ಸಲೂನ್ ಗೆ ಬಂದು ನೀಟಾಗಿ ಕಟ್ಟಿಂಗ್ ಮಾಡಿಸಿಕೊಂಡ ಕಪಿರಾಯ: ಕೋತಿಯ ಹೇರ್ ಕಟ್ ಚೇಷ್ಟೆಗೆ ಜನ ದಿಲ್ ಖುಷ್ !

ಚಾಮರಾಜನಗರ: ಜಿಲ್ಲೆಯ ಸಂತೇಮರಹಳ್ಳಿಯಲ್ಲಿ ನಡೆದ ಅಪರೂಪದ ಕೋತಿಪ್ರಸಂಗವೊಂದು ಸ್ಥಳೀಯರನ್ನೇ ಅಚ್ಚರಿ ಮತ್ತು ಖುಷಿಗೆ ಕಾರಣವಾಗಿದೆ. ಸಾಮಾನ್ಯವಾಗಿ ಮನುಷ್ಯರು ಮಾತ್ರ ಭೇಟಿ ನೀಡುವ ಹೇರ್ ಕಟಿಂಗ್ ಸಲೂನ್ಗೆ ಈ ಬಾರಿ ಅತಿಥಿಯಾಗಿ ಬಂದಿದ್ದು ಕೋತಿಯೊಂದು ಬಂದು, ಹೇರ್ ಕಟ್ ಮಾಡಿಸಿಕೊಂಡು ಹೋದ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಸಂತೇಮರಹಳ್ಳಿಯ ‘ದೇವು ಮೆನ್ಸ್ ಸಲೂನ್’ ಬಳಿ ಕಳೆದ ಕೆಲವು ದಿನಗಳಿಂದ ಈ ಮಂಗ ಓಡಾಡುತ್ತಿತ್ತಂತೆ. ಆದರೆ ಇತ್ತೀಚೆಗೆ ಅದು ನೇರವಾಗಿ ಸಲೂನ್ ಒಳಗೆ ಪ್ರವೇಶಿಸಿ ಕನ್ನಡಿಯ […]
ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದೆ. ಇದೀಗ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹೌದು ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. 3 ಹಿರಿಯ ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಬುಧವಾರ (ಮೇ 7) ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಹಿರಿಯ ಪೊಲೀಸ್ ಅಧಿಕಾರಿಗಳಾದ ಸಂದೀಪ್ ಪಾಟೀಲ್, […]
ಇಂದಿನಿಂದ ಮತ್ತೆ ಮಳೆಯ ಮುನ್ಸೂಚನೆ: ಯಾವೆಲ್ಲಾ ಜಿಲ್ಲೆಗಳಲ್ಲಿ ತಂಪೆರೆಯಲಿದ್ದಾನೆ ವರುಣ?

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಬಿಸಿಲಿನಿಂದ ಬಳಲುತ್ತಿದ್ದ ಜನರಿಗೆ ಇದೀಗ ಕೊಂಚ ನೆಮ್ಮದಿ ಸಿಗುವ ಲಕ್ಷಣಗಳು ಕಾಣಿಸುತ್ತಿವೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಮೈಸೂರು, ಚಾಮರಾಜನಗರ, ಹಾಸನ, ಕೊಡಗು […]
ಬೆಳಗಾವಿಯಲ್ಲಿ ಮಿಂಚಿದ ಅಕ್ಕ ಪಡೆ: ಕುತೂಹಲದಿಂದ ಕಾರ್ಯಕ್ರಮಕ್ಕೆ ಹೋದ್ರೆ ಶಾಕ್

ಬೆಳಗಾವಿ: ನಗರದಲ್ಲಿ ಅಕ್ಕ ಪಡೆ ನಡೆಸಿದ ತ್ವರಿತ ಕಾರ್ಯಾಚರಣೆಯಿಂದ ಕೇವಲ ಎರಡು ದಿನಗಳಲ್ಲಿ ಎರಡು ಬಾಲ್ಯ ವಿವಾಹಗಳನ್ನು ಯಶಸ್ವಿಯಾಗಿ ತಡೆದು ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಲಾಗಿದೆ. ಈ ಕಾರ್ಯಕ್ಕೆ ಪೊಲೀಸ್ ಅಧಿಕಾರಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬಾಲ್ಯ ವಿವಾಹ ಕಾನೂನುಬಾಹಿರವೆಂದು ತಿಳಿದಿದ್ದರೂ ಪೋಷಕರು ಮುಂದುವರಿದಿದ್ದ ಎರಡು ವಿಭಿನ್ನ ಘಟನೆಗಳಲ್ಲಿ ಅಕ್ಕ ಪಡೆ ತಕ್ಷಣ ಮಧ್ಯಪ್ರವೇಶ ಮಾಡಿ ವಿವಾಹಗಳನ್ನು ನಿಲ್ಲಿಸಿದೆ. ರಕ್ಷಿಸಲಾದ ಬಾಲಕಿಯರು 13 ಮತ್ತು 17 ವರ್ಷದವರು ಎಂದು ತಿಳಿದುಬಂದಿದೆ. ಬೆಳಗಾವಿಯ ವಂಟಮೂರಿ ಕಾಲೋನಿಯಲ್ಲಿ ಏನೋ ಕಾರ್ಯಕ್ರಮ ನಡೆಯುತ್ತಿರುವುದು […]
ಕೃಷಿ ಭೂಮಿಯಲ್ಲಿ ಮನೆ ಕಟ್ಟೋ ಪ್ಲಾನ್ ನಿಮಗಿದ್ಯಾ? ಹಾಗಾದ್ರೆ ಈ ನಿಯಮ ನಿಮಗೆ ತಿಳಿದಿರ್ಲೇಬೇಕು

ಒಂದು ಸಣ್ಣದಾದರೂ ತೋಟ, ಜಮೀನು ಖರೀದಿಸುವುದು, ಅಲ್ಲೊಂದು ಪುಟ್ಟದಾದರೂ ಮನೆ ಕಟ್ಟಿ ನೆಮ್ಮದಿಯಿಂದ ಜೀವನ ನಡೆಸೋದು ಪ್ರತಿಯೊಬ್ಬರ ಕನಸು. ಭೂಮಿ ಖರೀದಿ ಅಥವಾ ಮನೆ ನಿರ್ಮಾಣ ಮಾಡುವ ಮುನ್ನ ಬಹುತೇಕ ಜನರಿಗೆ ಎದುರಾಗುವ ಸಾಮಾನ್ಯ ಪ್ರಶ್ನೆಗಳಲ್ಲಿಕೃಷಿ ಭೂಮಿಯಲ್ಲಿ ಮನೆ ಕಟ್ಟಬಹುದೇ? ಎಂಬುದೂ ಒಂದು. ಇದರ ಉತ್ತರ ಸರಳವಾಗಿಲ್ಲ. ಕೆಲವು ಕಾನೂನು ಕ್ರಮಗಳನ್ನು ಪಾಲಿಸಿದರೆ ಮಾತ್ರ ಮನೆ ನಿರ್ಮಾಣ ಸಾಧ್ಯ. ಕೃಷಿ ಭೂಮಿ ಎಂದರೇನು? ಕೃಷಿ ಭೂಮಿ ಎಂದರೆ ಬೆಳೆ ಬೆಳೆಸಲು, ಹಣ್ಣು-ತರಕಾರಿಗಳು ಬೆಳೆಯಲು, ಹೈನುಗಾರಿಕೆ ಅಥವಾ ಕೋಳಿ […]