2 ವರ್ಷದ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ: ಕೇಂದ್ರ ಎಚ್ಚರಿಕೆ

ನವದೆಹಲಿ: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ 11 ಮಕ್ಕಳು ಸಾವನ್ನಪ್ಪಿದ ನಂತರ ಎಚ್ಚೆತ್ತುಕೊಂಡ ಕೇಂದ್ರ ಆರೋಗ್ಯ ಸೇವೆಗಳ ನಿರ್ದೇಶನಾಲಯ(DGHS), ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಮತ್ತು ಶೀತಕ್ಕೆ ಸಿರಪ್ ನೀಡಬೇಡಿ ಎಂದು ಶುಕ್ರವಾರ ಎಚ್ಚರಿಕೆ ನೀಡಿದೆ. ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ಕೆಮ್ಮಿನ ಸಿರಪ್ ಸೇವಿಸಿದ ನಂತರ ಒಂಬತ್ತು ಮಕ್ಕಳ ಸಾವನ್ನಪ್ಪಿದ್ದಾರೆ. ಇದು ತೀವ್ರ ಕಳವಳವನ್ನುಂಟುಮಾಡಿದ್ದು, ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.ಇನ್ನು ರಾಜಸ್ಥಾನದ ಸಿಕಾರ್ನಲ್ಲಿ ಇದೇ ರೀತಿಯ ಸಾವುಗಳು ವರದಿಯಾಗಿದ್ದು, ಮಧ್ಯಪ್ರದೇಶ ಮತ್ತು ನೆರೆಯ ರಾಜಸ್ಥಾನದ ಆರೋಗ್ಯ ಅಧಿಕಾರಿಗಳು, ಇದಕ್ಕೆ […]
ಇಂದಿನಿಂದ ಎಲ್ಲಾ ಬ್ಯಾಂಕ್ ಗಳಲ್ಲಿ ಒಂದೇ ದಿನದಲ್ಲಿ ಚೆಕ್ ಕ್ಲಿಯರ್: ಆರ್ ಬಿಐ

ಮುಂಬಯಿ: ತ್ವರಿತ ಹಾಗೂ ಹೆಚ್ಚು ಸುರಕ್ಷಿತ ಎಲ್ಲ ಬ್ಯಾಂಕ್ಗಳು ಆ.4ರಿಂದ ಒಂದೇ ದಿನದಲ್ಲಿ ಚೆಕ್ ಕ್ಲಿಯರ್ ಮಾಡಲಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಹೇಳಿದೆ. ಚೆಕ್ ಬೌನ್ಸ್ ಆಗುವುದನ್ನು ತಡೆಗಟ್ಟಲು ಹಾಗೂ ವಿಳಂಬ ಅಥವಾ ನಿರಾಕರಣೆಗಳನ್ನು ತಪ್ಪಿಸಲು ಈ ಹೊಸ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ. ಖಾತೆದಾರರು 50,000 ರೂ.ಗಿಂತ ಹೆಚ್ಚಿನ ಚೆಕ್ಗಳನ್ನು ಠೇವಣಿ ಮಾಡುವ ಖಾತೆ ಸಂಖ್ಯೆ, ಚೆಕ್ ಸಂಖ್ಯೆ, ದಿನಾಂಕ, ಮೊತ್ತ ಮತ್ತು ಫಲಾನುಭವಿಯ ಹೆಸರನ್ನು ಬ್ಯಾಂಕಿಗೆ ಒದಗಿಸಬೇಕು. ಎಲ್ಲಾ ವಿವರಗಳು ಸರಿಯಿದ್ದರೆ ಬ್ಯಾಂಕ್ಗಳು […]
ಅಕ್ಟೋಬರ್ 4ರಿಂದ ಇಂಡಿಯನ್ ರೇಸಿಂಗ್ ಫೆಸ್ಟಿವಲ್.

ಕೊಯಮತ್ತೂರು: ಭಾರತೀಯ ರೇಸಿಂಗ್ ಉತ್ಸವವು ಇದೇ ಅಕ್ಟೋಬರ್ ಅಕ್ಟೋಬರ್ 4–5 ರಂದು ಕೊಯಮತ್ತೂರಿನ ಐಕಾನಿಕ್ ಕರಿ ಮೋಟಾರ್ ಸ್ಪೀಡ್ವೇನಲ್ಲಿ ನಡೆಯಲಿರುವ 3ನೇ ರೌಂಡ್ಗೆ ಸಜ್ಜಾಗಿದೆ. ಫ್ರಾಂಚೈಸ್ ಆಧಾರಿತ ಸರಣಿಯಾದ ಇಂಡಿಯನ್ ರೇಸಿಂಗ್ ಲೀಗ್ (IRL) ಮೇಲೆ ಗಮನ ಕೇಂದ್ರೀಕರಿಸಲಾಗುವುದು, ಜೊತೆಗೆ ಫಾರ್ಮುಲಾ 4 ಇಂಡಿಯನ್ ಚಾಂಪಿಯನ್ಶಿಪ್ ಮತ್ತು ಜೆಕೆ ಟೈರ್ ನ್ಯಾಷನಲ್ ರೇಸಿಂಗ್ ಚಾಂಪಿಯನ್ಶಿಪ್ LGB F4 ಸಹ ನಡೆಯಲಿದೆ. ಸತತ 28ನೇ ವರ್ಷದಲ್ಲಿರುವ ಜೆಕೆ ಟೈರ್ ನ್ಯಾಷನಲ್ ರೇಸಿಂಗ್ ಚಾಂಪಿಯನ್ಶಿಪ್ ದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಅತಿ […]
‘ಗಾರ್ಬಾ’ ನೃತ್ಯ ಮಾಡುವಾಗ ಏಕಾಏಕಿ ಕುಸಿದು ಬಿದ್ದು 19 ವರ್ಷದ ನವ ವಿವಾಹಿತೆ ಮೃತ್ಯು.

ಮಧ್ಯಪ್ರದೇಶ: ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ‘ಗಾರ್ಬಾ’ ನೃತ್ಯ ಕಾರ್ಯಕ್ರಮದಲ್ಲಿ 19 ವರ್ಷದ ನವವಿವಾಹಿತೆಯೊಬ್ಬರು ತನ್ನ ಪತಿಯೊಂದಿಗೆ ನೃತ್ಯ ಮಾಡುತ್ತಿದ್ದಾಗ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 55 ಕಿ.ಮೀ ದೂರದಲ್ಲಿರುವ ಬಿಕಾನ್ ಗ್ರಾಮದ ಸಂತ ಸಿಂಗಾಜಿ ದೇವಸ್ಥಾನದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಪೊಲೀಸರಿಗೆ ಈ ಕುರಿತು ಮಾಹಿತಿ ಬಂದಿಲ್ಲವಾದರೂ. ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಘಟನೆಯ ವಿಡಿಯೊದಲ್ಲಿ, ಮಹಿಳೆ ತನ್ನ ಪತಿಯೊಂದಿಗೆ ದುರ್ಗಾ ವಿಗ್ರಹದ […]
ರಾಜ್ಯ ಸರಕಾರದ ಉದ್ಯೋಗಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ

ಬೆಂಗಳೂರು; ರಾಜ್ಯ ಸರ್ಕಾರದ ಎಲ್ಲಾ ನೇಮಕಾತಿಗಳಲ್ಲಿ ಎಲ್ಲಾ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಒಂದು ಬಾರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರದ ಆದೇಶ ಹೊರಡಿಸಿದೆ. ಖಾಲಿ ಹುದ್ದೆಗಳ ಭರ್ತಿ, ನೇಮಕಾತಿಯ ವಯೋಮಿತಿ ಹೆಚ್ಚಳ ಮತ್ತು ಕೆಎಎಸ್ ಅಧಿಸೂಚನೆಯಲ್ಲಿ ಕಂಡುಬಂದಿರುವ ಕನ್ನಡ ಅನುವಾದದ ತಪ್ಪುಗಳನ್ನು ಪರಿಶೀಲಿಸಿ ಅಧಿಸೂಚನೆ ರದ್ದುಪಡಿಸಲು ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. 5 ವರ್ಷ ವಯೋಮಿತಿ ಸಡಿಲಿಕೆ ಮಾಡುವಂತೆ ಜನಪ್ರತಿನಿಧಿಗಳು, ಸಂಘಟನೆಗಳು […]