ದರ್ಶನ್ ಬಂಧನ ಮುಕ್ತಿಗಾಗಿ ಪತ್ನಿಯಿಂದ ಕೊಲ್ಲೂರಿನಲ್ಲಿ ಪ್ರಾರ್ಥನೆ

ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಶಕ್ತಿ ಕೇಂದ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಚಿತ್ರನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದಾರೆ. ತಮ್ಮ ಆಪ್ತರ ಜೊತೆ ಗುರುವಾರ ಸಂಜೆ ಇಲ್ಲಿಗೆ ಆಗಮಿಸಿದ ವಿಜಯಲಕ್ಷ್ಮಿ ಅವರು ಇಂದು ಬೆಳಿಗ್ಗೆ ನವ ಚಂಡಿಕಾ ಹೋಮದಲ್ಲಿ ಭಾಗಿಯಾಗಿದ್ದಾರೆ. ದರ್ಶನ್ ಬಂಧಮುಕ್ತಿಗಾಗಿ ಪ್ರಾರ್ಥನೆ- ಸಂಕಲ್ಪ ಮಾಡಿರುವ ವಿಜಯಲಕ್ಷ್ಮಿರಾತ್ರಿ ಕೊಲ್ಲೂರಿನಲ್ಲಿಯೇ ವಾಸ್ತವ್ಯ ಹೂಡಿ ಮುಂಜಾನೆ ನವಚಂಡಿಕಾ ಹೋಮದಲ್ಲಿ ಭಾಗಿಯಾಗಿದ್ದಾರೆ. ಇಲ್ಲಿನ ಅರ್ಚಕರಾದ ನರಸಿಂಹ ಅಡಿಗ ನೇತೃತ್ವದಲ್ಲಿ ಚಂಡಿಕಾಯಾಗ ನಡೆಯಿತು.ಅರ್ಚಕ ಸುಬ್ರಹ್ಮಣ್ಯ ಅಡಿಗ ಚಂಡಿಕಾಯಾಗಕ್ಕೆ ಸಂಕಲ್ಪ […]

ಅಂಕೋಲಾ ಶಿರೂರು ಗುಡ್ಡ ಕುಸಿತ ಪ್ರಕರಣ: ಮತ್ತೋರ್ವ ಟ್ಯಾಂಕರ್ ಚಾಲಕ ನಾಪತ್ತೆ, ನಾಪತ್ತೆಯಾದವರ ಸಂಖ್ಯೆ 12ಕ್ಕೆ ಏರಿಕೆ.

ಅಂಕೋಲಾ: ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡು ಈವರೆಗೆ 11 ಮಂದಿ ನಾಪತ್ತೆಯಾಗಿದ್ದು, 8 ಜನರ ಮೃತದೇಹ ಗುಡ್ಡ ತೆರವು ಕಾರ್ಯಾಚರಣೆ ವೇಳೆ ಪತ್ತೆಯಾಗಿದೆ. ಜು.24 ರಂದು ಕೇರಳ ಮೂಲದ ಟ್ಯಾಂಕರ್ ಗಂಗಾವಳಿ ನದಿಯಲ್ಲಿ ಇರುವುದು ಖಚಿತವಾಗಿದ್ದು, ಇದರ ನಡುವೆ ತಮಿಳುನಾಡು ಮೂಲಕ ಮತ್ತೋರ್ವ ಟ್ಯಾಂಕರ್ ಚಾಲಕನೊಬ್ಬನು ನಾಪತ್ತೆಯಾಗಿದ್ದಾರೆ ಅಂತ ಕುಟುಂಬಸ್ಥರು ದೂರು ನೀಡಿದ್ದಾರೆ. ನಾಪತ್ತೆಯಾದವರು ತಮಿಳುನಾಡು ಮೂಲದ ಲಾರಿ ಚಾಲಕ ಶವರಣ. ಶಿರೂರುನಲ್ಲಿ ಗುಡ್ಡ ಕುಸಿತವಾದ ಪಕ್ಕದಲ್ಲೆ ಈತನ ಟ್ಯಾಂಕರ್ ಇತ್ತು. ಅದನ್ನು […]

ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಶೀಘ್ರದಲ್ಲೇ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಯಲ್ಲಿಂದು ತಿಳಿಸಿದರು.ಬುಧವಾರ ಪ್ರಶ್ನೋತ್ತರ ಕಲಾಪದ ವೇಳೆ ಸುಳ್ಯದ ಬಿಜೆಪಿ ಸದಸ್ಯೆ ಭಾಗೀರಥಿ ಮುರಳ್ಯ ಅವರ ಪ್ರಶ್ನೆಗೆ ಸಚಿವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ; ಅಂಗನವಾಡಿ ಕೇಂದ್ರಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಕೂಡಲೇ […]

ಅಂಗನವಾಡಿ ಕೇಂದ್ರಗಳ ಬಾಡಿಗೆ ಹೆಚ್ಚಳಕ್ಕೆ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಿಧಾನಸಭೆ: ಅಂಗನವಾಡಿ ಕೇಂದ್ರಗಳ ಕಟ್ಟಡಗಳ ಬಾಡಿಗೆ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪ್ರಸಕ್ತ ಸಾಲಿನ ಬಾಡಿಗೆ ಪಾವತಿಗೆ ಅನುದಾನದ ಕೊರತೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.ಬುಧವಾರ ಪ್ರಶ್ನೋತ್ತರ ಕಲಾಪದಲ್ಲಿ ಬಸವನಗುಡಿಯ ಬಿಜೆಪಿ ಸದಸ್ಯ ಎಲ್. ಎ. ರವಿ ಸುಬ್ರಹ್ಮಣ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ 2024-25ನೇ ಸಾಲಿನ ಡಿಸೆಂಬರ್ ತಿಂಗಳವರೆಗೆ ಅಂಗನವಾಡಿ ಕೇಂದ್ರಗಳ ಬಾಡಿಗೆ ಮೊತ್ತವನ್ನು ಪಾವತಿಸಲಾಗಿದೆ ಎಂದರು. ಅಂಗನವಾಡಿ ಕೇಂದ್ರಗಳ ಮಕ್ಕಳು, ಇತರೆ ಫಲಾನುಭವಿಗಳು ಇಲಾಖೆಯ […]

ಅಂಕೋಲ ಶಿರೂರು ಗುಡ್ಡ ಕುಸಿತ: ನಾಪತ್ತೆಯಾಗಿದ್ದ ಮಹಿಳೆ ಶವ ಪತ್ತೆ, ಮೃತರ ಸಂಖ್ಯೆ 8ಕ್ಕೆ ಏರಿಕೆ.

ಅಂಕೋಲ: ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಭೂಕುಸಿತ ದುರಂತ ಸಂಭವಿಸಿ ಒಂದು ವಾರ ಕಳೆದಿದ್ದು, ಕಾರ್ಯಾಚರಣೆ ವೇಳೆ ಮತ್ತೊಂದು ಮಹಿಳೆಯ ಶವ ಪತ್ತೆಯಾಗಿದೆ. ಮೃತರಾದ ಹನ್ನೊಂದು ಜನರಲ್ಲಿ ಈವರೆಗೆ ಒಟ್ಟು 8 ಮೃತದೇಹಗಳು ಪತ್ತೆಯಾಗಿವೆ. ಕಾರ್ಯಾಚರಣೆಗೆ ಆಧುನಿಕ ತಂತ್ರಜ್ಞಾನದ ಮೊರೆಹೋಗಿರುವ ಜಿಲ್ಲಾಡಳಿತ ಇಸ್ರೋ ಜೊತೆಗೆ ಯೋಧರ ನೆರವು ಪಡೆದಿದೆ. ಮೃತ ಮಹಿಳೆ ಉಳವರೆ ಗ್ರಾಮದ ಸಣ್ಣಿ ಹನುಮಂತ ಗೌಡ (67). ಘಟನೆ ನಡೆದ 8 ದಿನದ ಬಳಿಕ ಶವ ಪತ್ತೆಯಾಗಿದೆ. ಇನ್ನು ಉಳಿದ ಮೂವರಿಗೆ ಶೋಧ ಕಾರ್ಯ […]