ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆ: ಐಎಂಡಿ

ಬೆಂಗಳೂರು: ರಾಜ್ಯದಾದ್ಯಂತ ದುರ್ಬಲ ಮುಂಗಾರು ಮುಂದುವರಿಯಲಿದೆ. ಆದರೂ, ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮುಂದಿನ 7 ದಿನಗಳ ಕಾಲ ಕರ್ನಾಟಕದಲ್ಲಿ ದುರ್ಬಲ ಮುಂಗಾರು ಇರಲಿದೆ. ಕೆಲವೆಡೆ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.ಕರಾವಳಿ ಜಿಲ್ಲೆಗಳಲ್ಲಿ ಜೂನ್ 22 ರಿಂದ 24 ರವರೆಗೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂನ್ 22, 23 ಮತ್ತು 25 ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು […]

ಜೈಲಿನಲ್ಲಿ ಯೋಗ ಮಾಡಿದ ದರ್ಶನ್, ವೈರಲ್ ಆಯ್ತು ಫೋಟೋ!

ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗಾಗಿ ವಿಶೇಷ ಯೋಗಾಭ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಮತ್ತು ಪವಿತ್ರ ಗೌಡ ಭಾಗವಹಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಜೈಲಿನ ಎಲ್ಲಾ ಕೈದಿಗಳಿಗಾಗಿ ಸಾಮೂಹಿಕ ಯೋಗಾಭ್ಯಾಸ ಹಮ್ಮಿಕೊಳ್ಳಲಾಗಿತ್ತು. ಬೆನ್ನು ನೋವಿನ ಸಮಸ್ಯೆ ಇದೆ ಎಂದು ತಿಳಿಸಿದ್ದ ನಟ ದರ್ಶನ್ ಆರಂಭದಲ್ಲಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಿಂದೇಟು ಹಾಕಿದ್ದರು ಎನ್ನಲಾಗಿದೆ. ಬಳಿಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಡಿಜಿ […]

ಸಂಚಾರ ನಿಯಮ ಉಲ್ಲಂಘನೆ, ಇಂದಿನಿಂದ ಶೇ.50 ರಷ್ಟು ರಿಯಾಯಿತಿಯಲ್ಲಿ ದಂಡ ಪಾವತಿಸಬಹುದು,ಆ್ಯಪ್‌ ಮೂಲಕವೂ ದಂಡ ಕಟ್ಟಲು ಅವಕಾಶ!

ಬೆಂಗಳೂರು : ರಾಜ್ಯಾದ್ಯಂತ ಬಾಕಿ ಉಳಿದಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ರಾಜ್ಯ ಸರ್ಕಾರ ಶೇ.50 ರಷ್ಟು ರಿಯಾಯಿತಿ ಘೋಷಿಸಿದೆ. ಜೂನ್ 21ರಿಂದ ಜುಲೈ 10ರವರೆಗೆ ಮಾತ್ರ ಈ ಸೌಲಭ್ಯ ಲಭ್ಯವಿದ್ದು, ವಾಹನ ಸವಾರರು ಬಾಕಿ ದಂಡವನ್ನು ಕಡಿಮೆ ಮೊತ್ತದಲ್ಲಿ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಕಳೆದ ವರ್ಷ ನವೆಂಬರ್ 21ರಿಂದ ಡಿಸೆಂಬರ್ 12ರವರೆಗೆ ಇದೇ ರೀತಿಯ ಶೇ.50 ರಿಯಾಯಿತಿ ನೀಡಲಾಗಿದ್ದು, ಆ ಅವಧಿಯಲ್ಲಿ 10.02 ಲಕ್ಷ ಪ್ರಕರಣಗಳಿಗೆ ಸಂಬಂಧಿಸಿದಂತೆ ₹28.35 ಕೋಟಿ ದಂಡ ಸಂಗ್ರಹವಾಗಿತ್ತು. […]

ಎಚ್ಚರ, ಬ್ಯಾಂಕ್ ಮ್ಯಾನೇಜರ್ ಗಳೂ ಹೀಗೆಲ್ಲಾ ವಂಚನೆ ಮಾಡ್ತಾರೆ, ಉದ್ಯಮಿಯಿಂದ ₹2.66 ಕೋಟಿ ದೋಚಿದ ಖಾಸಗಿ ಬ್ಯಾಂಕ್ ಮ್ಯಾನೇಜರ್ ಬಲೆಗೆ

ಬೆಂಗಳೂರು : ₹25ರಿಂದ ₹30 ಕೋಟಿ ಮೌಲ್ಯದ ವ್ಯವಹಾರ ಕೊಡಿಸುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ ₹2.66 ಕೋಟಿ ಪಡೆದು ಬ್ಯಾಂಕ್ ಮ್ಯಾನೇಜರ್ ಒಬ್ಬ ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ಮೂವರನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿನೋದ್ ಕುಮಾರ್, ಅರುಣ್ ಹಾಗೂ ಕಿರಣ್ ಎಂದು ಗುರುತಿಸಲಾಗಿದೆ. ಹೆಸರಘಟ್ಟ ಶಾಖೆಯ ಆಕ್ಸಿಸ್ ಬ್ಯಾಂಕ್‌ನ ಮ್ಯಾನೇಜರ್ ಆಗಿದ್ದ ವಿನೋದ್ ಕುಮಾರ್ ಈ ವಂಚನೆ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಲಾಜಿಸ್ಟಿಕ್ಸ್ […]

ಸಾರ್ವಜನಿಕ ಅಹವಾಲುಗಳ ಪರಿಹಾರಕ್ಕೆ ಪ್ರತ್ಯೇಕ ಸಚಿವಾಲಯದ ಭರವಸೆ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್,ರಾಜ್ಯದಲ್ಲಿ ಇನ್ನೂ ಏನೆಲ್ಲಾ ಬದಲಾವಣೆ?

ಬೆಂಗಳೂರು: ಸಾರ್ವಜನಿಕರ ಅಹವಾಲುಗಳ ಪರಿಹಾರಕ್ಕೆ ಪ್ರತ್ಯೇಕ ಸಚಿವಾಲಯ ರಚನೆ ಮಾಡಲಾಗುತ್ತಿದ್ದು, ಅದಕ್ಕೆ ಸಚಿವರನ್ನು ಕೂಡ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, ‘ಇದು ಕೇವಲ ಅರ್ಜಿಗಳನ್ನು ಸಾಗಿಸುವ ಪೋಸ್ಟ್ ಮ್ಯಾನ್ ಕೆಲಸವಲ್ಲ. ಜನರಿಗೆ ನ್ಯಾಯ ದೊರಕಿಸುವ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸಲಿದೆ’ ಎಂದು ಹೇಳಿದರು. ಈ ಪ್ರಸ್ತಾವಿತ ಸಚಿವಾಲಯವು ಅಹವಾಲು ಪರಿಹಾರ ಕಾರ್ಯಗಳನ್ನು ಸಂಯೋಜಿಸಿ, ನಾಗರಿಕರು ಹಾಗೂ ಆಡಳಿತದ ನಡುವೆ ಉತ್ತಮ ಸಂವಹನವನ್ನು ಖಚಿತಪಡಿಸಲಿದೆ. 224 ಕ್ಷೇತ್ರಗಳಲ್ಲಿ ಜನಸ್ಪಂದನಾ ಸಭೆ […]