದಿಂದಾದ ಮಹಾಪ್ರವಾಹ ಭಾರಿ ಹಾನಿ ಉಂಟು ಮಾಡಿದೆ. ವಿಯೆಟ್ನಾಂನ ಸೆಂಟ್ರಲ್‌ ಹೈಲ್ಯಾಂಡ್‌ನ ರಸ್ತೆಗಳು, ರೈಲು ಹಳಿಗಳು ಹಲವೆಡೆ ಭೂಕುಸಿತದಿಂದ ನಾಶವಾಗಿದ್ದರೆ, ಮತ್ತೆ ಕೆಲವೆಡೆ ಜಲಾವೃತವಾಗಿವೆ. ಸಾವಿರಾರು ಜನರು […]

ನ.28 ರಿಂದ ರಾಜ್ಯಾದ್ಯಂತ 5000 ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿ ಪ್ರಾರಂಭ.

ಕರ್ನಾಟಕದಾದ್ಯಂತ 5,000 ಅಂಗನವಾಡಿ ಕೇಂದ್ರಗಳಲ್ಲಿ ನವೆಂಬರ್ 28ರಿಂದ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಿಸಿದ್ದಾರೆ. ನಾನು ಸಚಿವಳಾದ ನಂತರ ಕಳೆದ ಎರಡೂವರೆ ವರ್ಷಗಳಲ್ಲಿ ಅಂಗನವಾಡಿಗಳಿಗೆ 200 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ನವೆಂಬರ್ 28, 2025 ರಿಂದ ರಾಜ್ಯಾದ್ಯಂತ 5000 ಅಂಗನವಾಡಿಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭಿಸುವ ಪ್ರಮುಖ ಹೆಜ್ಜೆಯನ್ನು ಇಡಲಾಗುವುದು ಎಂದು ಹೇಳಿದರು. ಆದಾಗ್ಯೂ, ಸ್ಥಳಾವಕಾಶ ಮತ್ತು ಸರಿಯಾದ ತರಗತಿ ಕೊಠಡಿಗಳ ಕೊರತೆಯಿಂದಾಗಿ ಅಂಗನವಾಡಿಗಳಲ್ಲಿ […]