ಆಗಸ್ಟ್ 27ರಂದು ರಾಜ್ಯಾದ್ಯಂತ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ : ಡಿಸಿಎಂ ಡಿಕೆ ಶಿವಕುಮಾರ್​​​​​​ ಹೇಳಿಕೆ

ಬೆಂಗಳೂರು : ಇಂದು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಆಗಸ್ಟ್ 27ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಲಾಗುತ್ತದೆ ಎಂದು ಹೇಳಿದರು. ರಾಜ್ಯ ಸರ್ಕಾರದ ‘ಬಹುನಿರೀಕ್ಷಿತ’ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್​ 27ರಂದು ಚಾಲನೆ ನೀಡಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ […]

ಸಚಿವ ಈಶ್ವರ ಖಂಡ್ರೆ ಮಾಹಿತಿ: ಕರ್ನಾಟಕದಲ್ಲಿ ಆನೆಗಳ ಸಂಖ್ಯೆ 350ರಷ್ಟು ಹೆಚ್ಚಳ

ಬೆಂಗಳೂರು : ರಾಜ್ಯದ ಆನೆಗಳ ಸಂಖ್ಯೆಯಲ್ಲಿ 350ರಷ್ಟು ಹೆಚ್ಚಳವಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಆನೆಗಳ ಗಣತಿಯ ವರದಿ ಬಿಡುಗಡೆ ಮಾಡಿ ಮಾತನಾಡಿದ ಅವರು, 2017ರಲ್ಲಿ ರಾಜ್ಯದಲ್ಲಿ ಸುಮಾರು 6049 ಆನೆಗಳಿದ್ದವು. ಈ ಬಾರಿ ಗಣತಿಯ ವೇಳೆ 6,395 ಆನೆಗಳಿವೆ ಎಂದು ಅಂದಾಜು ಮಾಡಲಾಗಿದ್ದು, ಸುಮಾರು 350ರಷ್ಟು ಹೆಚ್ಚಳವಾಗಿದೆ ಎಂದರು.ಆನೆಗಳು ಬಲಿಷ್ಠ ವನ್ಯಜೀವಿಗಳಾದರೂ ಭಾರತ ಸೇರಿದಂತೆ ವಿಶ್ವಾದ್ಯಂತ ಅಪಾಯದಲ್ಲಿವೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ […]

ಕರ್ನಾಟಕ ಬ್ಯಾಂಕ್‌ನ ಮಾಜಿ ಎಂಡಿ ಪೊಳಲಿ ಜಯರಾಮ ಭಟ್ ನಿಧನ

ಮಂಗಳೂರು: ಕರ್ಣಾಟಕ ಬ್ಯಾಂಕ್‌ನ ಮಾಜಿ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಪೊಳಲಿ ಜಯರಾಮ ಭಟ್ ಬುಧವಾರ ನಿಧನರಾದರು ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ದುರಾದೃಷ್ಟವಶಾತ್ ಕೊನೆಯುಸಿರೆಳೆದಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಪೊಳಲಿಯಲ್ಲಿ ಜನಿಸಿದ ಭಟ್ ಅವರು 1972 ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ತಮ್ಮ ಎಂಎಸ್ಸಿ ಕಾರ್ಯಕ್ರಮದಲ್ಲಿ ಉನ್ನತ ಶ್ರೇಣಿಯನ್ನು ಪಡೆಯುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದರು. ಶಿಕ್ಷಣತಜ್ಞರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿ, ಪಿ ಜಯರಾಮ ಭಟ್ ಅವರ […]

ಸೌಜನ್ಯ ಪ್ರಕರಣಕ್ಕೆ ನ್ಯಾಯ ಸಿಗುವವರೆಗೂ ಧರ್ಮಸ್ಥಳಕ್ಕೆ ಹೋಗಲ್ಲ ಎಂದು ಹೇಳಿಕೆ ನೀಡಿದ ನಟ ವಿನೋದ್ ಪ್ರಭಾಕರ್

ಬೆಂಗಳೂರು: ಕನ್ನಡ ಖ್ಯಾತ ನಟ ದಿ. ಟೈಗರ್ ಪ್ರಭಾಕಾರ್ ಮಗ ನಟ ವಿನೋದ್ ಟೈಗರ್ ಪ್ರಭಾಕರ್ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿಗೆ ನ್ಯಾಯ ಸಿಗುವವರೆಗೂ ನಾನು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯುವುದಿಲ್ಲ ಎಂದು ಬರೆದುಕೊಂಡಿದ್ದಾರೆ . ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವ ನಟ ವಿನೋದ್, ಮಹೇಶ್ ಶೆಟ್ಟಿ ಸರ್ ನಿಮ್ಮ ಕೆಲಸದ ಮೇಲೆ ನನಗೆ ಅಪಾರ ಗೌರವವಿದೆ, ನಾನು ಧರ್ಮಸ್ಥಳ ಮಂಜುನಾಥ ಮತ್ತು ಅಣ್ಣಪ್ಪನಲ್ಲಿ ಪ್ರಾರ್ಥಿಸುತ್ತೇನೆ. ಸೌಜನ್ಯ ನ್ಯಾಯ ಕೊಡಲಿ. ಸೌಜನ್ಯ ಸಾವಿಗೆ ನ್ಯಾಯ ಸಿಗುವವರೆಗೂ […]

ಪಂಚಭೂತಗಳಲ್ಲಿ ಲೀನರಾದ ಸ್ಪಂದನಾ : ಪತ್ನಿಗೆ ಕಣ್ಣೀರಿನ ಮೂಲಕ ವಿದಾಯ ಹೇಳಿದ ವಿಜಯ ರಾಘವೇಂದ್ರ

ಕನ್ನಡ ಚಿತ್ರರಂಗದ ಜನಪ್ರಿಯ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಇನ್ನು ನೆನಪು ಮಾತ್ರ. ಬ್ಯಾಂಕಾಕ್​ನಲ್ಲಿ ಹೃದಯಾಘಾತಕ್ಕೊಳಗಾಗಿ ಸ್ಪಂದನಾ ಕೊನೆಯುಸಿರೆಳೆದ ಸುದ್ದಿ ಚಿತ್ರರಂಗ ಮಾತ್ರವಲ್ಲ, ಕನ್ನಡಿಗರ ಆಘಾತಕ್ಕೆ ಕಾರಣವಾಗಿತ್ತು. ನಿನ್ನೆ (ಮಂಗಳವಾರ) ರಾತ್ರಿ ಪಾರ್ಥಿವ ಶರೀರವನ್ನು ಬ್ಯಾಂಕಾಕ್​ನಿಂದ ವಿಮಾನದ ಮೂಲಕ ಬೆಂಗಳೂರಿಗೆ ತರಲಾಗಿತ್ತು. ಮಲ್ಲೇಶ್ವರಂನ ನಿವಾಸದಲ್ಲಿ ಇಂದು ಮುಂಜಾನೆ 6 ಗಂಟೆಯಿಂದ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಅಂತ್ಯಸಂಸ್ಕಾರ ನೆರವೇರಿದ್ದು, ಪಂಚಭೂತಗಳಲ್ಲಿ ಸ್ಪಂದನಾ ಲೀನರಾಗಿದ್ದಾರೆ.ಇಂದು ಸಂಜೆ 5 ಗಂಟೆಗೆ ವಿಜಯ್ ರಾಘವೇಂದ್ರ ಅವರ ಪತ್ನಿ […]