₹25 ಕೋಟಿ ಮೌಲ್ಯದ ಮದ್ಯ ವಶಕ್ಕೆ: ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆ

ಮೈಸೂರು: ನಂಜನಗೂಡಿನಲ್ಲಿರುವ ಕಂಪನಿ ತಯಾರಿಸಿದ್ದ ಬಿಯರ್‌ನಲ್ಲಿ ಸೆಡಿಮೆಂಟ್ ಅಂಶ ಕಂಡುಬಂದಿದೆ. ಕಂಪನಿಯ ಸ್ಟ್ರಾಂಗ್ ಹಾಗೂ ಅಲ್ಟ್ರಾ ಲ್ಯಾಗರ್ ಈ ಅಂಶ ಗೋಚರಿಸಿದ್ದು, 7e ಮತ್ತು 7c ನಮೂನೆಯ (ದಿನಾಂಕ 15-07-23ರಂದು) ಬಾಟಲಿಂಗ್‌ನಲ್ಲಿರುವುದು ತಿಳಿದುಬಂದಿದೆ. ಮದ್ಯಪ್ರಿಯರ ನೆಚ್ಚಿನ ಬಿಯರ್‌ ಬ್ರ್ಯಾಂಡ್‌ವೊಂದರಲ್ಲಿ ಅಪಾಯಕಾರಿ ರಾಸಾಯನಿಕ ಅಂಶ ಪತ್ತೆಯಾಗಿದೆ. ಹೀಗಾಗಿ, 25 ಕೋಟಿ ರೂಪಾಯಿ ಮೌಲ್ಯದ 78,678 ಬಾಕ್ಸ್ ಮದ್ಯವನ್ನು ವಶಪಡಿಸಿಕೊಂಡಿರುವ ಮೈಸೂರು ಅಬಕಾರಿ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪ್ರತಿಷ್ಠಿತ ಬ್ರ್ಯಾಂಡ್​ವೊಂದರ ಬಿಯರ್​ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿದ್ದು ಕಂಪನಿಯ ವಿರುದ್ಧ ಪೊಲೀಸ್ ಕೇಸ್ […]

₹1.79 ಕೋಟಿಗೂ ಹೆಚ್ಚ ಹಣ ಸಂಗ್ರಹ : ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ತೆರೆ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ರಜೆ ಇದ್ದುದರಿಂದ ಭಾರಿ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಗಾಜಿನ ಮನೆಯ ಹೊರಾಂಗಣದಲ್ಲಿ ಆಂಬ್ಯುಲೆನ್ಸ್ ವ್ಯವಸ್ಥೆ, ಭದ್ರತಾ ಸಿಬ್ಬಂದಿ, ಸ್ವಯಂ ಸೇವಕರನ್ನು ನಿಯೋಜಿಸಲಾಗಿತ್ತು. ಭಾನುವಾರ ಒಂದೇ ದಿನ 1.25 ಲಕ್ಷ ಮಂದಿ ಆಗಮಿಸಿದ್ದು, ಪ್ರವೇಶ ಶುಲ್ಕದ ರೂಪದಲ್ಲಿ ಒಟ್ಟಾರೆ 80.50 ಲಕ್ಷ ರೂ. ಸಂಗ್ರಹವಾಗಿದೆ. ಪ್ರವೇಶ ದ್ವಾರಗಳಲ್ಲಿ ಒಳಗೂ, ಹೊರಗೂ ಭಾರಿ ಜನಸಂದಣಿ ಕಂಡುಬಂದಿತ್ತು. ಈ ರಸ್ತೆ ಮಾರ್ಗದಲ್ಲಿ ಸಂಚರಿಸುವ ಬಿಎಂಟಿಸಿ ಬಸ್‌ಗಳು, ಮೆಟ್ರೋ ರೈಲುಗಳಲ್ಲೂ ಪ್ರಯಾಣಿಕರ ಸಂಖ್ಯೆಯೂ ದುಪ್ಪಟ್ಟಾಗಿತ್ತು. […]

ಕೊಪ್ಪಳ ಜಿಲ್ಲಾ ಪಂಚಾಯಿತಿ IAS ಅಧಿಕಾರಿಯಿಂದ ಭತ್ತದ ಸಸಿ ನಾಟಿ: ರೈತರೊಂದಿಗೆ ಗದ್ದೆಗಿಳಿದ ಅಧಿಕಾರಿ

ಗಂಗಾವತಿ (ಕೊಪ್ಪಳ) :ರೈತರೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಅಧಿಕಾರಿ, ಹೊಲದಲ್ಲಿ ಟ್ರ್ಯಾಕ್ಟರ್ ಚಲಾಯಿಸಿದರು. ಇದಕ್ಕೂ ಮೊದಲು ಹೊಸಕೇರಿ ಗ್ರಾಮದ ಬೀಜ ಸಂಸ್ಕರಣಾ ಕೇಂದ್ರ, ಕೋಟಯ್ಯ ಕ್ಯಾಂಪಿನ ಅನ್ನಪೂರ್ಣ ಮಹಿಳಾ ಸಂಘದ ಕಿರು ಆಹಾರ ಉತ್ಪಾದನಾ ಘಟಕ ಹಾಗೂ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಿರುವ ರೈತ ಶೇಷಗಿರಿ ಅವರ ಹೊಲಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಗದ್ದೆಗಿಳಿದು ಸಸಿ ನಾಟಿ ಮಾಡಿದ್ದ ವಿದ್ಯಾರ್ಥಿಗಳು : ಉತ್ತರ ಕನ್ನಡದ ಅಂಕೋಲಾ ತಾಲೂಕಿನ ಶಾಲೆಯೊಂದರಲ್ಲಿ ಮಕ್ಕಳನ್ನು ಗದ್ದೆಗಿಳಿಸಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸುವ […]

ಆಕಸ್ಮಿಕವಾಗಿ ಸ್ವಚ್ಛತಾ ಕಾರ್ಮಿಕನಿಗೆ ಕಾರು ಡಿಕ್ಕಿ ಹೊಡೆದ ಹಿನ್ನೆಲೆ : ಮನೆಗೆ ಕರೆಸಿ ಕ್ಷಮೆ ಯಾಚಿಸಿದ ನಟಿ‌ ರಚಿತಾ ರಾಮ್

ಬೆಂಗಳೂರು: ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಹೋಗುವ ಸಂದರ್ಭದಲ್ಲಿ ರಚಿತಾ ರಾಮ್‌ ಅವರಿದ್ದ ಕಾರು ಸ್ವಚ್ಛತಾ ಕಾರ್ಮಿಕರೊಬ್ಬರಿಗೆ ಡಿಕ್ಕಿ ಹೊಡೆದಿತ್ತು. ಈ ಸಂದರ್ಭದಲ್ಲಿ ನಟಿ ಕಾರ್ಮಿಕನ ಬಳಿ ಕ್ಷಮೆಯಾಚಿಸದೇ ಸ್ಥಳದಿಂದ ಹೊರಟು ಹೋಗಿದ್ದರು ಎಂದು ಆರೋಪಿಸಲಾಗಿತ್ತು. ಸಾಮಾಜಿಕ ಜಾಲತಾಣ ಸೇರಿದಂತೆ ಕಾರ್ಮಿಕರ ಒಕ್ಕೂಟಗಳಿಂದಲೂ ವಿರೋಧ ವ್ಯಕ್ತವಾಗಿತ್ತು. ಕಾರು ಚಾಲಕನಿಂದಾದ ಆಕಸ್ಮಿಕ ತಪ್ಪಿನಿಂದ ನಿನ್ನೆ (ಸೋಮವಾರ) ಸ್ಯಾಂಡಲ್​ವುಡ್​ ನಟಿ​ ರಚಿತಾ ರಾಮ್ ಅವರು ಮುಜುಗರಕ್ಕೆ ಒಳಗಾಗಿದ್ದರು. ರಚಿತಾ ರಾಮ್‌ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿಯೂ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ […]

ರಾಜ್ಯ ರಾಜಧಾನಿಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಂಗಳವಾರ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಸಿದ್ದರಾಮಯ್ಯನವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಮೊದಲ ಸ್ವಾತಂತ್ರ್ಯ ದಿನಾಚರಣೆಯ ಭಾಷಣವನ್ನು ಮಾಡಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಜನಜೀವನದ ಗುಣಮಟ್ಟ ಹೆಚ್ಚಿಸಲು ಸರ್ಕಾರ ನೀಡುತ್ತಿರುವ ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಕರ್ನಾಟಕ ಸರ್ಕಾರದ ಕಲ್ಯಾಣ ಯೋಜನೆಗಳು ಸಮಯಾತೀತವಾಗಿವೆ ಮತ್ತು ಅವು ಜನರ ಜೀವನ ಮಟ್ಟವನ್ನು ಸುಧಾರಿಸುವ ಗುರಿಯನ್ನು ಹೊಂದಿವೆ. […]