ಫಿಫಾ ವಿಶ್ವಕಪ್ ಸೆಮಿಫೈನಲ್-ಫೈನಲ್ ಹಿನ್ನೆಲೆ: ಬೆಂಗಳೂರಿನಲ್ಲಿ ಹೋಟೆಲ್, ರೆಸ್ಟೋರೆಂಟ್ಗಳಿಗೆ ತಡರಾತ್ರಿ 3.30ರವರೆಗೆ ಆಹಾರ ಸೇವೆಗೆ ಅನುಮತಿ

ಬೆಂಗಳೂರು,: ಫಿಫಾ ವಿಶ್ವಕಪ್ 2026ರ ನಿರ್ಣಾಯಕ ಪಂದ್ಯಗಳ ಹಿನ್ನೆಲೆಯಲ್ಲಿ ಬೆಂಗಳೂರು ಫುಟ್ಬಾಲ್ ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳ ದಿನಗಳಲ್ಲಿ ನಗರದಲ್ಲಿನ ಹೋಟೆಲ್ ಮತ್ತು ರೆಸ್ಟೋರೆಂಟ್ಗಳು ಬೆಳಗಿನ 3.30 ಗಂಟೆಯವರೆಗೆ ಆಹಾರ ಸೇವೆ ನೀಡಲು ಅನುಮತಿ ನೀಡಲಾಗಿದೆ. ಈ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಭಾರತೀಯ ರಾಷ್ಟ್ರೀಯ ರೆಸ್ಟೋರೆಂಟ್ ಸಂಘದ (NRAI) ಮನವಿಯನ್ನು ಪರಿಗಣಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಈ ಆದೇಶ […]
ಸಿಎಂ ಭೇಟಿಗೆ ಬಂದ ಖ್ಯಾತ ನಟಿ ಪ್ರೇಮಾ, ಒಳಗೆ ಹೋಗದಂತೆ ತಡೆದ ಭದ್ರತಾ ಸಿಬ್ಬಂದಿ, ನಿರಾಶೆಯಿಂದ ವಾಪಾಸ್ ತೆರಳಿದ ನಟಿ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲು ಅವರ ನಿವಾಸಕ್ಕೆ ಬಂದಿದ್ದ ಸ್ಯಾಂಡಲ್ವುಡ್ನ ಖ್ಯಾತ ನಟಿ ಪ್ರೇಮಾ ಅವರನ್ನು ಭದ್ರತಾ ಸಿಬ್ಬಂದಿ ಒಳಪ್ರವೇಶಕ್ಕೆ ಅವಕಾಶ ನೀಡದ ಘಟನೆ ನಡೆದಿದೆ. ಈ ಸಂಬಂಧದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ಮುಖ್ಯಮಂತ್ರಿ ಅವರನ್ನು ವೈಯಕ್ತಿಕವಾಗಿ ಭೇಟಿಯಾಗುವ ಉದ್ದೇಶದಿಂದ ಪ್ರೇಮಾ ಅವರ ನಿವಾಸಕ್ಕೆ ಆಗಮಿಸಿದ್ದರು. ಆದರೆ ಭದ್ರತಾ ಸಿಬ್ಬಂದಿ, ಮುಖ್ಯಮಂತ್ರಿ ಅವರನ್ನು ಭೇಟಿಯಾಗಬೇಕಾದರೆ ಅಧಿಕೃತವಾಗಿ ‘ಕೃಷ್ಣಾ’ ಕಚೇರಿಗೆ ತೆರಳುವಂತೆ ಸೂಚನೆ ನೀಡಿದ್ದು, ನಿವಾಸದೊಳಗೆ ಪ್ರವೇಶಿಸಲು ಅವಕಾಶ ನೀಡಿಲ್ಲ […]
ಮನೆ ಕೆಲಸದಾಕೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಎಚ್ ಡಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ: ಮನೆ ಕೆಲಸದಾಕೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಈ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ. ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ನೇತೃತ್ವದ ಪೀಠವು ಪ್ರಕರಣದ ವಿಚಾರಣೆ ನಡೆಸಿ, ರೇವಣ್ಣ ವಿರುದ್ಧದ ಆರೋಪಗಳನ್ನು ಬದಲಾಯಿಸಿದ್ದ ಹೈಕೋರ್ಟ್ ಆದೇಶದ ಬಗ್ಗೆ […]
ಸ್ವಜನ ಪಕ್ಷಪಾತ, ಆದಾಯ ಪ್ರಮಾಣಪತ್ರ ತಿರುಚಿದ ಆರೋಪ: ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು

ಬೆಂಗಳೂರು: ಸ್ವಜನಪಕ್ಷಪಾತ ಹಾಗೂ ಅಧಿಕಾರ ದುರುಪಯೋಗದ ಆರೋಪ ಎದುರಿಸುತ್ತಿರುವ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಿ ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಆದೇಶ ಹೊರಡಿಸಿದ್ದಾರೆ. ಮುಂದಿನ ಆದೇಶದವರೆಗೆ ಕೆಪಿಎಸ್ಸಿಯ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಶಿವಶಂಕರಪ್ಪ ಸಾಹುಕಾರ್ ಅವರು ತಮ್ಮ ಪುತ್ರಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಆಯ್ಕೆಯಾಗಲು ಅನುಕೂಲವಾಗುವಂತೆ ಕುಟುಂಬದ ವಾರ್ಷಿಕ ಆದಾಯ ಪ್ರಮಾಣಪತ್ರದಲ್ಲಿ ಕಡಿಮೆ ಆದಾಯ ನಮೂದಿಸಿ ತಿರುಚಲು ಸಹಕರಿಸಿದ್ದರೆಂಬ […]
ಶಾಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯಗಳನ್ನು ಮುಚ್ಚಿಟ್ಟಿರುವುದು ಗಮನಕ್ಕೆ ಬಂದರೆ ಕಠಿಣ ಶಿಕ್ಷೆ, ಎಲ್ಲಾ ಶಾಲೆಗಳಿಗೆ ಹೈಕೋರ್ಟ್ ಖಡಕ್ ವಾರ್ನಿಂಗ್

ಬೆಂಗಳೂರು: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ವರದಿ ಮಾಡದೆ ಮುಚ್ಚಿಡುವುದೂ ಗಂಭೀರ ಅಪರಾಧವಾಗಿದ್ದು, ಇಂತಹ ಪ್ರಕರಣಗಳನ್ನು ಮುಚ್ಚಿಹಾಕುವ ಶಿಕ್ಷಣ ಸಂಸ್ಥೆಗಳ ವಿರುದ್ಧವೂ ಕಾನೂನು ಕ್ರಮ ಜರುಗಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಎಚ್ಚರಿಕೆ ನೀಡಿದೆ. ಉಡುಪಿ ಜಿಲ್ಲೆಯ ವಸತಿ ಶಾಲೆಯ ಮುಖ್ಯೋಪಾಧ್ಯಾಯ, ಸಹ ಮುಖ್ಯೋಪಾಧ್ಯಾಯ ಹಾಗೂ ವಾರ್ಡನ್ ವಿರುದ್ಧ ಪೋಕ್ಸೊ (POCSO) ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ತಿರಸ್ಕರಿಸಿ ಈ ಆದೇಶ ನೀಡಿದ್ದಾರೆ. ಸಂತ್ರಸ್ತ ಬಾಲಕನ […]