ಕೋಲಾರ: 2,000 ಬಾಕ್ಸ್ ಟೊಮೇಟೋ ಮಾರಾಟ ಮಾಡಿ 38 ಲಕ್ಷ ರೂ ಗಳಿಸಿದ ರೈತ ಕುಟುಂಬ!!

ಕೋಲಾರ: ದೇಶಾದ್ಯಂತ ಟೊಮೇಟೊ ಬೆಲೆ ಗಗನಕ್ಕೇರುತ್ತಿರುವ ನಡುವೆಯೇ ರಾಜ್ಯದ ಕೋಲಾರ ಜಿಲ್ಲೆಯ ರೈತರ ಕುಟುಂಬವೊಂದು ಟೊಮೇಟೋ ಬೆಳೆದು ಜಾಕ್ ಪಾಟ್ ಹೊಡೆದಿದೆ. ಈ ಕುಟುಂಬವು 2,000 ಬಾಕ್ಸ್ ಟೊಮೇಟೋಗಳನ್ನು 38 ಲಕ್ಷ ರೂ ಗಳಿಗೆ ಮಾರಾಟ ಮಾಡಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಹೇಳಿದೆ. ವರದಿಯ ಪ್ರಕಾರ, ಕೋಲಾರ ಜಿಲ್ಲೆಯ ಬೇತಮಂಗಲ ಗ್ರಾಮದ ಪ್ರಭಾಕರ ಗುಪ್ತಾ ಮತ್ತು ಅವರ ಸಹೋದರರು ತಮ್ಮ 40 ಎಕರೆ ಜಮೀನಿನಲ್ಲಿ ಟೊಮೇಟೋ ಬೆಳೆದಿದ್ದಾರೆ. ಪ್ರತಿ ಕೆಜಿ ಟೊಮೇಟೊ ಬಾಕ್ಸ್ ಅನ್ನು […]

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಬೈದರ್ಕಳ ಪಾತ್ರಿ ಹಿರ್ಗಾನ ಲೋಕು ಪೂಜಾರಿ ನಿಧನ

ಕಾರ್ಕಳ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಬೈದರ್ಕಳ ಪಾತ್ರಿ ಹಿರ್ಗಾನ ಲೋಕು ಪೂಜಾರಿ (98) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ನಿಧನರಾಗಿದ್ದಾರೆ ಬೈದರ್ಕಳ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಅವರು ಹಿರ್ಗಾನ ಹಾಡಿ ಗರಡಿ ಸೇರಿದಂತೆ ಕಾರ್ಕಳ ಮತ್ತು ಜಿಲ್ಲೆಯ ಗರಡಿ ಗಳಲ್ಲಿ ಪಾತ್ರಿಯಾಗಿ ಸೇವೆ ಸಲ್ಲಿಸಿದರು. ಮೃತರಿಗೆ ಪತ್ನಿ, ಮೂವರು ಪುತ್ರರು ಮತ್ತು ಪುತ್ರಿ ಇದ್ದಾರೆ. ಇವರ ದೈವಾರಾಧನೆಯ ಸಾಧನೆ ಗಾಗಿ 2022ರಲ್ಲಿ ಉಡುಪಿ ಜಿಲ್ಲಾಡಳಿತ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು

ಆಮ್ ಆದ್ಮಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ

ಬೆಂಗಳೂರು: ಚಿತ್ರರಂಗದ ಹಿರಿಯ ನಟ ಹಾಗೂ ಪಕ್ಷದ ಮುಖಂಡ ಮುಖ್ಯಮಂತ್ರಿ ಚಂದ್ರು ಅವರನ್ನು ಆಮ್ ಆದ್ಮಿ ಪಕ್ಷದ ನೂತನ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇದುವರೆಗೆ ರಾಜ್ಯಾಧ್ಯಕ್ಷರಾಗಿದ್ದ ಪೃಥ್ವಿ ರೆಡ್ಡಿ ಅವರಿಗೆ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಹುದ್ದೆಯ ಜವಾಬ್ದಾರಿ ನೀಡಲಾಗಿದೆ. ಈ ಸಂಬಂಧ ಬುಧವಾರ ರಾತ್ರಿ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಡಾ.ಸಂದೀಪ್‌ ಪಾಠಕ್‌ ಪ್ರಕಟಣೆ ಹೊರಡಿಸಿದ್ದಾರೆ. ಈವರೆಗೆ ಪಕ್ಷದ ಪ್ರಚಾರ ಮತ್ತು ಜನಸಂಪರ್ಕ ವಿಭಾಗದ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದ ಮುಖ್ಯಮಂತ್ರಿ ಚಂದ್ರು ಅವರಿಗೆ ದೊಡ್ಡ ಜವಾಬ್ದಾರಿ ನೀಡಲಾಗಿದೆ. […]

ಗೃಹ ಜ್ಯೋತಿ ಯೋಜನೆ: ಜುಲೈ 27 ಅರ್ಜಿ ಸಲ್ಲಿಕೆಗೆ ಕೊನೆ ದಿನ

ಬೆಂಗಳೂರು: ಕಾಂಗ್ರೆಸ್ ನ ಉಚಿತ ಕ್ಗ್ಯಾರಂಟಿಗಳಲ್ಲಿ ಒಂದಾದ ಗೃಹ ಜ್ಯೋತಿ 200 ಯುನಿಟ್ ಉಚಿತ ವಿದ್ಯುತ್ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 27 ಕೊನೆ ದಿನವಾಗಿದೆ. ಇಂಧನ ಸಚಿವ ಕೆ. ಜೆ. ಜಾರ್ಜ್ ವಿಧಾನಸಭೆ ಕಲಾಪದಲ್ಲಿ ಬುಧವಾರ ಈ ಕುರಿತು ಮಾಹಿತಿ ನೀಡಿದ್ದಾರೆ. ‘ಗೃಹಜ್ಯೋತಿ’ ಯೋಜನೆ ಕುರಿತಂತೆ ನಡೆದ ಚರ್ಚೆಯ ವೇಳೆ ಸಚಿವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ಮೊದಲು ಕಡೆಯ ದಿನಾಂಕವನ್ನು ನಿಗದಿಪಡಿಸಿರಲಿಲ್ಲ. ಈಗ, ಕಡೆಯ ದಿನಾಂಕವನ್ನು ನಿಗದಿಪಡಿಸಲು […]

ಬೆಂಗಳೂರಿನ HAL ಏರ್​ಪೋರ್ಟ್​ನಲ್ಲಿ ವಿಮಾನ ತುರ್ತು ಭೂಸ್ಪರ್ಶ : ತಾಂತ್ರಿಕ ದೋಷ

ಬೆಂಗಳೂರು :ಮುಂದಿನ ಚಕ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದ ಕಾರಣ ತುರ್ತಾಗಿ ಎಚ್‌ಎಎಲ್‌ನಲ್ಲೇ ಲ್ಯಾಂಡ್ ಆಗಿದೆ. ವಿಮಾನ ತುರ್ತು ಭೂಸ್ಪರ್ಶವಾಗುವ ದೃಶ್ಯಗಳು ಮೊಬೈಲ್​ನಲ್ಲಿ ಸೆರೆಯಾಗಿವೆ. ಲ್ಯಾಂಡಿಂಗ್ ವೇಳೆ ವಿಮಾನ ಮಗುಚಿ ಬೀಳುವ ಹಂತಕ್ಕೆ ಹೋಗಿದ್ದು, ಇಬ್ಬರು ಪೈಲಟ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನೋಸ್ ಲ್ಯಾಂಡಿಂಗ್ ಗೇರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಫ್ಲೈ ಬೈ ವೈರ್ ಪ್ರೀಮಿಯರ್ 1ಎ ವಿಮಾನವು ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ವಿಮಾನ ನಿಲ್ದಾಣದಲ್ಲಿಂದು ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ತಾಂತ್ರಿಕ […]