ನಾಳೆ(ಮೇ.2) SSLC ಪರೀಕ್ಷೆ ಫಲಿತಾಂಶ ಪ್ರಕಟ.

ಬೆಂಗಳೂರು, ಮೇ 01: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸುವ ಎಸ್ಎಸ್​​ಎಲ್​ಸಿ ಪರೀಕ್ಷೆ-1 ಮುಕ್ತಾಯಗೊಂಡಿದ್ದು, ವಿದ್ಯಾರ್ಥಿಗಳು ಫಲಿತಾಂಶಕ್ಕೆ ಕಾಯುತ್ತಿದ್ದಾರೆ. ಈಗಾಗಲೇ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಶುಕ್ರವಾರ (ಮೇ.02) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲಿದೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ SSLC ಫಲಿತಾಂಶ ಲಭ್ಯವಾಗಲಿದೆ. http://karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಮಾರ್ಚ್‌, ಏಪ್ರಿಲ್ ತಿಂಗಳಲ್ಲಿ ಎಸ್‌ಎಸ್‌ಎಲ್‌ಸಿ […]

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: 2025 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 8 (ಇಂದು) ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ತಿಳಿಸಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆಗಳು ನಡೆದಿದ್ದವು. ಇಂದು ಮಂಡಳಿಯ ಕೇಂದ್ರ ಕಚೇರಿಯಲ್ಲಿ ಶಿಕ್ಷಣ ಸಚಿವರ ಸುದ್ದಿಗೋಷ್ಟಿ ನಂತರ ಮಧ್ಯಾಹ್ನ 1 ಗಂಟೆಗೆhttps://karresults.nic.in/ ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.

ಪ್ರಸಾದ್ ಶೆಣೈ ಅವರ “ನೇರಳೆ ಐಸ್ ಕ್ರೀಂ” ಕೃತಿ ವೀರಲೋಕ ಪ್ರಕಾಶನದಿಂದ ಅದ್ದೂರಿ ಬಿಡುಗಡೆ

ಬೆಂಗಳೂರು: ಯುವ ಕತೆಗಾರ, ಕನ್ನಡನಾಡಿನ ಪ್ರತಿಷ್ಠಿತ ಟೊಟೋ ಪ್ರಶಸ್ತಿ ಪುರಸ್ಕೃತ ಬರಹಗಾರ ಕಾರ್ಕಳದ ಪ್ರಸಾದ್ ಶೆಣೈ ಆರ್ ಕೆ ಅವರ ಮೂರನೇ ಕೃತಿ “ನೇರಳೆ ಐಸ್ ಕ್ರೀಂ” ಕಥಾ ಸಂಕಲನದ ಬಿಡುಗಡೆ ಕಾರ್ಯಕ್ರಮ ಸಾಹಿತ್ಯ ಯುಗಾದಿ ಭಾನುವಾರ ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಖ್ಯಾತ ಚಲನಚಿತ್ರ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ , ಕಾದಂಬರಿಗಾರ್ತಿ ಸಹನಾ ವಿಜಯ್ ಕುಮಾರ್, ವಿಮರ್ಶಕ ಬಸವರಾಜ್ ಸರಬದ, ಸಾಹಿತಿ ಡಾ.ಬೈರಮಂಗಲ ರಾಮೇಗೌಡ, ವೀರಲೋಕದ ಪ್ರತಿಷ್ಠಾನದ ವೀರಕಪುತ್ರ ಶ್ರೀನಿವಾಸ […]

ಮಾ.23 ರಂದು ಪ್ರಸಾದ್ ಶೆಣೈ ಅವರ “ನೇರಳೆ ಐಸ್ ಕ್ರೀಂ” ಕೃತಿ ಬಿಡುಗಡೆ.

ಬೆಂಗಳೂರು: ಯುವ ಕತೆಗಾರ, ಟೋಟೋ ಪ್ರಶಸ್ತಿ ಪುರಸ್ಕೃತ ಬರಹಗಾರ, ಉಡುಪಿಜಿಲ್ಲೆಯ ಕಾರ್ಕಳದ ಪ್ರಸಾದ್ ಶೆಣೈ ಅವರ ಹೊಸ ಕಥಾ ಸಂಕಲನ “ನೇರಳೆ ಐಸ್ ಕ್ರೀಂ” ಮಾ.23 ರಂದು ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಬಿಡುಗಡೆಗೊಳ್ಳಲಿದೆ. ನಾಡಿನ ಪ್ರತಿಷ್ಠಿತ, ಜನಪ್ರಿಯ ಪ್ರಕಾಶನ ಸಂಸ್ಥೆಯಾಗಿರುವ ವೀರಲೋಕ ಬುಕ್ಸ್ ಈ ಕಥಾ ಸಂಕಲನವನ್ನು ಪ್ರಕಟಿಸುತ್ತಿದೆ. ಮಾ‌23 ರಂದು ವೀರಲೋಕ ಸಂಸ್ಥೆ ಸಾಹಿತ್ಯ ಯುಗಾದಿ ಕಾರ್ಯಕ್ರಮದಲ್ಲಿ ಹತ್ತು ಲೇಖಕರ ವಿಶಿಷ್ಟ ಕೃತಿಗಳನ್ನು ಬಿಡುಗಡೆ ಮಾಡುತ್ತಿದೆ. ಈ ಕಾರ್ಯಕ್ರಮದಲ್ಲಿ ಪ್ರಸಾದ್ ಶೆಣೈ  ಅವರ “ನೇರಳೆ […]

ಮಧೂರು ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ: ಮಾ.27 ರಿಂದ ಎ.7ರ ವರೆಗೆ ಬ್ರಹ್ಮಕಲಶೋತ್ಸವ ವೈಭವ.

ಕಾಸರಗೋಡು: ಮಧೂರಿನ ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯ ಬ್ರಹ್ಮಕಲಶೋತ್ಸವಕ್ಕೆ ಸಜ್ಜುಗೊಳ್ಳುತ್ತಿದೆ. ಇದೇ 27ರಿಂದ ಏ.7ವರೆಗೆ ವಿವಿಧ ಕಾರ್ಯಕ್ರಮ ನಡೆಯಲಿವೆ.ಈ ಅವಧಿಯಲ್ಲಿ ಅಪರೂಪದ ‘ಮೂಡಪ್ಪ ಸೇವೆ’ ನಡೆಯಲಿದೆ. ಶಿವಪ್ರಸಾದ್ ತಂತ್ರಿ ದೇರೆಬೈಲು ಬ್ರಹ್ಮಕಲಶೋತ್ಸವ ಮತ್ತು ತಂತ್ರಿ ಉಳಿಯತ್ತಾಯ ವಿಷ್ಣು ಆಸ್ರ ಮೂಡಪ್ಪ ಸೇವೆಯ ನೇತೃತ್ವ ವಹಿಸಲಿದ್ದಾರೆ. ನೂತನ ಮಹಾದ್ವಾರ, ರಾಜಗೋಪುರ ಮತ್ತು ರಾಜಾಂಗಣ ಲೋಕಾರ್ಪಣೆ ಹಾಗೂ ದೇವಾಲಯದ ಆವರಣದಲ್ಲಿ ದಿನಕ್ಕೆ ಎರಡು ಧಾರ್ಮಿಕ ಸಭೆಗಳು ನಡೆಯಲಿವೆ. ಸಾಂಸ್ಕೃತಿಕ ಕಾರ್ಯಕ್ರಮ, ಶಾಸ್ತ್ರೀಯ ಸಂಗೀತ, ಯಕ್ಷಗಾನ, ತಾಳಮದ್ದಲೆ, ಹರಿಕಥೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು […]