ಗಂಡ ಕಪ್ಪೆಂದು ಅವಮಾನಿಸಿ ಪ್ರತ್ಯೇಕವಾಗಿ ವಾಸಿಸಿ ಸುಳ್ಳು ಆರೋಪ ಹೊರಿಸಿದ ಪತ್ನಿ: ಕ್ರೌರ್ಯದ ಹಿನ್ನೆಲೆಯಲ್ಲಿ ವಿವಾಹ ವಿಸರ್ಜಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಪತಿಯ ಮೈ ಬಣ್ಣವನ್ನು ‘ಕಪ್ಪು’ ಎಂದು ಅವಮಾನಿಸಿ ಪತ್ನಿ ಅದೇ ಕಾರಣಕ್ಕೆ ಆತನಿಂದ ದೂರವಿರುವುದು ಮತ್ತು ವಿಷಯವನ್ನು ಮುಚ್ಚಿಡಲು ಅಕ್ರಮ ಸಂಬಂಧಗಳ ಸುಳ್ಳು ಆರೋಪಗಳನ್ನು ಪತಿಯ ಮೇಲೆ ಹೊರಿಸುವುದು ಕ್ರೌರ್ಯದ ಪರಿಧಿಯಲ್ಲಿ ಬರುವುದು ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪತಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ವಿಭಾಗೀಯ ಪೀಠವು ಅಂಗೀಕರಿಸಿತು ಮತ್ತು ವಿಚ್ಛೇದನದ ತೀರ್ಪು ನಿರಾಕರಿಸಿದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ತಳ್ಳಿಹಾಕಿತು. “ಗಂಡ ಕಪ್ಪಾಗಿದ್ದಾನೆ ಎಂಬ ಕಾರಣಕ್ಕಾಗಿ […]

ಟೊಮೆಟೊ ಮಾರಿ ಎಸ್.ಯು.ವಿ ಖರೀದಿಸಿದ ರೈತ: ಉದ್ಯೋಗಪತಿಗಳು ಮಾತ್ರವಲ್ಲ, ರೈತರಿಗೂ ಒಂದು ಕಾಲ ಬರುವುದೆಂದು ತೋರಿದ ಟೊಮೆಟೊ!!

ಚಾಮರಾಜನಗರ: ಕೃಷಿ ಜೀವನ, ರೈತರಾಗಿರುವುದೆಂದರೆ ಸದಾ ಬಡತನದಲ್ಲೇ ದಿನಗಳೆಯುವುದು ಎನ್ನುವ ಮಾತಿಗೆ ಗಗನಕ್ಕೇರಿದ ಟೊಮೆಟೊ ಬೆಲೆ ಛಾಟಿ ಬೀಸಿದೆ. ವಿವಿಧ ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಟೊಮೆಟೊ ಬೆಳೆದು ಮಂಡಿಗಳಲ್ಲಿ ಟೊಮೆಟೋವನ್ನು ಭಾರಿ ಬೆಲೆಗೆ ಮಾರಾಟ ಮಾಡಿ ಅನೇಕ ರೈತರು ಕೋಟ್ಯಾಧಿಪತಿಗಳಾಗಿದ್ದಾರೆ. ಇದೇ ರೀತಿಯ ಘಟನೆಯಲ್ಲಿ, ಚಾಮರಾಜನಗರದ ರೈತ ರಾಜೇಶ್ ತಾನು ಬೆಳೆದ ಟೊಮೆಟೊ ಮಾರಾಟ ಮಾಡುವ ಮೂಲಕ ಸುಮಾರು 40 ಲಕ್ಷ ರೂ. ಸಂಪಾದಿಸಿದ್ದಾರೆ. ಬೆಲೆ ಹೆಚ್ಚಾಗುವ ಮೊದಲು ಅವರು ತಮ್ಮ 12 ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದಿದ್ದರು. […]

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಲುಮರದ ತಿಮ್ಮಕ್ಕ, ಆರೋಗ್ಯ ವಿಚಾರಿಸಿದ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಮನೆಯಲ್ಲಿ ಜಾರಿ ಬಿದ್ದು ಬೆನ್ನುಮೂಳೆಗೆ ಪೆಟ್ಟುಬಿದ್ದ ಕಾರಣ ಜಯನಗರದ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶತಾಯುಷಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಲುಮರದ ತಿಮ್ಮಕ್ಕರನ್ನು ಅರಣ್ಯ ಹಾಗೂ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. “ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಸಾಕಿರುವ ಮಹಾತಾಯಿಯಾದ ನಿಮಗೆ ಇಡೀ ಕರುನಾಡಿ ಜನರಷ್ಟೇ ಅಲ್ಲದೇ ವಿಶ್ವ ಪರಿಸರ ಪ್ರೇಮಿಗಳ ದಿವ್ಯ ಶುಭ ಹಾರೈಕೆ ಇದೆ. ನೀವು ಶೀಘ್ರ ಗುಣಮುಖರಾಗುತ್ತೀರಿ” ಎಂದು ಸಚಿವರು ಹಾರೈಸಿದರು. ಬೆನ್ನುಮೂಳೆಗೆ ಪೆಟ್ಟುಬಿದ್ದು […]

ಬೆಳಗಾವಿಯಲ್ಲಿ ಕಸದ ಗಾಡಿ ಹತ್ತಿ ತ್ಯಾಜ್ಯ ವಿಲೇವಾರಿ ಪರಿಶೀಲಿಸಿದ ಪಾಲಿಕೆ ಆಯುಕ್ತ

ಬೆಳಗಾವಿ :ಕೆಲವು ಕಡೆಗಳಲ್ಲಿ ಸರಿಯಾದ ಸಮಯಕ್ಕೆ ವಾಹನ ತೆರಳುತ್ತಿಲ್ಲವೆಂದು ಆಯುಕ್ತರಿಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿದ್ದವು. ಇದರಿಂದ ಎಚ್ಚೆತ್ತುಕೊಂಡ ಆಯುಕ್ತ ಅಶೋಕ ದುಡಗುಂಟಿ ಸೋಮವಾರ ಬೆಳಗ್ಗೆ 5.30ಕ್ಕೆ ಸೈಕಲ್ ಮೇಲೆ ಕಸ ಸಂಗ್ರಹಿಸುವ ವಾಹನಗಳ ಶಾಖೆಗೆ ದಿಢೀರ್ ಭೇಟಿ ನೀಡಿದ್ದರು. ನಗರದ ಕೆಲವು ವಾರ್ಡ್​ಗಳಿಗೆ ಕಸ ಸಂಗ್ರಹಿಸುವ ವಾಹನಗಳು ಹೋಗುತ್ತಿರಲಿಲ್ಲ. ಖುದ್ದು ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಫಿಲ್ಡಿಗಿಳಿಯುವ ಮೂಲಕ ಕಸ ವಿಲೇವಾರಿ‌ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಚಾಲಕರು, ಕ್ಲೀನರ್ ಗಳು ಎಷ್ಟು ಗಂಟೆಗೆ ಡ್ಯೂಟಿಗೆ […]

ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯಿದೆಯಡಿ ಸುಳ್ಳು ಪ್ರಕರಣಗಳು ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ಅಡ್ಡಿಪಡಿಸುತ್ತಿವೆ: ಕರ್ನಾಟಕ ಹೈಕೋರ್ಟ್

ಬೆಂಗಳೂರು: ಎಸ್‌ಸಿ ಮತ್ತು ಎಸ್‌ಟಿ (ದೌರ್ಜನ್ಯ ತಡೆ) ಕಾಯಿದೆ, 1989 ರ ಅಡಿಯಲ್ಲಿ ದಾಖಲಿಸಲಾದ ಸುಳ್ಳು ಪ್ರಕರಣಗಳು ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ಅಡ್ಡಿಪಡಿಸುತ್ತಿವೆ ಮತ್ತು ವಿವಿಧ ನ್ಯಾಯಾಲಯಗಳ ಅಮೂಲ್ಯ ಸಮಯವನ್ನು ಕಳೆಯುತ್ತಿವೆ ಎಂದು ಶಾಸನದ ಅಡಿಯಲ್ಲಿ ಇಬ್ಬರು ಸಹೋದರರ ವಿರುದ್ಧದ ಸಿವಿಲ್ ವಿವಾದದ ವಿಚಾರಣೆಯನ್ನು ರದ್ದುಗೊಳಿಸುವಾಗ ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಹೇಳಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅಂತಹ ಪ್ರಕರಣಗಳನ್ನು “ಕಾನೂನಿನ ಪ್ರಕ್ರಿಯೆಯ ದುರುಪಯೋಗ” ಎಂದು ಬಣ್ಣಿಸಿದ ನ್ಯಾಯಾಲಯ, “ಇವುಗಳನ್ನು ನಿಗ್ರಹಿಸಬೇಕಾಗಿದೆ, ವಿಫಲವಾದರೆ ಅವು […]