ಹಿಂದೂ ಧಾರ್ಮಿಕ ದತ್ತಿ ಇಲಾಖಾಧೀನ ದೇವಸ್ಥಾನಗಳಲ್ಲಿ ಹಿರಿಯ ನಾಗರಿಕರಿಗೆ ನೇರ ದರ್ಶನ ವ್ಯವಸ್ಥೆ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ಅಧೀನಕ್ಕೆ ಒಳಪಡುವ ಪ್ರವರ್ಗ ‘ಎ’ ಮತ್ತು ‘ಬಿ’ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಭಕ್ತಾದಿಗಳಿಗೆ ಇನ್ನು ಮುಂದೆ ದೇವರ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ್ದ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ–ಆಗಮಿಕರ ಮತ್ತು ಉಪಾದಿವಂತರ ಒಕ್ಕೂಟದ ಸದಸ್ಯರು ಈ ಬಗ್ಗೆ ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ಧಾರ್ಮಿಕ ದತ್ತಿ ಇಲಾಖೆ ಬುಧವಾರ ಈ ಸಂಬಂಧ ಸುತ್ತೋಲೆಯೊಂದನ್ನು ಹೊರಡಿಸಿದೆ. ಹಿರಿಯ ನಾಗರಿಕರಿಗೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದು […]

ರೈತರ ಪಾಲಿಗೆ ಹುಳಿಯಾದ ಒಣದಾಕ್ಷಿ: ತೀವ್ರ ಬೆಲೆ ಕುಸಿತದಿಂದಾಗಿ ಬೆಳೆಗಾರರು ಕಂಗಾಲು; ಸರ್ಕಾರಕ್ಕೆ ಮೊರೆ

ವಿಜಯಪುರ: ದ್ರಾಕ್ಷಿಯ ಬೆಳೆಗೆ ಹೆಸರುವಾಸಿಯಾದ ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ ಒಣ ದ್ರಾಕ್ಷಿಯ ಬೆಲೆ ತೀವ್ರ ಕುಸಿತದಿಂದಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಕಳೆದ ವರ್ಷ ಒಣ ದ್ರಾಕ್ಷಿ ಕೆ.ಜಿಗೆ 150ರಿಂದ 250 ರೂ.ಗೆ ಮಾರಾಟವಾಗಿತ್ತು. ಈ ವರ್ಷ ಬೆಲೆ ತೀವ್ರ ಕುಸಿತ ಕಂಡಿದ್ದು, ದ್ರಾಕ್ಷಿ ಕೆ.ಜಿ.ಗೆ ಕೇವಲ 60ರಿಂದ 110 ರೂ.ಗೆ ಮಾರಾಟವಾಗುತ್ತಿದೆ ಎಂದು ಅಧಿಕಾರಿಗಳು ಮತ್ತು ಬೆಳೆಗಾರರ ​​ಸಂಘದವರು ತಿಳಿಸಿದ್ದಾರೆ. ಇದರಿಂದ ಉತ್ಪಾದನಾ ವೆಚ್ಚವೂ ಸಿಗದೆ ದ್ರಾಕ್ಷಿ ಬೆಳೆಗಾರರು ಕಂಗಾಲಾಗಿದ್ದಾರೆ. ತೋಟಗಾರಿಕೆ ಇಲಾಖೆ ಮೂಲಗಳ ಪ್ರಕಾರ ರಾಜ್ಯದಲ್ಲಿ […]

ಲಘು ನ್ಯುಮೋನಿಯಾ ಲಕ್ಷಣ; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ರಾತ್ರಿ ಲಘು ನ್ಯುಮೋನಿಯಾ ಲಕ್ಷಣಗಳೊಂದಿಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಸ್ತುತ ಐಸಿಯುನಲ್ಲಿರುವ ಅವರು ವೈದ್ಯಕೀಯ ನಿಗಾದಲ್ಲಿದ್ದಾರೆ ಮತ್ತು ಅವರ ಆರೋಗ್ಯ ಸ್ಥಿರವಾಗಿದೆ. ಅವರ ಉಸಿರಾಡಲು ಅನುಕೂಲವಾಗುವಂತೆ ಆಮ್ಲಜನಕ ನೀಡಲಾಗುತ್ತಿದೆ ಎಂದು ಆಸ್ಪತ್ರೆ ತಿಳಿಸಿದೆ. ಆಕೆ ಆ್ಯಂಟಿಬಯೋಟಿಕ್ಸ್ ಸೇವಿಸುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಅವರನ್ನು ವಾರ್ಡ್‌ಗೆ ಸ್ಥಳಾಂತರಿಸಲಾಗುವುದು ಎಂದು ವೈದ್ಯರು ಹೇಳಿದ್ದಾರೆ. ಮಣಿಪಾಲ ಆಸ್ಪತ್ರೆ ಹಳೆ ವಿಮಾನ ನಿಲ್ದಾಣ ರಸ್ತೆಯ ಪಲ್ಮನಾಲಜಿ ಸಮಾಲೋಚಕ ಡಾ.ಗುರುಪ್ರಸಾದ್ ಭಟ್ ಚಿಕಿತ್ಸೆ ನೀಡುತ್ತಿದ್ದಾರೆ […]

₹10 ಲಕ್ಷ ವೆಚ್ಚದಲ್ಲಿ ಅಪ್ಪು ಅಭಿಮಾನಿಯಿಂದ ಗ್ರಂಥಾಲಯ ನಿರ್ಮಾಣ

ಮೈಸೂರು : ಅಪ್ಪು (ಪುನೀತ್ ರಾಜ್‌ಕುಮಾರ್) ಅಭಿಮಾನಿಯೊಬ್ಬರು ಮೈಸೂರಿನಲ್ಲಿ ಗ್ರಂಥಾಲಯವನ್ನು ನಿರ್ಮಿಸಿದ್ದಾರೆ. ದಿ. ಪುನೀತ್​ ರಾಜ್‌ಕುಮಾರ್​ ಅವರು ಇಹಲೋಕ ತ್ಯಜಿಸಿ ಒಂದೂವರೆ ವರ್ಷ ಕಳೆಯುತ್ತಿದೆ. ನಟನ ಅಭಿಮಾನಿಗಳು ಒಂದಲ್ಲೊಂದು ರೀತಿಯ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿರುತ್ತಾರೆ. ಈ ಮೂಲಕ ಅಪ್ಪು ಅಮರ ಎಂದು ಜಗತ್ತಿಗೆ ಸಾರುತ್ತಿದ್ದಾರೆ. ಟಿ. ನರಸೀಪುರ ಬಳಿಯ ಮೇದಿನಿ ಗ್ರಾಮದ ಎಂ.ಎನ್.ಕುಮಾರ್ ಎಂಬವರು ಗ್ರಂಥಾಲಯ ನಿರ್ಮಿಸಿ ಬಡ ವಿದ್ಯಾರ್ಥಿಗಳಿಗೆ ನೆರವಾಗಿದ್ದಾರೆ. ಅಪ್ಪುವಿನ ಅಪ್ಪಟ ಅಭಿಮಾನಿಯಾಗಿರುವ ಇವರು ಅವರ ನೆನಪಿಗೋಸ್ಕರ 10 ಲಕ್ಷ ರೂಪಾಯಿ ಖರ್ಚಿನಲ್ಲಿ ಗ್ರಂಥಾಲಯ […]

ವಿಧಾನಸೌಧದ ಮುಂಭಾಗ ಯೋಗ ಪ್ರದರ್ಶನಕ್ಕೆ ಚಾಲನೆ ನೀಡಿದ ರಾಜ್ಯಪಾಲರು

ಬೆಂಗಳೂರು : 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಆಯುಷ್ಯ ಇಲಾಖೆಯಿಂದ ಇಂದು ವಿಧಾನಸೌಧದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ “ಯೋಗ-ವಸುದೈವ ಕುಟುಂಬಕ್ಕಾಗಿ” ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು. ವಸುದೈವ ಕುಟುಂಬಕ್ಕಾಗಿ ಎಂಬ ಘೋಷವಾಕ್ಯದೊಂದಿಗೆ ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಾಲನೆ ನೀಡಿದರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಮಾತನಾಡಿದ ರಾಜ್ಯಪಾಲರು ಯೋಗದ ಮಹತ್ವವನ್ನ ತಿಳಿಸಿದರು. ” ನಮ್ಮ ಸಂಸ್ಕೃತಿಯಲ್ಲಿ ಯೋಗಕ್ಕೆ ತನ್ನದೇ ಆದ ಹೆಸರಿದೆ. ಯೋಗದ ಮಹತ್ವ ಕುರಿತು […]