ಸಾರ್ವಜನಿಕ ಅಹವಾಲುಗಳ ಪರಿಹಾರಕ್ಕೆ ಪ್ರತ್ಯೇಕ ಸಚಿವಾಲಯದ ಭರವಸೆ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್,ರಾಜ್ಯದಲ್ಲಿ ಇನ್ನೂ ಏನೆಲ್ಲಾ ಬದಲಾವಣೆ?

ಬೆಂಗಳೂರು: ಸಾರ್ವಜನಿಕರ ಅಹವಾಲುಗಳ ಪರಿಹಾರಕ್ಕೆ ಪ್ರತ್ಯೇಕ ಸಚಿವಾಲಯ ರಚನೆ ಮಾಡಲಾಗುತ್ತಿದ್ದು, ಅದಕ್ಕೆ ಸಚಿವರನ್ನು ಕೂಡ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, ‘ಇದು ಕೇವಲ ಅರ್ಜಿಗಳನ್ನು ಸಾಗಿಸುವ ಪೋಸ್ಟ್ ಮ್ಯಾನ್ ಕೆಲಸವಲ್ಲ. ಜನರಿಗೆ ನ್ಯಾಯ ದೊರಕಿಸುವ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸಲಿದೆ’ ಎಂದು ಹೇಳಿದರು. ಈ ಪ್ರಸ್ತಾವಿತ ಸಚಿವಾಲಯವು ಅಹವಾಲು ಪರಿಹಾರ ಕಾರ್ಯಗಳನ್ನು ಸಂಯೋಜಿಸಿ, ನಾಗರಿಕರು ಹಾಗೂ ಆಡಳಿತದ ನಡುವೆ ಉತ್ತಮ ಸಂವಹನವನ್ನು ಖಚಿತಪಡಿಸಲಿದೆ. 224 ಕ್ಷೇತ್ರಗಳಲ್ಲಿ ಜನಸ್ಪಂದನಾ ಸಭೆ […]
ಫ್ರೀ ಬಸ್ ಸೇವೆ ಪಡೆಯಲು ಇನ್ನು ವೋಟರ್ ಐಡಿ ಕಡ್ಡಾಯ: ದುರ್ಬಳಕೆ ತಡೆಯಲು ಹೊಸ ಪ್ಲ್ಯಾನ್ ರೆಡಿ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ’ ಯೋಜನೆಯ ದುರ್ಬಳಕೆಯನ್ನು ತಡೆಯಲು ಸಾರಿಗೆ ಇಲಾಖೆ ಹೊಸ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ. ನಕಲಿ ದಾಖಲೆಗಳನ್ನು ಬಳಸಿ ಬೇರೆ ರಾಜ್ಯಗಳ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿರುವ ಆರೋಪಗಳ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಹೊಸ ವ್ಯವಸ್ಥೆಯಡಿ ಕರ್ನಾಟಕದ ವೋಟರ್ ಐಡಿ ಮತ್ತು ಆಧಾರ್ ಕಾರ್ಡ್ ಹೊಂದಿರುವ ಮಹಿಳೆಯರು ಹಾಗೂ ತೃತೀಯ ಲಿಂಗಿಗಳು ಮಾತ್ರ ಸ್ಮಾರ್ಟ್ ಕಾರ್ಡ್ ಪಡೆಯಲು ಅರ್ಹರಾಗಲಿದ್ದಾರೆ. ಕಾರ್ಡ್ನಲ್ಲಿ ಫಲಾನುಭವಿಯ ಹೆಸರು, ಭಾವಚಿತ್ರ, ಆಧಾರ್ ಸಂಖ್ಯೆ […]
ಆನ್ಲೈನ್ ಟ್ರೇಡಿಂಗ್ ಹೆಸರಲ್ಲಿ 20 ಲಕ್ಷ ದೋಚಿದ ಪ್ರಕರಣ: ಸಿಐಡಿ ಇನ್ಸ್ಪೆಕ್ಟರ್ ಸೇರಿ ಮೂವರ ಬಂಧನ

ಬೆಂಗಳೂರು: ಆನ್ಲೈನ್ ಟ್ರೇಡಿಂಗ್ನಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಹಣ ವಾಪಸ್ ಸಿಗುತ್ತದೆ ಎಂದು ನಂಬಿಸಿ ಕೇರಳ ಮೂಲದ ಯುವಕರಿಂದ 20 ಲಕ್ಷಕ್ಕೂ ಅಧಿಕ ಹಣ ದೋಚಿದ ಪ್ರಕರಣದಲ್ಲಿ ಸಿಐಡಿ ಇನ್ಸ್ಪೆಕ್ಟರ್ ಸೇರಿ ಮೂವರನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಿಐಡಿ ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿ, ಕುಪೇಂದ್ರ ರೆಡ್ಡಿ ಹಾಗೂ ವಸಂತ್ ಕುಮಾರ್ ಎಂದು ಗುರುತಿಸಲಾಗಿದೆ. ಇವರ ವಿರುದ್ಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಡಕಾಯಿತಿ, ಬೆದರಿಕೆ, ಹಲ್ಲೆ ಹಾಗೂ ಒಳಸಂಚು ಆರೋಪದಡಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, […]
ಧರ್ಮಸ್ಥಳ ಪ್ರಕರಣ: ತನಿಖೆ ಚುರುಕು, ನಾಪತ್ತೆಯಾದವರ ಡಿಎನ್ಎ ಹೊಂದಾಣಿಕೆ ಪ್ರಕ್ರಿಯೆ ಶುರು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್ಐಟಿ), ನಾಪತ್ತೆಯಾಗಿರುವ 17 ಮಂದಿಯ ಕುಟುಂಬಗಳ ಮಾಹಿತಿಯನ್ನು ಸಂಗ್ರಹಿಸಿ, ಬಂಗ್ಲೆಗುಡ್ಡೆ ಮೀಸಲು ಅರಣ್ಯದಲ್ಲಿ ಪತ್ತೆಯಾದ ಮಾನವ ಅವಶೇಷಗಳೊಂದಿಗೆ ಡಿಎನ್ಎ ಹೊಂದಾಣಿಕೆ ಪ್ರಕ್ರಿಯೆ ಆರಂಭಿಸಿದೆ. 2025ರಲ್ಲಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಎಸ್ಐಟಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಏಳು ಮಾನವ ತಲೆಬುರುಡೆಗಳು ಸೇರಿದಂತೆ ಹಲವು ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದವು. ಇದೇ ಪ್ರದೇಶದಿಂದ ಈ ಹಿಂದೆ ಮಾನವ ತಲೆಬುರುಡೆಯೊಂದನ್ನು ದೂರುದಾರರು ನ್ಯಾಯಾಲಯಕ್ಕೆ […]
ರೇಣುಕಾಸ್ವಾಮಿ ಕೊಲೆ ಪ್ರಕರಣ: ಈ ಕೇಸ್ ನಿಂದ ನಿವೃತ್ತಿಯಾಗಲು ಬಯಸಿದ್ದೇನೆ ಎಂದ ದರ್ಶನ್ ಪರ ವಕೀಲರು

ಬೆಂಗಳೂರು: ನಟ ದರ್ಶನ್ ಹಾಗೂ ಇತರರ ವಿರುದ್ಧದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ರೇಣುಕಾಸ್ವಾಮಿ ಅವರ ತಾಯಿ ಪಾಟೀ ಸಲ್ಲಿಸಿದ್ದ ಸವಾಲಿನ ಅರ್ಜಿಗೆ ಅವಕಾಶ ಕೋರಿ ಪ್ರಾಸಿಕ್ಯೂಷನ್ ಹೈಕೋರ್ಟ್ ಪೀಠದ ಮುಂದೆ ಅರ್ಜಿ ಸಲ್ಲಿಸಿದೆ. ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಗುರುವಾರ ವಿಚಾರಣೆ ನಡೆಸಿತು. ಈ ವೇಳೆ ದರ್ಶನ್ ಪರ ವಕೀಲ ಸುನೀಲ್ಕುಮಾರ್ ವಾದ ಮಂಡನೆಗೆ ಕಾಲಾವಕಾಶ ಕೋರಿದರು. ವಿಚಾರಣಾ ನ್ಯಾಯಾಲಯದಲ್ಲಿ ದರ್ಶನ್ ಪರವಾಗಿ ಹಾಜರಾಗುತ್ತಿದ್ದೇನೆ. ಆದರೆ, ಹೈಕೋರ್ಟ್ನಲ್ಲಿರುವ […]