ಬ್ಯಾಂಕ್ ಮ್ಯಾನೇಜರ್ ಕರೆ ಬಂದಾಗ ಕಾದಿತ್ತು ಶಾಕಿಂಗ್ ನ್ಯೂಸ್: ಗೊತ್ತೇ ಆಗದಂತೆ ಕಾಫಿ ನಾಡಿನ ಮಹಿಳೆಯ ₹18.24 ಲಕ್ಷ ಮಂಗಮಾಯ ಮಾಡಿದ ಸೈಬರ್ ಕಳ್ಳರು

ಚಿಕ್ಕಮಗಳೂರು: ಡಿಜಿಟಲ್ ಯುಗದಲ್ಲಿ ಮೊಬೈಲ್‌ಗೆ ಬರುವ ಓಟಿಪಿಯೇ ಭದ್ರತೆ ಎಂದು ನಂಬಿದ್ದರೆ ಅದು ಅಪಾಯಕಾರಿಯಾಗಬಹುದು ಎಂಬುದನ್ನು ಚಿಕ್ಕಮಗಳೂರಿನಲ್ಲಿ ನಡೆದ ಭಾರೀ ಸೈಬರ್ ವಂಚನೆ ಪ್ರಕರಣ ಮತ್ತೊಮ್ಮೆ ಸಾಬೀತುಪಡಿಸಿದೆ. ನಗರದ ಮಹಿಳೆಯೊಬ್ಬರ ಬ್ಯಾಂಕ್ ಖಾತೆಯಿಂದ ಬರೋಬ್ಬರಿ ₹18.24 ಲಕ್ಷ ಹಣ ಕಳ್ಳತನವಾಗಿದ್ದು, ಹಣ ಡೆಬಿಟ್ ಆದ ಕುರಿತಾಗಿ ಒಂದೇ ಒಂದು SMS ಅಥವಾ OTP ಕೂಡ ಅವರ ಮೊಬೈಲ್‌ಗೆ ಬಂದಿಲ್ಲ. ಗೊತ್ತಾಗದಂತೆ ಇಷ್ಟು ಹಣ ಮಾಯವಾದ ಪ್ರಕರಣ ರಾಜ್ಯದಲ್ಲೇ ಅಪರೂಪದ್ದಾಗಿದೆ. ನಗರದ ಐಡಿಎಫ್‌ಸಿ ಬ್ಯಾಂಕ್ ಖಾತೆ ಹೊಂದಿದ್ದ ಮಹಿಳೆ […]

ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳನ್ನು ಬಳಸಲು ಯಾವ ಅಡ್ಡಿಯೂ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳ ಬಳಕೆಯ ಕುರಿತು ಸಿಎಂ ಸಿದ್ದರಾಮಯ್ಯ ಮಹತ್ವದ ಸ್ಪಷ್ಟನೆ ನೀಡಿದ್ದು, ಪ್ರಾಥಮಿಕ ಶಾಲೆಯಿಂದ 12ನೇ ತರಗತಿವರೆಗೆ ವಿದ್ಯಾರ್ಥಿಗಳು ಸಾಂಪ್ರದಾಯಿಕವಾಗಿ ಅನುಸರಿಸುತ್ತಿರುವ ಧಾರ್ಮಿಕ ಸಂಕೇತಗಳನ್ನು ಧರಿಸಲು ಅವಕಾಶವಿದೆ ಎಂದು ತಿಳಿಸಿದ್ದಾರೆ. ಮೈಸೂರಿನ ನಿವಾಸದಲ್ಲಿ ಮೇ 14ರಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಸೇರಿದಂತೆ ಹಿಂದಿನಿಂದಲೂ ಪಾಲಿಸಿಕೊಂಡು ಬರುತ್ತಿರುವ ಧಾರ್ಮಿಕ ಸಂಪ್ರದಾಯಗಳಿಗೆ ಯಾವುದೇ ತಡೆ ಇಲ್ಲ. ಆದರೆ ಶಾಲಾ ಆವರಣದಲ್ಲಿ ಹೊಸದಾಗಿ ಯಾವುದೇ ಧಾರ್ಮಿಕ ಆಚರಣೆಗಳು ಅಥವಾ ಸಂಕೇತಗಳನ್ನು ಹುಟ್ಟುಹಾಕುವಂತಿಲ್ಲ” […]

ಕುಕ್ಕೆ ಸುಬ್ರಹ್ಮಣ್ಯ: ದೇವರ ದರ್ಶನ ಸಮಯದಲ್ಲಿ ಬದಲಾವಣೆ

ಕಡಬ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರ ಅನುಕೂಲಕ್ಕಾಗಿ ದೇವರ ದರ್ಶನ ಸಮಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ದೇವಸ್ಥಾನ ಆಡಳಿತ ಮಂಡಳಿ ಹೊಸ ವೇಳಾಪಟ್ಟಿಯನ್ನು ಜಾರಿಗೆ ತಂದಿದ್ದು, ಭಕ್ತರಿಗೆ ಇದೀಗ ಪ್ರತಿದಿನ ಹೆಚ್ಚುವರಿ ಒಂದು ಗಂಟೆ ದರ್ಶನದ ಅವಕಾಶ ದೊರೆಯಲಿದೆ. ಈ ಮೊದಲು ಮಧ್ಯಾಹ್ನ 1.30ರಿಂದ 3.30ರವರೆಗೆ ದೇವರ ದರ್ಶನವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತಿತ್ತು. ಆದರೆ ಹೊಸ ನಿರ್ಧಾರದಂತೆ ಇದೀಗ ಮಧ್ಯಾಹ್ನ 2.00ರಿಂದ 3.00ರವರೆಗೆ ಮಾತ್ರ ದೇವಸ್ಥಾನ ಬಂದ್ ಮಾಡಲಾಗುತ್ತದೆ. ಇದರಿಂದ ಮಧ್ಯಾಹ್ನದ ವೇಳೆಯಲ್ಲಿ ಭಕ್ತರಿಗೆ ಹೆಚ್ಚುವರಿ ದರ್ಶನ ಸೌಲಭ್ಯ […]

ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ: 3,250 ರೂ.ಗೆ 65 ಸಾವಿರ ರೂ. ವಿಮಾ ರಕ್ಷಣೆ! ಜೂನ್‌ನಿಂದ ಯೋಜನೆ ಜಾರಿ?

ತೋಟಗಾರಿಕಾ ಇಲಾಖೆ ವತಿಯಿಂದ ರಾಜ್ಯದ ತೆಂಗು ಬೆಳೆಗಾರರಿಗೆ ಮಹತ್ವದ ಭರವಸೆ ದೊರೆಯುವ ಸಾಧ್ಯತೆ ಇದೆ. ಹಲವು ವರ್ಷಗಳಿಂದ ರೈತರು ಕೇಳುತ್ತಿದ್ದ ತೆಂಗು ಬೆಳೆ ವಿಮೆ ಯೋಜನೆ ಇದೀಗ ಅಂತಿಮ ಹಂತ ತಲುಪಿದ್ದು, ಜೂನ್ ತಿಂಗಳಿನಿಂದ ‘ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ’ ಜಾರಿಗೆ ಬರಲಿದೆ ಎನ್ನಲಾಗಿದೆ. ಈ ಯೋಜನೆಯಡಿ ಪ್ರತಿ ಹೆಕ್ಟೇರ್ ತೆಂಗು ಬೆಳೆಗೆ 65,000 ರೂ.ವರೆಗೆ ವಿಮಾ ರಕ್ಷಣೆ ಸಿಗಲಿದ್ದು, ರೈತರು ಕೇವಲ 5% ಪ್ರೀಮಿಯಂ ಅಂದರೆ ಸುಮಾರು 3,250 ರೂ. ಪಾವತಿಸಿದರೆ ಸಾಕಾಗುತ್ತದೆ. ಪ್ರಕೃತಿ […]

ಮುಂದಿನ ಎರಡು ದಿನ ರಾಜ್ಯದ ವಿವಿದೆಡೆ ಭಾರೀ ಮಳೆಯ ಮನ್ಸೂಚನೆ, ಕರಾವಳಿಯಲ್ಲೂ ವರುಣನ ತಂಪು!

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಭಾಗಗಳಲ್ಲಿ ಮೇ 14 ಮತ್ತು 15ರಂದು ವ್ಯಾಪಕ ಮಳೆಯೊಂದಿಗೆ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇರುವುದಾಗಿ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮೇ 15ರಂದು ಮಳೆಯ ಅಬ್ಬರ ಹೆಚ್ಚಾಗುವ ನಿರೀಕ್ಷೆಯಿದೆ. ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 40 ರಿಂದ 50 […]