“ಒಂದು ವರ್ಷ ಚಿನ್ನ ಖರೀದಿಸಬೇಡಿ!”- ಯಾಕೆ ಗೊತ್ತಾ?

ದೇಶದ ಆರ್ಥಿಕ ಸ್ಥಿತಿಯನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಒಂದು ವರ್ಷದವರೆಗೆ ಚಿನ್ನ ಖರೀದಿಯನ್ನು ತಪ್ಪಿಸಲು ಮನವಿ ಮಾಡಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ ಹಾಗೂ ಜಾಗತಿಕ ತೈಲ ಬಿಕ್ಕಟ್ಟಿನ ಹಿನ್ನೆಲೆ ವಿದೇಶಿ ವಿನಿಮಯ ಉಳಿಸುವ ಅಗತ್ಯವಿದೆ ಎಂದು ಹೇಳಿದರು. “ದೇಶಭಕ್ತಿಯ ದೃಷ್ಟಿಯಿಂದ ವಿದೇಶಿ ವಿನಿಮಯ ಉಳಿಸೋಣ” ಎಂದು ಕರೆ ನೀಡಿದ ಅವರು, ಮದುವೆ ಸೇರಿದಂತೆ ವಿವಿಧ ಸಮಾರಂಭಗಳಲ್ಲಿ ಚಿನ್ನ ಖರೀದಿಯನ್ನು ಮಿತಿಗೊಳಿಸುವಂತೆ […]
ಮಂಗಳೂರು ರೈಲು ನಿಲ್ದಾಣದಲ್ಲಿ ಮನೆಕಳ್ಳನ ಬಂಧನ; ₹13 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಮಂಗಳೂರು: ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಕುಖ್ಯಾತ ಆರೋಪಿಯನ್ನು ಬಂಧಿಸಿ, ಸುಮಾರು ₹13 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾಂಞಗಾಡಿನ ಗಾರ್ಡ್ರವಲಪ್ಪಿಲ್ ನಿವಾಸಿ ಆಶಿಫ್ ಪಿ.ಎಚ್. (25) ಎಂದು ಗುರುತಿಸಲಾಗಿದೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ 2/3ನೇ ಪ್ಲಾಟ್ಫಾರ್ಮ್ನಲ್ಲಿ ಶಂಕಾಸ್ಪದವಾಗಿ ಸಂಚರಿಸುತ್ತಿದ್ದ ಆಶಿಫ್ನನ್ನು RPF ಹಾಗೂ ಸಿಐಬಿ ಸಿಬ್ಬಂದಿ ತಡೆದು ವಿಚಾರಣೆ ನಡೆಸಿದರು. […]
ಡಿಸೆಂಬರ್ ಅಂತ್ಯದೊಳಗೆ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ, ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಗಡಿ ಗುರುತಿಸುವಿಕೆಗೆ ಸಂಬಂಧಿಸಿದ ಆಕ್ಷೇಪಣೆ ಸಲ್ಲಿಸುವ ಅವಧಿ ಮೇ 8ರಂದು ಅಂತ್ಯಗೊಂಡಿದ್ದು, ಶೀಘ್ರದಲ್ಲೇ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದರು. ನಂತರ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನೂ ನಡೆಸಲಾಗುವುದು ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಉಂಟಾಗಿರುವ ಕುಡಿಯುವ ನೀರಿನ […]
IFS ಪರೀಕ್ಷೆಯಲ್ಲಿ ಭರ್ಜರಿ ಸಾಧನೆ ಮಾಡಿದ ಕನ್ನಡದ ಹುಡುಗರು, ಬಸವರಾಜ ಕೆಂಪವಾಡ ದೇಶಕ್ಕೆ ಫಸ್ಟ್ ರ್ಯಾಂಕ್, ಮುಖ್ಯಮಂತ್ರಿ ಅಭಿನಂದನೆ

ಬೆಂಗಳೂರು: ಭಾರತೀಯ ಅರಣ್ಯ ಸೇವೆ (IFS) ಪರೀಕ್ಷೆಯಲ್ಲಿ ಕನ್ನಡಿಗರು ಭರ್ಜರಿ ಸಾಧನೆ ಮಾಡಿದ್ದು, ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ. ಅಥಣಿ ತಾಲೂಕಿನ ಸವದಿಯ ಬಸವರಾಜ ಕೆಂಪವಾಡ ಅವರು ದೇಶಕ್ಕೆ ಪ್ರಥಮ ರ್ಯಾಂಕ್ ಪಡೆದು ಅನನ್ಯ ಸಾಧನೆ ಮಾಡಿದ್ದಾರೆ. ಇದೇ ವೇಳೆ ದೀಕ್ಷಿತ್ ಎನ್. ಅವರು 14ನೇ ರ್ಯಾಂಕ್ ಪಡೆದು ರಾಜ್ಯದ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಈ ಸಾಧನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, “ಕನ್ನಡಿಗರ ಪರಿಶ್ರಮ, ಆತ್ಮವಿಶ್ವಾಸ ಮತ್ತು ನಿರಂತರ […]
ನಿವೃತ್ತ ಅಧಿಕಾರಿಯನ್ನು ಬೀದಿಗೆ ತಳ್ಳಿ ಬಿಟ್ಟಿತು, ಆ ಒಂದು ವಾಟ್ಸಾಪ್ ಮೆಸೆಜ್: ಮೈಸೂರಿನ ಈ ಘಟನೆ ನಾಳೆ ನಮ್ಮೂರಲ್ಲೂ ಆಗಬಹುದು ಎಚ್ಚರವಾಗಿರಿ!

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಎಂದರೆ ನೆಮ್ಮದಿಯ ತಾಣ ಎಂದು ಹೇಳಲಾಗುತ್ತದೆ. ಆದರೆ ಇದೀಗ ಅದೇ ನಗರದಲ್ಲಿ ಸೈಬರ್ ಖದೀಮರು ಡಿಜಿಟಲ್ ದರೋಡೆಗೆ ಇಳಿದಿರುವ ಘಟನೆಗಳು ಹೆಚ್ಚಾಗುತ್ತಿವೆ. ನಿವೃತ್ತ ಅಧಿಕಾರಿಯನ್ನು ಬೀದಿಗೆ ತಳ್ಳಿ ಬಿಟ್ಟಿತು ಸೈಬರ್ ಕಳ್ಳರ ಆ ಒಂದು ಮೆಸೆಜ್, ಹೌದು ಕಷ್ಟಪಟ್ಟು ದುಡಿದು ನಿವೃತ್ತಿ ಜೀವನವನ್ನು ಸುಖವಾಗಿ ಕಳೆಯಬೇಕೆಂದಿದ್ದ ಅಧಿಕಾರಿಯೊಬ್ಬರು ಇದೀಗ ಕೋಟಿ ರೂಪಾಯಿ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇವಲ ಒಂದು ವಾಟ್ಸಾಪ್ ಮೆಸೇಜ್ ಇಡೀ ಬದುಕನ್ನೇ ಉಲ್ಟಾಪಲ್ಟಾ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. […]