ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ಕ್ಯಾಪ್ ನಿಂದ ದೊರೆಯಿತೇ ಆರೋಪಿಯ ಸುಳಿವು?

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ (Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಗೆ (NIA) ಸ್ಫೋಟಕ ಮಾಹಿತಿ ದೊರೆತಿದ್ದು, ಆರೋಪಿಗೂ ಚೆನ್ನೈಗೂ ಸಂಬಂಧ ಇದೆ ಎನ್ನಲಾಗಿದೆ. ಸ್ಫೋಟದಿಂದ ಕೆಲ ದೂರದಲ್ಲಿ ಶಂಕಿತ ಆರೋಪಿ ತನ್ನ ಕ್ಯಾಪ್ ಬಿಟ್ಟು ಹೋಗಿದ್ದು, ಪೊಲೀಸರು ಈ ಕ್ಯಾಪ್ ಮೂಲವನ್ನು ಬೇಧಿಸಿದ್ದಾರೆ. ಇದನ್ನು ಆತ ಚೆನ್ನೈನ ಮಾಲ್ ಒಂದರಲ್ಲಿ ಖರೀದಿ ಮಾಡಿದ್ದ ಎನ್ನುವ ಮಾಹಿತಿ ತನಿಖಾ ಸಂಸ್ಥೆಗಳಿಗೆ ಲಭ್ಯವಾಗಿದೆ ಎನ್ನಲಾಗಿದೆ. ಚೆನ್ನೈನ ಮಾಲ್ನಲ್ಲಿ ಶಂಕಿತ ಟೋಪಿ ಖರೀದಿಸುತ್ತಿದ್ದ ವೇಳೆ ಆತನ ಜೊತೆ ಮತ್ತೊಬ್ಬ […]
5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅಸ್ತು: ಸೋಮವಾರದಿಂದ ಪರೀಕ್ಷೆ ಸಾಧ್ಯತೆ

ಬೆಂಗಳೂರು: ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ (Board Exams) ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್(Karnataka High Court) ವಿಭಾಗೀಯ ಪೀಠ ತೀರ್ಪು ಪ್ರಕಟಿಸಿದೆ. 5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ. ಸ್ಥಗಿತಗೊಂಡಿದ್ದ ಪರೀಕ್ಷೆ ಮುಂದುವರೆಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಮುಂದಿನ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಲು ಹೈಕೋರ್ಟ್ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ. ನ್ಯಾ. ಕೆ. ಸೋಮಶೇಖರ್, ನ್ಯಾ. ಕೆ. ರಾಜೇಶ್ ರೈ […]
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆ ವಾಪಾಸು ಕಳುಹಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಾಪಾಸು ಕಳುಹಿಸಿದ್ದಾರೆ ಎನ್ನಲಾಗಿದೆ. ಇಲಾಖೆಯ ವ್ಯಾಪ್ತಿಯಲ್ಲಿರುವ ಶ್ರೀಮಂತ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ‘ಸಾಮಾನ್ಯ ಸಂಗ್ರಹಣಾ ನಿಧಿ’ಯನ್ನು ಆದಾಯ ಇಲ್ಲದಿರುವ ‘ಸಿ’ ವರ್ಗದ ದೇವಸ್ಥಾನಗಳಿಗೆ ಬಳಸುವುದನ್ನು ಕಡ್ಡಾಯಗೊಳಿಸುವ ತಿದ್ದುಪಡಿ ಮಸೂದೆಯನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿ ಹೇಳಿದೆ. ಹೈಕೋರ್ಟ್ನ ಧಾರವಾಡ ಪೀಠವು ರಿಟ್ ಅರ್ಜಿ 3440/2005ರಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ […]
ಕೇರಳದ ಪುರಕ್ಕಾಡ್ ನಲ್ಲಿ 50 ಮೀಟರ್ ಹಿಂದೆ ಸರಿದ ಸಮುದ್ರ: ಆತಂಕದಲ್ಲಿ ರಾತ್ರಿ ಕಳೆದ ಸ್ಥಳೀಯರು

ಪುರಕ್ಕಾಡ್: ಕೇರಳದ ಪುರಕ್ಕಾಡ್ನಲ್ಲಿ ಸಮುದ್ರವು ಏಕಾಏಕಿ ತೀರದಿಂದ ಸುಮಾರು 50 ಮೀಟರ್ ಹಿಂದೆ ಸರಿದಿದ್ದು ಕರಾವಳಿ ನಿವಾಸಿಗರಲ್ಲಿ ಭಯ ಹುಟ್ಟಿಸಿದೆ. ಸ್ಥಳೀಯ ನಿವಾಸಿಗಳ ಪ್ರಕಾರ, ಅಯ್ಯಂಕೋಯಿಕ್ಕಲ್ನಿಂದ ಪುರಕ್ಕಾಡ್ ಬೀಚ್ನ ದಕ್ಷಿಣಕ್ಕೆ ಎಸ್ಡಿವಿ ಶಾಲೆಯವರೆಗೆ 500 ಮೀಟರ್ ಉದ್ದದ ತೀರದುದ್ದಕ್ಕೂ ಸಮುದ್ರವು ಹಿಂದೆಸರಿದಿದೆ. ಮಂಗಳವಾರ ಬೆಳಿಗ್ಗೆ 6.30 ಕ್ಕೆ ಈ ವಿದ್ಯಮಾನ ಘಟಿಸಿದ್ದು, ಜನರು ಆತಂಕಗೊಂಡಿದ್ದಾರೆ. 2004 ರ ಸುನಾಮಿ ಸಂದರ್ಭದಲ್ಲೂ ಇಂತಹ ವಿದ್ಯಾಮಾನ ನಡೆದಿತ್ತು ಎಂದು ಸ್ಥಳೀಯರು ನೆನಪಿಸಿಕೊಂಡಿದ್ದಾರೆ. ಸಮುದ್ರ ಹಿಂದಕ್ಕೆ ಸರಿದಿರುವ ಕಾರಣ ದಡದಲ್ಲಿ ಹೂಳು […]
ದೇಶದ ಅತ್ಯಂತ ಕಿರಿಯ ಮಿಲಿಯನೇರ್!! ನಾಲ್ಕು ತಿಂಗಳ ಮೊಮ್ಮಗನಿಗೆ 240 ಕೋಟಿ ಮೌಲ್ಯದ ಷೇರು ಉಡುಗೊರೆಯಾಗಿ ನೀಡಿದ ನಾರಾಯಣ ಮೂರ್ತಿ

ಬೆಂಗಳೂರು: ಇನ್ಫೋಸಿಸ್ (Infosys) ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಲೇಖಕಿ ಸುಧಾ ಮೂರ್ತಿ ಅವರ ಮಗ ರೋಹನ್ ಮೂರ್ತಿ ಮತ್ತು ಸೊಸೆ ಅಪರ್ಣಾ ಕೃಷ್ಣನ್ ಅವರಿಗೆ ನವೆಂಬರ್ 10, 2023 ರಂದು ಜನಿಸಿದ ಏಕಾಗ್ರಹ ರೋಹನ್ ಮೂರ್ತಿ ದೇಶದ ಅತ್ಯಂತ ಕಿರಿಯ ಮಿಲಿಯನೇರ್ ಆಗಿ ಹೊರಹೊಮ್ಮಿದ್ದಾನೆ. ನಾಲ್ಕು ತಿಂಗಳ ಮಗುವೀಗ ಇನ್ಫೋಸಿಸ್ನಲ್ಲಿ 0.04 ರಷ್ಟು ಷೇರುಗಳ ಮಾಲೀಕನಾಗಿದ್ದಾನೆ. ಏಕೆಂದರೆ, 240 ಕೋಟಿ ಮೌಲ್ಯದ ಷೇರುಗಳನ್ನು ನಾರಾಯಣ ಮೂರ್ತಿ ಮೊಮ್ಮಗನಿಗೆ ಉಡುಗೊರೆಯಾಗಿ ನೀಡಿದ್ದಾರೆ.