ಶಾಸಕ ಹರೀಶ್ ಪೂಂಜಾ ವಿರುದ್ದ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪ ಸಂಬಂಧ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧದ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠವು ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ […]
ಜೂನ್ 11 ರಂದು ಮಹಿಳೆಯರಿಗೆ ಉಚಿತ ಬಸ್ ಸಂಚಾರದ ಶಕ್ತಿ ಯೋಜನೆಗೆ ಚಾಲನೆ:

ಬೆಂಗಳೂರು: ಜೂನ್ 11 ರಂದು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿರುವ ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡುವ ಶಕ್ತಿ ಯೋಜನೆಗೆ ಚಾಲನೆ ನೀಡುವಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಜೂನ್ 9 ರಂದು ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರಿಗೆ ನಿರ್ದೇಶನ ನೀಡಿದರು. ಈ ಯೋಜನೆಯಿಂದ ಶೇ.50ರಷ್ಟು ಜನರಿಗೆ ಅನುಕೂಲವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ ಐದು ಖಾತರಿ ಯೋಜನೆಗಳಲ್ಲಿ ಇದು ಮೊದಲನೆಯದ್ದಾಗಿದ್ದು, ಕರ್ನಾಟಕದ ಜನರಿಗಾಗಿ ಇದನ್ನು […]
45 ಮರಗಳ ಸ್ಥಳಾಂತರಕ್ಕೆ ಹೈಕೋರ್ಟ್ ಅನುಮತಿ ಮೆಟ್ರೋ ಕಾಮಗಾರಿಗೆ 203 ಮರಗಳ ತೆರವು

ಬೆಂಗಳೂರು: ನಗರದ ದೂರವಾಣಿ ನಗರದಿಂದ ಕೆಂಪಾಪುರದವರೆಗಿನ ಮೆಟ್ರೋ ಮಾರ್ಗದ ಕಾಮಗಾರಿಗಾಗಿ 203 ಮರಗಳನ್ನು ತೆರವುಗೊಳಿಸುವುದು, 45 ಮರಗಳನ್ನು ಸ್ಥಳಾಂತರ ಮಾಡುವುದಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.ಮೆಟ್ರೋ ಮಾರ್ಗದ ಕಾಮಗಾರಿಗೆ ಸಂಬಂಧಿಸಿದಂತೆ ಮರಗಳ ತೆರವು ಹಾಗೂ ಸ್ಥಳಾಂತರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಟಿ. ದತ್ತಾತ್ರೇಯ ದೇವರು ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಮತ್ತು ಎಂ.ಜೆ.ಎಸ್ ಕಮಲ್ ಅವರಿದ್ದ ಪೀಠ, ಮರ ಅಧಿಕಾರಿಗೆ ಅನುಮತಿ ನೀಡಿ ಆದೇಶಿಸಿದೆ. ಮೆಟ್ರೋ […]
ಗೋಹತ್ಯೆ ವಿರೋಧಿ ಕಾನೂನಿನ ಬಗ್ಗೆ ಸಚಿವ ವೆಂಕಟೇಶ್ ವಿವಾದಿತ ಹೇಳಿಕೆ: ಮಿತಿಯಲ್ಲಿರಲು ಸೂಚಿಸಿದ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ರಾಜ್ಯದಲ್ಲಿನ ಗೋಹತ್ಯೆ ವಿರೋಧಿ ಕಾನೂನಿನ ಬಗ್ಗೆ ಕರ್ನಾಟಕ ಪಶುಸಂಗೋಪನೆ ಸಚಿವ ಕೆ ವೆಂಕಟೇಶ್ ಅವರ ಅಭಿಪ್ರಾಯಗಳಿಗಾಗಿ ಕಾಂಗ್ರೆಸ್ ಹೈಕಮಾಂಡ್ ಗುರುವಾರ ಅವರಿಗೆ ಛೀಮಾರಿ ಹಾಕಿದೆ ಮತ್ತು “ತಮ್ಮ ಮಿತಿಯೊಳಗೆ” ಇರುವಂತೆ ಹೇಳಿದೆ ಎಂದು ವರದಿಯಾಗಿದೆ. ಕರ್ನಾಟಕ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕದ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸಚಿವ ಕೆ ವೆಂಕಟೇಶ್ ಅವರಿಗೆ ತಮ್ಮ ಮಿತಿಯಲ್ಲಿರಲು ಸೂಚಿಸಿದ್ದಾರೆ. ಕೆಲ ದಿನಗಳ ಹಿಂದೆ ಕೆ.ವೆಂಕಟೇಶ್ ಅವರು ಎಮ್ಮೆ, ಹೋರಿಗಳನ್ನು ಕಡಿಯುವುದಾದರೆ ಗೋಹತ್ಯೆ ಮಾಡುವುದರಲ್ಲಿ ತಪ್ಪೇನು? […]
ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಮಗಳ ಸರಳ ವಿವಾಹ

ಬೆಂಗಳೂರು: ಉಡುಪಿ ಶ್ರೀ ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರ ಶಿಷ್ಯೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರ ಪುತ್ರಿ ವಾಙ್ಮಯಿ ಮತ್ತು ಪ್ರತೀಕ್ ಇವರ ವಿವಾಹ ಬೆಂಗಳೂರಿನ ಟ್ಯಾಮರಿಂಡ್ ಟ್ರೀ ನಲ್ಲಿ ಜೂನ್ 7 ರಂದು ನೆರವೇರಿತು. ಕೌಟುಂಬಿಕ ಸದಸ್ಯರು ಮಾತ್ರ ಹಾಜರಿದ್ದ ಈ ಸಮಾರಂಭದಲ್ಲಿ ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮತ್ತು ಈಶಪ್ರಿಯ ತೀರ್ಥ ಶ್ರೀಪಾದರು ವಧೂ ವರರಿಗೆ ಹರಸಿ ಕಳುಹಿಸಿದ ಮಧುಪರ್ಕ, ಸೀರೆ, ಶಾಲು, ಗಂಧ ಪ್ರಸಾದವನ್ನು ಮತ್ತು ಶ್ರೀಕೃಷ್ಣನಿಗೆ […]