ನ್ಯಾಯಬೆಲೆ ಅಂಗಡಿಗಳ ಟೈಮಿಂಗ್ ಬದಲಾವಣೆ: ಪಡಿತರ ಪಡೆಯುವವರಿಗೆ ಇನ್ನಷ್ಟು ಅನುಕೂಲ ಅಂಗಡಿಗಳಲ್ಲಿ ಅಕ್ರಮಕ್ಕೂ ಬ್ರೇಕ್!

ಬೆಂಗಳೂರು: ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ನ್ಯಾಯಬೆಲೆ ಅಂಗಡಿಗಳ ಕಾರ್ಯಾವಧಿಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ಪಡಿತರ ವಿತರಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಹೊಸ ಆದೇಶ ಹೊರಡಿಸಿದೆ. ಈವರೆಗೆ ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ 8.00 ರಿಂದ ಮಧ್ಯಾಹ್ನ 12.00 ಗಂಟೆಯವರೆಗೆ ಹಾಗೂ ಸಂಜೆ 4.00 ರಿಂದ ರಾತ್ರಿ 8.00 ಗಂಟೆಯವರೆಗೆ ಕಾರ್ಯನಿರ್ವಹಿಸುತ್ತಿದ್ದವು. ಆದರೆ, ಇನ್ಮುಂದೆ ಪ್ರತಿದಿನ ಬೆಳಿಗ್ಗೆ 6.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಪಡಿತರ ವಿತರಣೆ ನಡೆಸುವಂತೆ ಆಹಾರ ಇಲಾಖೆ ಸೂಚಿಸಿದೆ. ಜುಲೈ […]

‘ಪ್ರಿಟಿ’ ಎಂದು ಮೆಸೇಜ್ ಮಾಡಿದ್ದಕ್ಕೆ ಕೇಸ್: ವಿದ್ಯಾರ್ಥಿಗೆ ಹೈಕೋರ್ಟ್ ರಿಲೀಫ್: ಇನ್‌ಸ್ಟಾಗ್ರಾಂನಿಂದ ಹೀಗೂ ಆಗುತ್ತೆ ಅನ್ನೋದಕ್ಕೆ ಈ ಪ್ರಕರಣ ಸಾಕ್ಷಿ!

ಬೆಂಗಳೂರು : ಕಾಲೇಜಿನ ಸಹಪಾಠಿಗೆ ಇನ್‌ಸ್ಟಾಗ್ರಾಂನಲ್ಲಿ “ಪ್ರಿಟಿ” ಮತ್ತು “ಬ್ಯೂಟಿಫುಲ್“ ಎಂದು ಮೆಸೇಜ್ ಕಳುಹಿಸಿದ್ದ ವಿದ್ಯಾರ್ಥಿಯ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಯುವಜನರ ನಡುವಿನ ಖಾಸಗಿ ಸಂಭಾಷಣೆಯನ್ನು ಅಪರಾಧವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಥಾಮಸ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ಅಶೋಕನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಅನ್ನು ರದ್ದುಪಡಿಸಿ, ತನಿಖೆ ವೇಳೆ ವಶಪಡಿಸಿಕೊಳ್ಳಲಾಗಿದ್ದ ಮೊಬೈಲ್ ಹಾಗೂ ಲ್ಯಾಪ್‌ಟಾಪ್ […]

‘ನಮ್ಮ ಯುವಜನರ ಭವಿಷ್ಯಕ್ಕೆ ಅತಿದೊಡ್ಡ ಹಾನಿ ಮಾಡಿರುವವರು ನೀವೇ’: ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ತಿರುಗೇಟು

ಪ್ರಧಾನಿ ಮೋದಿ ಅವರು ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ತಮ್ಮ ಹಿಡಿತಕ್ಕೆ ತೆಗೆದುಕೊಂಡಿರುವುದಷ್ಟೇ ಅಲ್ಲ, ಅದನ್ನು ಸಂಪೂರ್ಣವಾಗಿ ಹಾಳು ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಪ್ರಧಾನಿ ಮೋದಿ ಅವರು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸಿ ಶೀಘ್ರ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಇಂದು ಘೋಷಿಸಿದ್ದಾರೆ. ಅದಕ್ಕೆ ತಮ್ಮ ಎಕ್ಸ್‌ ಪೋಸ್ಟ್‌ ನಲ್ಲಿ ಪ್ರತಿಕ್ರಿಯಿಸಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಯುವಜನರ ಭವಿಷ್ಯಕ್ಕೆ ಅತಿದೊಡ್ಡ ಹಾನಿ ಮಾಡಿರುವುದು ನೀವೇ […]

ಯುವಜನತೆಯ ಪ್ರತಿಭಟನೆ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ: ಬಂಧನಕ್ಕೆ ಹೆದರಲ್ಲ, ನ್ಯಾಯ ಸಿಗುವವರೆಗೂ ಹೋರಾಟ- CM ಡಿಕೆ ಶಿವಕುಮಾರ್

ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಹೊರಗಡೆ ಮಂಗಳವಾರ ನಡೆದ ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಈ ವಿಚಾರವನ್ನು ಸಂಸತ್ತಿನಲ್ಲಿ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದರು. ನವದೆಹಲಿ: ಕೇಂದ್ರ ಸರ್ಕಾರ ಯುವಜನತೆಯ ಹೋರಾಟವನ್ನು ಹತ್ತಿಕ್ಕುತ್ತಿದ್ದು, ಬಂಧನಕ್ಕೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಹೊರಗಡೆ ಮಂಗಳವಾರ ನಡೆದ ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಈ ವಿಚಾರವನ್ನು ಸಂಸತ್ತಿನಲ್ಲಿ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದರು. […]

ದಸರೆ: ಮೂರು ಗಂಡಾನೆಗಳಿಗೆ ‘ಮದ’

ಭೀಮ, ಶ್ರೀಕಂಠ, ಹರ್ಷನಿಗೆ ಮದ: ಅರಣ್ಯ ಇಲಾಖೆಗೆ ಪರ್ಯಾಯ ಆಯ್ಕೆಯ ಕಗ್ಗಂಟು ಮೈಸೂರು: ದಸರಾ ಗಜಪಡೆಯ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ‘ಭೀಮ’ ಸೇರಿದಂತೆ ಮೂರು ಗಂಡಾನೆಗಳಿಗೆ ಸದ್ಯ ಮದವೇರಿದೆ. ಹಾಗಾಗಿ ದಸಾರ ಮಹೋತ್ಸವಕ್ಕೆ ಆನೆಗಳ ಆಯ್ಕೆಯೇ ಅರಣ್ಯ ಇಲಾಖೆಗೆ ಕಗ್ಗಂಟಾಗಿದೆ. ದಸರೆಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆಯನ್ನು ಆಗಸ್ಟ್ 26ರಂದು ಮೈಸೂರಿಗೆ ಕರೆತರಲು ಅರಣ್ಯ ಇಲಾಖೆಯು ಸಿದ್ಧತೆ ನಡೆಸಿದೆ. ಸದ್ಯ ಆನೆಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಆಗಸ್ಟ್ ಮೊದಲ ವಾರದಲ್ಲಿ ಪಟ್ಟಿ ಅಂತಿಮಗೊಳ್ಳಲಿದೆ.ಈ ನಡುವೆ ಕೆಲವು ಗಂಡಾನೆಗಳಲ್ಲಿ ಮದ ಕಾಣಿಸಿಕೊಳ್ಳುತ್ತಿದ್ದು […]