‘KA 50 MD’ ಫ್ಯಾನ್ಸಿ ನಂಬರ್ಗಳ ಹರಾಜಿಗೆ ರಾಜ್ಯ ಸಾರಿಗೆ ಇಲಾಖೆ ಸಜ್ಜು: ಅರ್ಜಿ ಆಹ್ವಾನ; ಏ.18ರಂದು ಹಾರಾಜು ಪ್ರಕ್ರಿಯೆ

ಬೆಂಗಳೂರು: ಫ್ಯಾನ್ಸಿ ನಂಬರ್ಗಳ ಹರಾಜಿನ ಮೂಲಕ ಅಧಿಕ ಆದಾಯ ಗಳಿಸುತ್ತಿರುವ ರಾಜ್ಯ ಸಾರಿಗೆ ಇಲಾಖೆಯು ‘ಕೆಎ 50 ಎಂಡಿ’ ಸರಣಿಗೆ ಅರ್ಜಿ ಆಹ್ವಾನಿಸಿದೆ. ಏಪ್ರಿಲ್ 18ರಂದು ಹರಾಜು ಆರಂಭವಾಗಲಿದೆ. ಈ ಬಾರಿ ಕೂಡ ಸಾರಿಗೆ ಇಲಾಖೆ ಲಕ್ಷಾಂತರ ರೂಪಾಯಿ ಆದಾಯ ಗಳಿಸುವ ನಿರೀಕ್ಷೆ ಇದೆ. ಸಾರಿಗೆ ಇಲಾಖೆಯು ಕರ್ನಾಟಕ ಮೋಟಾರು ವಾಹನ ನಿಯಮಗಳು, 1989 ರ ನಿಯಮ 46 (ಎಎ) 1 ರಿಂದ 999 ರ ನಡುವಿನ ಲಘು ಮೋಟಾರು ವಾಹನಗಳಿಗೆ ಫ್ಯಾನ್ಸಿ ನೋಂದಣಿ ಸಂಖ್ಯೆಗಳನ್ನು ಹಂಚಿಕೆ […]
ವಿಜಯಪುರ: ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಬಾಲಕನನ್ನು ಯಶಸ್ವಿಯಾಗಿ ಹೊರತೆಗೆದ ರಕ್ಷಣಾ ತಂಡ

ವಿಜಯಪುರ: ಆಟವಾಡುತ್ತಿದ್ದಾಗ ತೆರೆದ ಕೊಳವೆಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಸಾತ್ವಿಕ್ ಮುಜಗೊಂಡ್ ನನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. 16 ಅಡಿ ಆಳದ ಕೊಳವೆಬಾವಿಯಲ್ಲಿ 18 ಗಂಟೆಗೂ ಹೆಚ್ಚು ಕಾಲ ಮಗು ಸಿಲುಕಿಕೊಂಡಿತ್ತು. ಇಂಡಿ ತಾಲೂಕಿನ ಲಚಯ್ಯನ ಗ್ರಾಮದಲ್ಲಿ ಬುಧವಾರ ಸಂಜೆ ಈ ಘಟನೆ ನಡೆದಿತ್ತು. ಮಾಹಿತ ತಿಳಿದ ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದರು ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಿ ಪೈಪ್ಲೈನ್ ಮೂಲಕ ಪುಟ್ಟ ಮಗುವಿಗೆ ಆಮ್ಲಜನಕವನ್ನು ಪೂರೈಸಿದ್ದರು. ಕ್ಯಾಮೆರಾ ಮೂಲಕ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆಯ […]
ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ: ಯಡಿಯೂರಪ್ಪ ಭವಿಷ್ಯ

ಬೆಂಗಳೂರು: ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಾದಿ ಅಂತ್ಯವಾಗಲಿದೆ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಮಂಗಳವಾರ ಭವಿಷ್ಯ ನುಡಿದಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಶಕ್ತಿಕೇಂದ್ರ ಪ್ರಮುಖರ ಸಭೆಯಲ್ಲಿ ಯಡಿಯೂರಪ್ಪ ಅವರು ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರಿಗೆ 60,000 ಮತಗಳ ಮುನ್ನಡೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಮ್ಮ ತವರು ಕ್ಷೇತ್ರ ವರುಣಾದಲ್ಲಿ ಮತದಾರರಿಗೆ ಕರೆ ನೀಡಿದ್ದನ್ನು ಉಲ್ಲೇಖಿಸಿ ಮಾತನಾಡಿದರು. ಸಿದ್ದರಾಮಯ್ಯನವರು ತಮ್ಮ ಸಮಯ […]
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಮುಖ್ಯ ಸಂಚುಕೋರನ ಬಂಧನ

ಬೆಂಗಳೂರು: ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Blast) ಪ್ರಕರಣದ ಆರೋಪಿ ಎನ್ನಲಾದ ಮುಜಾಮೀಲ್ ಶರೀಫ್ನನ್ನು ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಗುರುವಾರ ಬಂಧಿಸಿದ್ದು, ಪ್ರಕರಣದಲ್ಲಿ ಮೊದಲ ವ್ಯಕ್ತಿ ಬಂಧನ ಇದಾಗಿದೆ. ಮಾರ್ಚ್ 1ರಂದು ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ಸಂಚಿನಲ್ಲಿ ಮುಜಾಮಿಲ್ ಶರೀಫ್ ಭಾಗಿಯಾಗಿದ್ದ. ಬಾಂಬ್ ಇರಿಸಿದ್ದಾನೆ ಎನ್ನಲಾದ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ತಾಹಾಗೆ ಸಹಕಾರ ನೀಡಿದ್ದ ಎಂದು ಎನ್ಐಎ ಮೂಲಗಳು ಹೇಳಿವೆ. 18 ಪ್ರಮುಖ ಸ್ಥಳಗಳ ಮೇಲೆ […]
ಮಹಾರಾಷ್ಟ್ರದ ಅಂಬಾಜೋಗಿಯಲ್ಲಿ ಯಾದವ ರಾಜವಂಶದ ಎರಡು ಪುರಾತನ ದೇವಾಲಯದ ನೆಲೆಗಳು ಪತ್ತೆ

ಮುಂಬೈ: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಅಂಬಾಜೋಗಿ ಬಳಿಯ ಸಕಲೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ಉತ್ಖನನದ ಸಂದರ್ಭದಲ್ಲಿ, ಒಂದು ವಿಶಿಷ್ಟವಾದ ಉತ್ಖನನವು ಸ್ಥಳೀಯರು ಮತ್ತು ತಜ್ಞರನ್ನು ಸಹ ಬೆಚ್ಚಿಬೀಳಿಸಿದೆ. ಮಹಾರಾಷ್ಟ್ರ ಸರ್ಕಾರದ ಪುರಾತತ್ವ ಇಲಾಖೆಯು (Archeological Survey) ಮಹತ್ವದ ಉತ್ಖನನವನ್ನು ಮಾಡಿದ್ದು, ಇದನ್ನು ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಪುರಾತತ್ವ ಇಲಾಖೆಯು ಸಕಲೇಶ್ವರ ದೇವಾಲಯದ ಆವರಣದಲ್ಲಿ ಎರಡು ಪುರಾತನ ದೇವಾಲಯದ ಅಡಿಪಾಯಗಳನ್ನು ಕಂಡುಹಿಡಿದಿದ್ದು ಇದನ್ನು ‘ಬಾರಾಖಂಬಿ’ ದೇವಾಲಯ ಎಂದೂ ಕರೆಯುತ್ತಾರೆ. ದೇವಾಲಯವನ್ನು 1228 ಎ.ಡಿ ಸುಮಾರಿಗೆ ನಿರ್ಮಿಸಿರಬಹುದು. ಶಾಸನದ ಪ್ರಕಾರ ಇದನ್ನು […]