ಉಕ್ರೇನ್ ದಾಳಿ; ಹೊಸ ವರ್ಷ ಸಂಭ್ರಮದಲ್ಲಿದ್ದ ರಷ್ಯಾದ 24 ಮಂದಿ ಮೃತ್ಯು!

ಕೈವ್: ರಷ್ಯಾ ಹಾಗೂ ಉಕ್ರೇನ್ ನಡುವಣ ರಾಜತಾಂತ್ರಿಕ ಮಟ್ಟದಲ್ಲಿ ಶಾಂತಿ ಮಾತುಕತೆಗಳು ನಡೆಯುತ್ತಿರುವಂತೆಯೇ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಉಕ್ರೇನ್ ಡ್ರೋನ್ ದಾಳಿಯಲ್ಲಿ 24 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಉಕ್ರೇನ್‌ನ ಖೆರ್ಸನ್ ಪ್ರದೇಶದ ರಷ್ಯಾ ಆಕ್ರಮಿತ ಹಳ್ಳಿಯಲ್ಲಿ ಹೊಸ ವರ್ಷ ಆಚರಣೆ ವೇಳೆ ಈ ಘಟನೆ ನಡೆದಿದೆ ಎಂದು ರಷ್ಯಾದ ಅಧಿಕಾರಿಗಳು ಗುರುವಾರ ಹೇಳಿದ್ದಾರೆ. ಕಪ್ಪು ಸಮುದ್ರದ ಕರಾವಳಿ ಪ್ರದೇಶವಾದ ಖೋರ್ಲಿಯಲ್ಲಿ ಕೆಫೆ ಮತ್ತು ಹೋಟೆಲ್‌ಗೆ ಡ್ರೋನ್ ಅಪ್ಪಳಿಸಿದವು ಎಂದು ಅಲ್ಲಿನ ರಷ್ಯಾದ ಪ್ರತಿನಿಧಿ ವ್ಲಾಡಿಮಿರ್ […]

ಆರ್​ಸಿಬಿಗೆ ದೊಡ್ಡ ಆಘಾತ: ಡಬ್ಲ್ಯುಪಿಎಲ್​ನಿಂದ ಹಿಂದೆ ಸರಿದ ಎಲ್ಲಿಸ್ ಪೆರ್ರಿ.!

ಮಹಿಳಾ ಪ್ರೀಮಿಯರ್​ ಲೀಗ್ ನಾಲ್ಕನೇ ಆವೃತ್ತಿ ಮುಂದಿನ ವರ್ಷ ಅಂದರೆ 2026 ರ ಜನವರಿ 9 ರಿಂದ ಆರಂಭವಾಗಲಿದೆ. ಈ ಆವೃತ್ತಿಯ ಉದ್ಘಾಟನಾ ಪಂದ್ಯ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಹಾಗೂ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ನಡುವೆ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ದೊಡ್ಡ ಆಘಾತ ಎದುರಾಗಿದೆ. ತಂಡದ ಚಾಂಪಿಯನ್ ಆಟಗಾರ್ತಿ ಆಸ್ಟ್ರೇಲಿಯಾದ ಸ್ಟಾರ್ ಆಲ್​ರೌಂಡರ್ ಎಲ್ಲಿಸ್ ಪೆರ್ರಿ ಮುಂದಿನ ಆವೃತ್ತಿಯ ಡಬ್ಲ್ಯುಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ಮುಂದಿನ ಆವೃತ್ತಿಯ ಡಬ್ಲ್ಯುಪಿಎಲ್​ನಿಂದ […]

ಹೊಸ ವರ್ಷ 2026 ಸಂಭ್ರಮಾಚರಣೆ: ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸಿ; ಸಿಎಂ ಮನವಿ

ಬೆಂಗಳೂರು: 2026ರ ಹೊಸ ವರ್ಷವನ್ನು ಅತ್ಯಂತ ಸಂತೋಷ– ಸಂಭ್ರಮದಿಂದ ಬರಮಾಡಿಕೊಳ್ಳುವ ಜೊತೆಗೆ ಸುರಕ್ಷತೆಯ ಬಗ್ಗೆಯೂ ಕಾಳಜಿ ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಹೊಸವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಿಮ್ಮ ಸುರಕ್ಷತೆಯನ್ನು ನಾವು ಆದ್ಯತೆಯಾಗಿಟ್ಟುಕೊಂಡಿದ್ದೇವೆ. ಹೀಗಾಗಿ ಹೆಚ್ಚುವರಿ ಗಸ್ತು ವ್ಯವಸ್ಥೆ, ತುರ್ತು ಪ್ರತಿಕ್ರಿಯಾ ಘಟಕ ಹಾಗೂ ಅಗತ್ಯ ಬೆಂಬಲ ವ್ಯವಸ್ಥೆಯೊಂದಿಗೆ ಬೆಂಗಳೂರು ನಗರ ಪೊಲೀಸರು ಸಕಲ ತಯಾರಿ ಮಾಡಿಕೊಂಡಿದ್ದಾರೆ’ ಎಂದು ತಿಳಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು, ಜೀವಹಾನಿಯಾಗದಂತೆ ಸಡಗರದಿಂದ ಹೊಸ […]

ದೆಹಲಿಯಲ್ಲಿ ದಟ್ಟ ಮಂಜು : 118 ವಿಮಾನಗಳ ಹಾರಾಟ ರದ್ದು, 16 ವಿಮಾನಗಳ ಮಾರ್ಗ ಬದಲಾವಣೆ!

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯವಿಮಾನ ನಿಲ್ದಾಣದಲ್ಲಿ ಮಂಗಳವಾರ ದಟ್ಟ ಮಂಜು ಕವಿದ ವಾತವರಣವಿದ್ದ ಪರಿಣಾಮ ವಿಮಾನಗಳ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ. ಕನಿಷ್ಠ 118 ವಿಮಾನಗಳನ್ನು ರದ್ದುಗೊಳಿಸಲಾಗಿದ್ದು, 16 ವಿಮಾನಗಳ ಮಾರ್ಗ ಬದಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿದಿನ 1,300 ವಿಮಾನಗಳು ಕಾರ್ಯಾಚರಣೆ ನಡೆಸುತ್ತವೆ. ದಟ್ಟ ಮಂಜು ಮತ್ತು ಕಡಿಮೆ ಗೋಚರತೆ ಕಾರಣ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ವಿಮಾನಗಳ ಹಾರಾಟದ ಮಾಹಿತಿ ನೀಡುವ ‘ಫೈಟ್‌ರಾಡಾರ್-24’ ವೆಬ್‌ಸೈಟ್‌ ವರದಿ […]

ನಿಲ್ಲಿಸಿದ್ದ ಕಾರಿನೊಳಗೆ ಟ್ಯಾಕ್ಸಿ ಚಾಲಕ ಉಸಿರುಗಟ್ಟಿ ಮೃತ್ಯು; ಅಷ್ಟಕ್ಕೂ ಆದದ್ದೇನು?

ಉತ್ತರಾಖಂಡ, ಡಿಸೆಂಬರ್ 30: ಉತ್ತರಾಖಂಡದ ನೈನಿತಾಲ್​ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಟ್ಯಾಕ್ಸಿ ಚಾಲಕನೊಬ್ಬ ನಿಲ್ಲಿಸಿದ್ದ ಕಾರಿನೊಳಗೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ವಾಹನದೊಳಗೆ ಬೆಚ್ಚಗಿರಲು ಆ ವ್ಯಕ್ತಿ ಸಣ್ಣ ಬೆಂಕಿ ಹಾಗೂ ಹೊಗೆ ಬರುವ ಸಾಧನವನ್ನು ಕಾರಿನೊಳಗೆ ಇಟ್ಟು ಮಲಗಿದ್ದರು. ವಿಷಕಾರಿ ಅನಿಲವನ್ನು ಉಸಿರಾಡಿ ಅವರು ಪ್ರಾಣ ಕಳೆದುಕೊಂಡಿದ್ದಾರೆ. ಕಾರಿನೊಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಟ್ಯಾಕ್ಸಿ ಚಾಲಕ ಪತ್ತೆಯಾಗಿದ್ದಾರೆ. ಕಾರ್ಬನ್ ಮಾನಾಕ್ಸೈಡ್ ಹೊಗೆಯಿಂದ ಉಂಟಾಗುವ ಮಾರಕ ಅಪಾಯದ ಅರಿವಿಲ್ಲದೆ ಚಾಲಕ ಮುಚ್ಚಿದ ಕಾರಿನೊಳಗೆ ಬ್ರೇಜಿಯರ್ ಉರಿಸಿದ್ದರು ಎನ್ನಲಾಗಿದೆ. […]