ದುನಿಯಾ ವಿಜಯ್‌! -ಧರ್ಮಸ್ಥಳ ಬಗ್ಗೆ ವಿವಾದಿತ ಹೇಳಿಕೆ

ಸೌಜನ್ಯ ಕೊಲೆ ಪ್ರಕರಣ: ನ್ಯಾಯ ಸಿಗುವವರೆಗೂ ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಕೂಡದು ಅನ್ನಿಸುತ್ತಿದೆ- ನಟ ದುನಿಯಾ ವಿಜಯ ದುನಿಯಾ ವಿಜಯ್ ಈ ಬಗ್ಗೆ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಅವರು, ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ.ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಸೌಜನ್ಯ ಕೊಲೆ ಪ್ರಕರಣದ ನ್ಯಾಯ ಸಿಗುವವರೆಗೂ […]

ಏರ್ಪೋರ್ಟ್ನಲ್ಲಿ ವಿವಿಧ ಜಾತಿಯ 47 ಹೆಬ್ಬಾವು, 2 ಹಲ್ಲಿಗಳ ಸಾಗಣೆಗೆ ಯತ್ನ.. ಸಿಕ್ಕಿಬಿದ್ದ ಆರೋಪಿ

ತಿರುಚ್ಚಿ (ತಮಿಳುನಾಡು): ತಮಿಳುನಾಡಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೊಂದರಲ್ಲಿ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 47 ಹಾವು ಮತ್ತು 2 ಹಲ್ಲಿಗಳನ್ನು ವಶಪಡಿಸಿಕೊಂಡಿದ್ದಾರೆ ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈ, ಸಿಂಗಾಪುರ, ಮಲೇಷ್ಯಾ, ಶ್ರೀಲಂಕಾ ಮುಂತಾದೆಡೆಗೆ ಪ್ರತಿನಿತ್ಯ ವಿಮಾನಯಾನ ಸೇವೆ ಇದೆ. ಕೆಲ ಪ್ರಯಾಣಿಕರು ಚಿನ್ನಾಭರಣ ಕಳ್ಳಸಾಗಣೆ ಮಾಡುವಾಗ ಅವರನ್ನು ಹಿಡಿದು ಅಧಿಕಾರಿಗಳು ವಶಪಡಿಸಿಕೊಳ್ಳುವ ಕಾರ್ಯಚರಣೆಗಳು ನಿರಂತರವಾಗಿ ನಡೆಯುತ್ತಿರುತ್ತವೆ. ಅಕ್ರಮಗಳನ್ನು ತಡೆಯಲು ಅಧಿಕಾರಿಗಳು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ನಿನ್ನೆ (ಜು.30) ಮಲೇಷ್ಯಾ ರಾಜಧಾನಿ ಕೌಲಾಲಂಪುರದಿಂದ ‘ಮಲಿಂಡೋ […]

ನಂದಿನಿ ಹಾಲು ಹಾಗೂ ಮೊಸರಿನ ದರದಲ್ಲಿ ನಾಳೆಯಿಂದ ಏರಿಕೆ

ಬೆಂಗಳೂರು:ನಾಳೆಯಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್​ ಪ್ರಕಟಣೆಯಲ್ಲಿ ತಿಳಿಸಿದೆ. ಕೆಎಂಎಫ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ಭೀಮಾನಾಯ್ಕ ಕೆಎಂಎಫ್ ಹಾಲಿನ ದರವನ್ನು ಕನಿಷ್ಠ 5 ರೂ. ಏರಿಕೆ ಮಾಡುವುದಾಗಿ ಸುಳಿವು ನೀಡಿದ್ದರು. ಜುಲೈ 21ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಾಲಿನ ದರವನ್ನು 3 ರೂಪಾಯಿಗೆ ಏರಿಕೆ ಮಾಡಲು ನಿರ್ಧಾರ ಕೈಗೊಳ್ಳಲಾಗಿತ್ತು. ನಂದಿನಿ ಹಾಲು ಪ್ರತಿ ಲೀಟರ್​ಗೆ ಹಾಗೂ ಮೊಸರಿನ ದರ ಪ್ರತಿ ಕೆಜಿಗೆ 3 ರೂಪಾಯಿ ಹಚ್ಚಳ ಮಾಡಲಾಗಿದೆ.ರಾಜ್ಯದಲ್ಲಿ […]

3.76 ಕೋಟಿ ದಾಖಲೆಯ ಹಣ ಸಂಗ್ರಹ: ಶ್ರೀರಾಘವೇಂದ್ರ ಸ್ವಾಮಿ ಮಂತ್ರಾಲಯ

ರಾಯಚೂರು: ರಾಯಚೂರಿಗೆ ಸಮೀಪಿಸಿರುವ ಮಂತ್ರಾಲಯದ ಶ್ರೀರಾಯರ ಮಠದಲ್ಲಿನ ಹುಂಡಿಗಳನ್ನು ತೆಗೆದು ಸೋಮವಾರ ಸಂಗ್ರಹವಾಗಿರುವ ಕಾಣಿಕೆಯ ಏಣಿಕೆ ನಡೆಸಲಾಯಿತು. ಬೆಳಗ್ಗೆಯಿಂದ ಸಂಜೆಯವರೆಗೂ ಎಣಿಕೆ ಕಾರ್ಯ ನಡೆದಿದ್ದು, ಇದುವರೆಗೆ ಸಂಗ್ರಹವಾಗಿದ್ದ ಮೊತ್ತಕ್ಕಿಂತಲೂ ದಾಖಲೆಯ ಪ್ರಮಾಣದಲ್ಲಿ ಹಣ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.ಕಲಿಯುಗದ ಕಾಮಧೇನು, ಭಕ್ತರ ಕಲ್ಪವೃಕ್ಷ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದ ಕಾಣಿಕೆ ಹುಂಡಿಯಲ್ಲಿ ದಾಖಲೆ ಹಣ ಸಂಗ್ರಹವಾಗಿದೆ. 3.69 ಕೋಟಿ ರೂ. ವಿವಿಧ ಮೌಲ್ಯದ ಮುಖಬೆಲೆಯ ನೋಟುಗಳು, 7.05 ಲಕ್ಷ ರೂ. ಮೌಲ್ಯದ ನಾಣ್ಯಗಳು ಸೇರಿದಂತೆ ಒಟ್ಟು 3.76 ಕೋಟಿ […]

ಬೆಲೆ ಏರಿಕೆ ಬಿಸಿ: ಲಡ್ಡು ತಯಾರಿಸಲು ನಂದಿನಿ ತುಪ್ಪಕ್ಕೆ ವಿದಾಯ ಹೇಳಿದ ತಿರುಪತಿ ತಿಮ್ಮಪ್ಪ ದೇವಸ್ಥಾನ

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ನಡೆಸುತ್ತಿರುವ ನಂದಿನಿ ಡೈರಿಯ ತುಪ್ಪವನ್ನು ಬಳಸಿ ತಿರುಪತಿ ದೇವಸ್ಥಾನದಲ್ಲಿ ತಿರುಪತಿ ಲಡ್ಡುಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ತಿಳಿಸಿದ್ದಾರೆ. ನಂದಿನಿ ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯಿಂದಾಗಿ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮತ್ತೊಂದು ಕಂಪನಿಗೆ ತುಪ್ಪದ ಗುತ್ತಿಗೆ ನೀಡಿದೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಾಯಕ್, ಆಗಸ್ಟ್ 1 ರಿಂದ ಹಾಲಿನ ದರ ಏರಿಕೆ ಮಾಡುವುದಾಗಿ ಘೋಷಿಸಿದ್ದರಿಂದ ತುಪ್ಪದ ಬೆಲೆಯೂ ಏರಿಕೆಯಾಗಲಿದೆ. ತಿರುಪತಿ ಲಡ್ಡುಗಳನ್ನು ಕಡಿಮೆ ಬೆಲೆಗೆ […]