ದೇಶಾದ್ಯಂತ ಎರಡನೇ ಹಂತದ ಮತದಾನ: ಕರ್ನಾಟಕದಲ್ಲಿ 69 ಪ್ರತಿಶತದಷ್ಟು ಮತದಾನ; ಶೇ.81.48 ಮತದಾನದೊಂದಿಗೆ ಮಂಡ್ಯ ಜಿಲ್ಲೆಗೆ ಮೊದಲನೆ ಸ್ಥಾನ

ಬೆಂಗಳೂರು: ಏಪ್ರಿಲ್ 26 ರಂದು 2024 ರ ಲೋಕಸಭಾ ಚುನಾವಣೆಯ (Loksabha Elections) ಎರಡನೇ ಹಂತದಲ್ಲಿ ನಡೆದ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳ ಮತದಾನವು ಮುಕ್ತಾಯಗೊಂಡಿದೆ, ರಾಜ್ಯದಲ್ಲಿ 69 ಪ್ರತಿಶತದಷ್ಟು ಮತದಾನವಾಗಿದೆ ಎಂದು ಭಾರತೀಯ ಚುನಾವಣಾ ಆಯೋಗದ ತಾತ್ಕಾಲಿಕ ವರದಿ ತಿಳಿಸಿದೆ. ಸುಡು ಬಿಸಿಲನ್ನೂ ಲೆಕ್ಕಿಸದೆ ಮತದಾರರು ಅತ್ಯುತ್ಸಾಹದಿಂದ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಿ ತಮ್ಮ ಜವಾಬ್ದಾರಿ ಪೂರೈಸಿದ್ದಾರೆ. ಮತದಾನ ನಡೆದ 14 ಕ್ಷೇತ್ರಗಳ ಪೈಕಿ ಮಂಡ್ಯದಲ್ಲಿ ಅತಿ ಹೆಚ್ಚು ಶೇ.81.48ರಷ್ಟು ಮತದಾನವಾಗಿದ್ದು, ಕೋಲಾರದಲ್ಲಿ ಶೇ.78.07 ಹಾಗೂ ಬೆಂಗಳೂರು […]

ಲೋಕಸಭಾ ಚುನಾವಣೆ: ದ.ಕ ಶೇ.58.76%; ಉಡುಪಿ-ಚಿಕ್ಕಮಗಳೂರು 57.49% ಮತದಾನ; ಬೆಂಗಳೂರು ಸೆಂಟ್ರಲ್‌ನಲ್ಲಿ ಕನಿಷ್ಠ ಮತದಾನ

ಬೆಂಗಳೂರು: ಕರ್ನಾಟಕದಲ್ಲಿ ಇಂದು ಮತದಾನ ನಡೆದ 14 ಕ್ಷೇತ್ರಗಳ ಪೈಕಿ 3 ಗಂಟೆವರೆಗಿನ ಮಾಹಿತಿ ಪ್ರಕಾರ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಅಂದರೆ ಶೇ.58.76ರಷ್ಟು ಮತದಾನವಾಗಿದ್ದು, ಉಡುಪಿ-ಚಿಕ್ಕಮಗಳೂರಿನಲ್ಲಿ ಶೇ.57.49ರಷ್ಟು ಮತದಾನವಾಗಿದೆ. ಬೆಂಗಳೂರು ಸೆಂಟ್ರಲ್‌ನಲ್ಲಿ ಕನಿಷ್ಠ 40.10 ಪ್ರತಿಶತ. ಬೆಂಗಳೂರು ದಕ್ಷಿಣದಲ್ಲಿ ಶೇ.40.77 ಹಾಗೂ ಬೆಂಗಳೂರು ಉತ್ತರದಲ್ಲಿ ಶೇ.41.12ರಷ್ಟು ಮತದಾನವಾಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ 49.62 ರಷ್ಟು ಮತದಾನವಾಗಿದೆ.

ಚಿಕ್ಕಮಗಳೂರು: ಕರ್ಣಾಟಕ ಬ್ಯಾಂಕ್ ಎಟಿಎಂನಲ್ಲಿ ಅಗ್ನಿ ಅವಘಡ; 5 ಲಕ್ಷ ರೂ ಸೇರಿದಂತೆ 15 ಲಕ್ಷ ಮೌಲ್ಯದ ಎಟಿಎಂ ಯಂತ್ರ ಸಂಪೂರ್ಣ ಭಸ್ಮ

ಚಿಕ್ಕಮಗಳೂರು: ಕರ್ಣಾಟಕ ಬ್ಯಾಂಕ್ ಎಟಿಎಂನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬರೋಬ್ಬರಿ ಐದು ಲಕ್ಷ ರೂಪಾಯಿ ಭಸ್ಮವಾಗಿದೆ. ಐಜಿ ರಸ್ತೆಯ ಸಾರಗೋಡು ಆರ್ಕೆಡ್​ನಲ್ಲಿರುವ ಕರ್ನಾಟಕ ಬ್ಯಾಂಕ್​ನ ಶಾಖೆಯ ಕೆಳಭಾಗದಲ್ಲಿರುವ ಎಟಿಎಂಗೆ ಬೆಂಕಿ ಹೊತ್ತಿಕೊಂಡಿದ್ದು, 5 ಲಕ್ಷ ಹಣ ಸೇರಿದಂತೆ 15 ಲಕ್ಷ ಮೌಲ್ಯದ ಎಟಿಎಂ ಯಂತ್ರ ಸಂಪೂರ್ಣ ಭಸ್ಮವಾಗಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಎಟಿಎಂಗೆ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಎಟಿಎಂಗೆ ಬೆಂಕಿ ಹೊತ್ತಿಕೊಂಡ ವಿಚಾರವನ್ನು ಹೈದರಾಬಾದ್ ಬ್ಯಾಂಕ್ ಕಂಟ್ರೋಲ್ ರೂಮ್​ ಅಗ್ನಿಶಾಮಕ ದಳಕ್ಕೆ ತಿಳಿಸಿದೆ. ಮಾಹಿತಿ ಬಂದ ಕೂಡಲೆ […]

ಕಾಂಗ್ರೆಸ್ ಕಾರ್ಪೋರೇಟರ್ ಮಗಳ ಹತ್ಯೆ ಪ್ರಕರಣ: ಕಠಿಣ ಕಾನೂನು ಕ್ರಮಕ್ಕೆ ಆಗ್ರಹ

ಬೆಂಗಳೂರು: ಕಾಂಗ್ರೆಸ್ ಕಾರ್ಪೊರೇಟರ್ ಮಗಳ ಭೀಕರ ಹತ್ಯೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಘರ್ಷಣೆಗೆ ಕಾರಣವಾಗಿದೆ. ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮುಖಂಡನ ಮಗಳಿಗೆ ಆಕೆ ಓದುತ್ತಿದ್ದ ಕಾಲೇಜಿನ ಹಳೆ ವಿದ್ಯಾರ್ಥಿ ಫಯಾಜ್ ಎಂಬಾತ ಏಳು ಬಾರಿ ಚಾಕುವಿನಿಂದ ಇರಿದಿದ್ದಾನೆ. ಆತನ ಪ್ರೀತಿಯನ್ನು ನಿರಾಕರಿಸಿದ ಕಾರಣ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. 23 ವರ್ಷದ ನೇಹಾ ಹಿರೇಮಠ್ ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್ಸ್‌ನ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದು, ಫಯಾಜ್ ಖೋಂಡುನಾಯಕ್ ಈ ಹಿಂದೆ ಆಕೆಯ ಸಹಪಾಠಿಯಾಗಿದ್ದ. ಹಿರಿಯ […]

ಹುಬ್ಬಳ್ಳಿ ಕಾಲೇಜಿನ ಆವರಣದಲ್ಲಿ ಕಾರ್ಪೋರೇಟರ್ ಪುತ್ರಿ ಕೊಲೆ ಪ್ರಕರಣ: ತಾರಕಕ್ಕೇರಿದ ಪ್ರತಿಭಟನೆ; ಆರೋಪಿ ಗಲ್ಲು ಶಿಕ್ಷೆಗೆ ಎಬಿವಿಪಿ ಒತ್ತಾಯ

ಮುನವಳ್ಳಿ (ಬೆಳಗಾವಿ ಜಿಲ್ಲೆ): ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಗುರುವಾರ ನಡೆದ ವಿದ್ಯಾರ್ಥಿನಿ ಕೊಲೆ ಖಂಡಿಸಿ, ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮುನವಳ್ಳಿಯಲ್ಲಿ ವಿವಿಧ ಸಮುದಾಯಗಳ ನಾಗರಿಕರು, ಬಿಜೆಪಿ, ಕಾಂಗ್ರೆಸ್‌ ಮುಖಂಡರು ಪ್ರತ್ಯೇಕವಾಗಿ ತೀವ್ರ ಪ್ರತಿಭಟನೆ ನಡೆಸಿದರು. ಗ್ರಾಮದಲ್ಲಿ ವ್ಯಾಪಾರ ವಹಿವಾಟು, ರಾಜ್ಯ ಹೆದ್ದಾರಿ ಸಂಚಾರ ಬಂದ್‌ ಮಾಡಿದರು. ಎಂಸಿಎ ಓದುತ್ತಿದ್ದ ನೇಹಾ ಹಿರೇಮಠ (25) ಅವರನ್ನು ಸಹಪಾಠಿ ಫಯಾಜ್‌ (27) ಕಾಲೇಜು ಆವರಣದಲ್ಲೇ ಚಾಕು ಇರಿದು ಕೊಲೆ ಮಾಡಿದ್ದ. ಫಯಾಜ್‌ ಮುನವಳ್ಳಿ ಗ್ರಾಮದವನಾದ್ದರಿಂದ ಗ್ರಾಮದ ಜನ ಘಟನೆಯನ್ನು ತೀವ್ರವಾಗಿ ಖಂಡಿಸಿದರು. […]