ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ಬೆಂಗಳೂರು: ಕನ್ನಡ ಚಿತ್ರ ನಟ ಚಿನ್ನಾರಿ ಮುತ್ತ ಖ್ಯಾತಿಯ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಹೃದಯಾಘಾತದಿಂಧ ನಿಧನರಾಗಿದ್ದಾರೆ. ಪತಿ ವಿಜಯ್ ಅವರ ಜೊತೆಗೆ ಬ್ಯಾಂಕಾಕ್ ಗೆ ತೆರಳಿದ್ದಾಗ ಅಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸುದ್ದಿ ಇಡೀ ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ. ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ […]
ತುಳು ಕೂಟದ 50ನೇ ವರ್ಷಾಚರಣೆ: ಉದ್ಯಾನ ನಗರ ಬೆಂಗಳೂರಿನಲ್ಲಿ ಕಂಬಳದ ಕೋಣದ ಓಡಿಸಲು ಭರದ ಸಿದ್ದತೆ

ಬೆಂಗಳೂರು: ಬೆಂಗಳೂರು ತುಳು ಕೂಟದ 50ನೇ ವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಕಂಬಳ ನಡೆಸುವ ಬಗ್ಗೆ ಚಿಂತನೆ ನಡೆದಿದೆ. ಇದಕ್ಕೆ ತಕ್ಕಂತೆ ಬೆಂಗಳೂರಿನಲ್ಲಿ ಕಂಬಳವನ್ನು ಆಯೋಜಿಸಲು ತಂಡ ಸಿದ್ಧವಾಗಿದೆ. ಕಂಬಳದ ಕೋಣಗಳನ್ನು ಓಡಿಸಲು ಸ್ಥಳದ ಅವಶ್ಯಕತೆ ಇದ್ದು ಇದಕ್ಕಾಗಿ ಸ್ಥಳವನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳದ ಕೋಣಗಳನ್ನು ಓಡಿಸಿ, ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯನ್ನು ಬೆಂಗಳೂರಿಗರಿಗೆ ಪರಿಚಯಿಸುವ ನಿಟ್ಟಿನಲ್ಲಿ ಕಾರ್ಯಗಳು ನಡೆಯುತ್ತಿವೆ. ಬೆಂಗಳೂರಿನಲ್ಲಿ ಕಂಬಳ ಆಯೋಜನೆ ಮಾಡುವ ಬಗ್ಗೆ ಪುತ್ತೂರು ಶಾಸಕ ಹಾಗೂ ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕೆರೆ […]
ತೆಲುಗಿನ ಜನಪ್ರಿಯ ಕ್ರಾಂತಿಕಾರಿ ಗಾಯಕ ಗುಮ್ಮಡಿ ವಿಠ್ಠಲ್ ರಾವ್ ಆಲಿಯಾಸ್ ಗದ್ದರ್ ನಿಧನ

ಹೈದರಾಬಾದ್ (ತೆಲಂಗಾಣ): ಹೃದಯ ಸಂಬಂಧಿ ಖಾಯಿಲೆಗೆ ಇವರು ಚಿಕಿತ್ಸೆ ಪಡೆಯುತ್ತಿದ್ದರು. ಪತ್ನಿ ವಿಮಲಾ ಹಾಗು ಮಕ್ಕಳಾದ ಸೂರ್ಯ, ಚಂದ್ರ ಹಾಗೂ ವೆನ್ನೆಲ ಅವರನ್ನು ಅಗಲಿದ್ದಾರೆ. ತೆಲುಗಿನ ಕ್ರಾಂತಿಕಾರಿ ಗಾಯಕರೆಂದೇ ಪ್ರಸಿದ್ಧಿ ಪಡೆದಿದ್ದ ಗದ್ದರ್ (74) ಇಂದು ಇಲ್ಲಿನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ತೆಲುಗಿನ ಕ್ರಾಂತಿಕಾರಿ ಗಾಯಕ ಗುಮ್ಮಡಿ ವಿಠ್ಠಲ್ ರಾವ್ ಆಲಿಯಾಸ್ ಗದ್ದರ್ ಅವರು ಹೈದರಾಬಾದ್ನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ‘ಗದ್ದರ್’ ಆಲ್ಬಂ: 1969ರ ತೆಲಂಗಾಣ ಚಳವಳಿಯಲ್ಲಿ ಸಕ್ರಿಯರಾಗಿದ್ದ ಗದ್ದರ್, ಪ್ರತ್ಯೇಕ ತೆಲಂಗಾಣ ರಾಜ್ಯ […]
ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ನೋಡಲು ಆಗಮಿಸಿದ ಜನಸಾಗರ

ಬೆಂಗಳೂರು : ಮೋಡ ಕವಿದ ವಾತಾವರಣ, ಮಳೆಯ ನಡುವೆಯೂ ಸಸ್ಯಕಾಶಿ ಲಾಲ್ಬಾಗ್ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಇಂದು (ಭಾನುವಾರ) ಮುಂಜಾನೆಯಿಂದಲೇ ಜನ ಸಾಗರ ಹರಿದುಬಂದಿತ್ತು.ಇಂದು ಭಾನುವಾರ ರಜಾದಿನವಾದ್ದರಿ೦ದ ಐಟಿ ಉದ್ಯೋಗಿಗಳು, ಶಾಲೆ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಕಿಕ್ಕಿರಿದು ಸೇರಿದ್ದ ಜನರು ಗಾಜಿನ ಮನೆಯೊಳಗೆ ಹಾಗೂ ಹೊರಗೆ ನಿರ್ಮಿಸಲಾದ ಹೂಗಳ ಕಲಾಕೃತಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಸೆಲ್ಫಿ ಫೋಟೊಗಳನ್ನು ತೆಗೆದುಕೊಂಡು ಸಂಭ್ರಮಿಸಿದರು ಮೊದಲ ದಿನವಾದ ಶನಿವಾರ 28 ಸಾವಿರಕ್ಕೂ ಹೆಚ್ಚು ಮಂದಿ ಆಗಮಿಸಿದ್ದು, 18.5 ಲಕ್ಷ ರೂ. ಸಂಗ್ರಹವಾಗಿದೆ […]
ಆ. 31 ಮತ್ತು ಸೆ.1ಕ್ಕೆ ಮೀಟಿಂಗ್ ನಡೆಯುವ ಸಾಧ್ಯತೆ : ಮುಂಬೈನಲ್ಲಿ ಇಂಡಿಯಾ ಮೈತ್ರಿಕೂಟದ ಮೂರನೇ ಸಭೆ

ನವದೆಹಲಿ : ಇದೀಗ ಈ ಮೈತ್ರಿ ಪಕ್ಷಗಳು ಮೂರನೇ ಬಾರಿಗೆ ಸಭೆ ನಡೆಸಲು ಮುಂದಾಗಿದ್ದು, ಬರುವ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ಮೀಟಿಂಗ್ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.ಮುಂದಿನ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಅಧಿಕಾರದಿಂದ ಕಿತ್ತೊಗೆಯಲು ವಿರೋಧ ಪಕ್ಷಗಳೆಲ್ಲ ಒಗ್ಗೂಡಿ ಇಂಡಿಯಾ (ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟ್ ಇನ್ಕ್ಲೂಸಿವ್ ಅಲೈಯನ್ಸ್) ಎಂಬ ಮೈತ್ರಿಕೂಟ ಮಾಡಿಕೊಂಡಿವೆ. ಇಂಡಿಯಾ ಮೈತ್ರಿಕೂಟವು ತನ್ನ ಮುಂದಿನ ಸಭೆಯನ್ನು ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು […]