ಲಘು ನ್ಯುಮೋನಿಯಾ ಲಕ್ಷಣ; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ರಾತ್ರಿ ಲಘು ನ್ಯುಮೋನಿಯಾ ಲಕ್ಷಣಗಳೊಂದಿಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಸ್ತುತ ಐಸಿಯುನಲ್ಲಿರುವ ಅವರು ವೈದ್ಯಕೀಯ ನಿಗಾದಲ್ಲಿದ್ದಾರೆ ಮತ್ತು ಅವರ ಆರೋಗ್ಯ ಸ್ಥಿರವಾಗಿದೆ. ಅವರ ಉಸಿರಾಡಲು ಅನುಕೂಲವಾಗುವಂತೆ ಆಮ್ಲಜನಕ ನೀಡಲಾಗುತ್ತಿದೆ ಎಂದು ಆಸ್ಪತ್ರೆ ತಿಳಿಸಿದೆ. ಆಕೆ ಆ್ಯಂಟಿಬಯೋಟಿಕ್ಸ್ ಸೇವಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಅವರನ್ನು ವಾರ್ಡ್‌ಗೆ ಸ್ಥಳಾಂತರಿಸಲಾಗುವುದು ಎಂದು ವೈದ್ಯರು ಹೇಳಿದ್ದಾರೆ. ಮಣಿಪಾಲ ಆಸ್ಪತ್ರೆ ಹಳೆ ವಿಮಾನ ನಿಲ್ದಾಣ ರಸ್ತೆಯ ಪಲ್ಮನಾಲಜಿ ಸಮಾಲೋಚಕ ಡಾ.ಗುರುಪ್ರಸಾದ್ ಭಟ್ ಚಿಕಿತ್ಸೆ ನೀಡುತ್ತಿದ್ದಾರೆ […]

₹10 ಲಕ್ಷ ವೆಚ್ಚದಲ್ಲಿ ಅಪ್ಪು ಅಭಿಮಾನಿಯಿಂದ ಗ್ರಂಥಾಲಯ ನಿರ್ಮಾಣ

ಮೈಸೂರು : ಅಪ್ಪು (ಪುನೀತ್ ರಾಜ್‌ಕುಮಾರ್) ಅಭಿಮಾನಿಯೊಬ್ಬರು ಮೈಸೂರಿನಲ್ಲಿ ಗ್ರಂಥಾಲಯವನ್ನು ನಿರ್ಮಿಸಿದ್ದಾರೆ. ದಿ. ಪುನೀತ್​ ರಾಜ್‌ಕುಮಾರ್​ ಅವರು ಇಹಲೋಕ ತ್ಯಜಿಸಿ ಒಂದೂವರೆ ವರ್ಷ ಕಳೆಯುತ್ತಿದೆ. ನಟನ ಅಭಿಮಾನಿಗಳು ಒಂದಲ್ಲೊಂದು ರೀತಿಯ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿರುತ್ತಾರೆ. ಈ ಮೂಲಕ ಅಪ್ಪು ಅಮರ ಎಂದು ಜಗತ್ತಿಗೆ ಸಾರುತ್ತಿದ್ದಾರೆ. ಟಿ. ನರಸೀಪುರ ಬಳಿಯ ಮೇದಿನಿ ಗ್ರಾಮದ ಎಂ.ಎನ್.ಕುಮಾರ್ ಎಂಬವರು ಗ್ರಂಥಾಲಯ ನಿರ್ಮಿಸಿ ಬಡ ವಿದ್ಯಾರ್ಥಿಗಳಿಗೆ ನೆರವಾಗಿದ್ದಾರೆ. ಅಪ್ಪುವಿನ ಅಪ್ಪಟ ಅಭಿಮಾನಿಯಾಗಿರುವ ಇವರು ಅವರ ನೆನಪಿಗೋಸ್ಕರ 10 ಲಕ್ಷ ರೂಪಾಯಿ ಖರ್ಚಿನಲ್ಲಿ ಗ್ರಂಥಾಲಯ […]

ವಿಧಾನಸೌಧದ ಮುಂಭಾಗ ಯೋಗ ಪ್ರದರ್ಶನಕ್ಕೆ ಚಾಲನೆ ನೀಡಿದ ರಾಜ್ಯಪಾಲರು

ಬೆಂಗಳೂರು : 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಆಯುಷ್ಯ ಇಲಾಖೆಯಿಂದ ಇಂದು ವಿಧಾನಸೌಧದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ “ಯೋಗ-ವಸುದೈವ ಕುಟುಂಬಕ್ಕಾಗಿ” ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು. ವಸುದೈವ ಕುಟುಂಬಕ್ಕಾಗಿ ಎಂಬ ಘೋಷವಾಕ್ಯದೊಂದಿಗೆ ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಮಾತನಾಡಿದ ರಾಜ್ಯಪಾಲರು ಯೋಗದ ಮಹತ್ವವನ್ನ ತಿಳಿಸಿದರು. ” ನಮ್ಮ ಸಂಸ್ಕೃತಿಯಲ್ಲಿ ಯೋಗಕ್ಕೆ ತನ್ನದೇ ಆದ ಹೆಸರಿದೆ. ಯೋಗದ ಮಹತ್ವ ಕುರಿತು […]

ಕ್ರಮ ಕೈಗೊಳ್ಳಲು 3 ವಾರ ಕಾಲಾವಕಾಶ ನೀಡಿದ ಹೈಕೋರ್ಟ್ : ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷ, ಸದಸ್ಯರ ನೇಮಕ

ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರ ನೇಮಕ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಹೈಕೋರ್ಟ್ ಮೂರು ವಾರಗಳ ಕಾಲಾವಕಾಶ ನೀಡಿದೆ.ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಮಾಡಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಮೂರು ವಾರಗಳ ಕಾಲಾವಕಾಶ ನೀಡಿದೆ. ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್.ಕಮಲ್ ಅವರಿದ್ದ ವಿಭಾಗೀಯ ಪೀಠಕ್ಕೆ […]

ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆ ದಿನ :ಕರ್ನಾಟಕ ಗ್ರಾಮೀಣ ಬ್ಯಾಂಕ್​ ಸೇರಿದಂತೆ 8594 ಹುದ್ದೆಗೆ ನೇಮಕಾತಿ

  ಪ್ರಾದೇಶಿಕ ಬ್ಯಾಂಕಿಂಗ್​ ವಲಯದಲ್ಲಿ (ಆರ್​ಆರ್​ಬಿ) ನಡೆಯುತ್ತಿರುವ ಈ ನೇಮಕಾತಿಯಲ್ಲಿ ಒಟ್ಟು 8594 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್​ಗೆ 606 ಮತ್ತು ಕರ್ನಾಟಕ ವಿಕಾಸ್​ ಗ್ರಾಮೀಣ ಬ್ಯಾಂಕ್​​ನ ಒಟ್ಟು 200 ಹುದ್ದೆಗಳ ಭರ್ತಿಗೂ ಅಧಿಸೂಚನೆ ಹೊರಡಿಸಲಾಗಿದೆ. ದೇಶದ ವಿವಿಧ ಬ್ಯಾಂಕಿಂಗ್​ ವಲಯದಲ್ಲಿ ಖಾಲಿ ಇರುವ ಹುದ್ದೆ ನೇಮಕಾತಿಗೆ ಇನ್ಸ್​ಟಿಟ್ಯೂಟ್​ ಆಫ್​ ಬ್ಯಾಂಕಿಂಗ್​ ಪರ್ಸನಲ್​ ಸೆಲೆಕ್ಷನ್ (IBPS) ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ಜೂನ್​ 21 ಕಡೆಯ ದಿನವಾಗಿದೆ. ಹುದ್ದೆ […]