ಪ್ರಸಾದ ಶೆಣೈ ಅವರಿಗೆ ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆಯ 2025 ರ ದ್ವಿತೀಯ ಕಥಾ ಪ್ರಶಸ್ತಿ

ಬೆಂಗಳೂರು: ಪ್ರಜಾವಾಣಿ ಪತ್ರಿಕೆಯ ಪ್ರತಿಷ್ಠಿತ ದೀಪಾವಳಿ ಕಥಾ ಸ್ಪರ್ಧೆ 2025 ರ ಪ್ರಶಸ್ತಿಯ ಫಲಿತಾಂಶ ಪ್ರಕಟವಾಗಿದ್ದು ಕತೆಗಾರ ದಯಾನಂದ ಅವರು ಮೊದಲ ಪ್ರಶಸ್ತಿ ಪಡೆದರೆ, ಎರಡನೇ ಕಥಾ ಪ್ರಶಸ್ತಿಯನ್ನು ಕತೆಗಾರ, ಬರಹಗಾರರಾದ ಉಡುಪಿ ಜಿಲ್ಲೆಯ ಕಾರ್ಕಳದ ಪ್ರಸಾದ ಶೆಣೈ ಆರ್ ಕೆ ಅವರು ಪಡೆದುಕೊಂಡಿದ್ದಾರೆ. ಪ್ರಶಸ್ತಿಯು ನಗದು ಮತ್ತು ಪ್ರಶಸ್ತಿಪತ್ರವನ್ನು ಒಳಗೊಂಡಿದೆ. ಪ್ರಸಾದ್ ಶೆಣೈ ಅವರು ಉಡುಪಿXPRESS’ನ ಸಂಪಾದಕರಾಗಿ, ಕ್ರಿಯೇಟಿವ್ ಕಂಟೆಂಟ್ ಹೆಡ್ ಆಗಿ, ಉಪನ್ಯಾಸಕರಾಗಿಯೂ ಸಕ್ರೀಯರಾಗಿದ್ದಾರೆ. “ಲೂಲು ಟ್ರಾವೆಲ್ಸ್” “ಒಂದು ಕಾಡಿನ ಪುಷ್ಪಕ ವಿಮಾನ”, “ನೇರಳೆ […]

ವಿವಿಧ ನಿಗಮಗಳೊಂದಿಗೆ ಶಾಸಕ ಮಂಜುನಾಥ ಭಂಡಾರಿ ಚರ್ಚೆ: ನಿಗಮದ ವಿವಿಧ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ

ಮಂಗಳೂರು: ಶಾಸಕರಾದ ಮಂಜುನಾಥ ಭಂಡಾರಿ ಅವರು ವಿವಿಧ ನಿಗಮಗಳು, ಪ್ರಾಧಿಕಾರಗಳು ಹಾಗೂ ಅಕಾಡೆಮಿಗಳ ಅಧ್ಯಕ್ಷರುಗಳೊಂದಿಗೆ ಅ.07 ರಂದು ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು. ನಿಗಮ, ಪ್ರಾಧಿಕಾರ ಹಾಗೂ ಅಕಾಡೆಮಿಗಳಲ್ಲಿ ಎದುರಾಗುವ ಯಾವುದೇ ಸಮಸ್ಯೆಗಳಿಗೆ ಸರ್ಕಾರದಿಂದ ಸಿಗುವ ಪರಿಹಾರ ಒದಗಿಸುವ ಭರವಸೆ ನೀಡಿದರು. ನಿಗಮಗದ ಅಧ್ಯಕ್ಷರುಗಳು ಸರ್ಕಾರದ ಅಧಿಕಾರಿಗಳು ಹಾಗೂ ಜನರೊಂದಿಗೆ ಸ್ಪಂದನಾಶೀಲವಾಗಿ ಸಮನ್ವಯತೆಯಿಂದ ವರ್ತಿಸಬೇಕೆಂದು ಸಲಹೆ ನೀಡಿದರು. ಪಕ್ಷವೂ ತಮ್ಮನ್ನು ಗುರುತಿಸಿ ನೀಡಿರುವ ಸ್ಥಾನಮಾನಗಳಿಗೆ ಪ್ರತಿಯಾಗಿ ಪಕ್ಷದ ಸಂಘಟನೆಯ ಬಲವರ್ಧನೆಗಾಗಿ ಪ್ರತಿಯೊಬ್ಬ ಅಧ್ಯಕ್ಷರು ಹೆಚ್ಚು ಸಮಯ […]

23 ಮಂದಿಗೆ ಏಕಕಾಲದಲ್ಲಿ ಜೀವಾವಧಿ ಶಿಕ್ಷೆ: ನ್ಯಾಯಲಯ ಮಹತ್ವದ ತೀರ್ಪು

ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದ ಕೊಲೆ ಪ್ರಕರಣವೊಂದರಲ್ಲಿ 23 ಜನರಿಗೆ ಇದೀಗ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.ಈ ಪ್ರಕರಣವು 20 ಬಿಘಾ (12 ಎಕರೆ) ಜಮೀನಿಗೆ ಸಂಬಂಧಿಸಿದಂತೆ 20 ವರ್ಷಗಳಷ್ಟು ಹಳೆಯದಾದ ವಿವಾದವನ್ನು ಒಳಗೊಂಡಿತ್ತು. ಬಲವಾದ ವಿಚಾರಣೆ ಮತ್ತು 20 ಸಾಕ್ಷಿಗಳ ಸಾಕ್ಷ್ಯದ ಆಧಾರದ ಮೇಲೆ 23 ಅಪರಾಧಿಗಳಿಗೆ ಶಿಕ್ಷೆ ವಿಧಿಸಲಾಯಿತು. ಅಲ್ಲದೆ, ಎಲ್ಲಾ ಆರೋಪಿಗಳಿಗೆ 85,000 ದಂಡವನ್ನು ಕೋರ್ಟ್​ ವಿಧಿಸಿದೆ. ಪ್ರಕರಣವೇನು?2017ರ ಜುಲೈ 22ರಂದು 20 ಬಿಘಾ ಗ್ರಾಮದ ಜಮೀನಿಗಾಗಿ 20 […]

ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆ, ಭೀಕರ ಭೂಕುಸಿತ: ಮಕ್ಕಳು ಸೇರಿ 20 ಮಂದಿ ಮೃತ್ಯು.

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಿರಿಕ್ ಮತ್ತು ಡಾರ್ಜಿಲಿಂಗ್ ಬೆಟ್ಟಗಳಲ್ಲಿ ಭಾನುವಾರ ನಿರಂತರ ಭಾರಿ ಮಳೆಯಿಂದಾಗಿ ಭೀಕರ ಭೂಕುಸಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಕನಿಷ್ಠ 20 ಜನ ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಪ್ರವಾಹದಲ್ಲಿ ಮನೆಗಳು ಕೊಚ್ಚಿ ಹೋಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿವೆ. ಗ್ರಾಮಗಳು ಪ್ರತ್ಯೇಕಗೊಂಡಿವೆ ಮತ್ತು ನೂರಾರು ಪ್ರವಾಸಿಗರು ಅಪಾಯದಲ್ಲಿ ಸಿಲುಕಿಕೊಂಡಿದ್ದಾರೆ. ಪೊಲೀಸರು ಮತ್ತು ಸ್ಥಳೀಯ ಆಡಳಿತ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಜಿಲ್ಲಾಡಳಿತ ಸಂಗ್ರಹಿಸಿದ ವರದಿಗಳ ಪ್ರಕಾರ, ಸರ್ಸಾಲಿ, ಜಸ್‌ಬಿರ್‌ಗಾಂವ್, […]

ಎನ್ ಡಿ ಆರ್ ಎಫ್ ಅನುದಾನ ಗ್ಯಾರಂಟಿಗಳಿಗೆ ಬಳಸುತ್ತಿಲ್ಲ-ಸಿಎಂ ಸ್ಪಷ್ಟನೆ

ಬೆಳಗಾವಿ: ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ.ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ತಪ್ಪದೇ ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಉತ್ತರಿಸುತ್ತಾ, ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ. ಬಿಜೆಪಿಯವರು ಕಾಮಾಲೆಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ. ನಮ್ಮ […]