ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರತಿದಿನ ಸಂವಿಧಾನದ ಪೀಠಿಕೆ ಓದಲು ಆದೇಶ: ಡಾ. ಎಚ್ಸಿ ಮಹದೇವಪ್ಪ

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಪ್ರತಿದಿನ ವಿದ್ಯಾರ್ಥಿಗಳೆಲ್ಲರೂ ಸಂವಿಧಾನದ ಪೀಠಿಕೆ ಓದುವಂತೆ ಪೂರಕ ಆದೇಶ ನೀಡಲು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಗುರುವಾರದಂದು ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ಎಲ್ಲರೂ ಸಂವಿಧಾನದಲ್ಲಿ ಸೂಚಿತ ಮಾರ್ಗದಲ್ಲಿ ಕೆಲಸ ಮಾಡಲು ಸೂಚಿಸಿದರು. ಇದೇ ವೇಳೆ ರಾಜ್ಯದ ಎಲ್ಲಾ ಶಾಲೆ ಕಾಲೇಜು ಮತ್ತು ವಿಶ್ವವಿದ್ಯಾಲಯದಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಓದಿಸುವುದಕ್ಕೆ ಪೂರಕ ಆದೇಶ ಹೊರಡಿಸಲು […]
ಅರಣ್ಯಕ್ಕೆ ಸಂಬಂಧಿಸಿದ ಕೇಳರಿಯದ ಕನ್ನಡ ಪದ ಪರಿಚಯ: ಅರಣ್ಯ ಇಲಾಖೆಯಿಂದ ವಿನೂತನ ಪ್ರಯತ್ನ!!

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯು ತನ್ನ ವಿನೂತನ ಪ್ರಯತ್ನದಲ್ಲಿ ಕೇಳರಿಯದ ಕನ್ನಡದ ಪದಗಳನ್ನು ಜನರಿಗೆ ಪರಿಚಯಿಸುವ ಕಾರ್ಯಕ್ಕೆ ಮುನ್ನುಡಿ ಬರೆದಿದೆ. ತನ್ನ ಟ್ವಿಟ್ವರ್ ಹ್ಯಾಂಡಲ್ ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅರಣ್ಯ ಇಲಾಖೆಯು “ಕೇಳರಿಯದ ಕನ್ನಡ ಪದ ಪರಿಚಯ. ಇಂದಿನಿಂದ ಪ್ರತಿವಾರ ಅರಣ್ಯಕ್ಕೆ ಸಂಬಂಧ ಪಟ್ಟ ಒಂದು ಅಪರೂಪದ ಕನ್ನಡ ಪದ ಪರಿಚಯ ಮಾಡಿಕೊಳ್ಳೋಣ” ಎಂದು ಟ್ವೀಟ್ ಮಾಡಿದ್ದು, ಇಂದು ‘ಕಾಸರ’ ಎನ್ನುವ ಪದದ ಅರ್ಥವಿವರಣೆಯನ್ನು ನೀಡಿದೆ. ಕಾಸರ ಎಂದರೆ ಕಾಡು, ಕಾಂತಾರ, ಅಡವಿ, ಅರಣ್ಯ(ಎತ್ತರವಾಗಿ […]
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಕಾನೂನು ತಕ್ಷಣ ಬದಲಾಯಿಸಲು ಸಾಧ್ಯವಿಲ್ಲ: ಮಧು ಬಂಗಾರಪ್ಪ

ಬೆಂಗಳೂರು: ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವ ಸಿಂಧುತ್ವಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾನೂನು ಹೋರಾಟದ ನಡುವೆ, ಹೊಸದಾಗಿ ನೇಮಕಗೊಂಡ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ತರಗತಿಗಳಲ್ಲಿ ಹಿಜಾಬ್ ಅನ್ನು ನಿಷೇಧಿಸುವ ಸರ್ಕಾರದ ಆದೇಶವನ್ನು ಕಾಂಗ್ರೆಸ್ ಸರ್ಕಾರವು ತಕ್ಷಣವೇ ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ತನ್ನ ಚುನಾವಣಾ ಪ್ರಚಾರದ ಭಾಗವಾಗಿ ಹಿಜಾಬ್ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕುವುದಾಗಿ ಕಾಂಗ್ರೆಸ್ ಸರ್ಕಾರ ಭರವಸೆ ನೀಡಿತ್ತು. ‘ದಿ ಇಂಡಿಯನ್ ಎಕ್ಸ್ಪ್ರೆಸ್’ಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿದ ಬಂಗಾರಪ್ಪ, “ಹಿಜಾಬ್ನಲ್ಲಿನ […]
ಚುನಾವಣಾ ತಂತ್ರಗಾರ ಸುನಿಲ್ ಕನುಗೋಳು ಅವರಿಗೆ ಸಂಪುಟ ದರ್ಜೆ ಸ್ಥಾನಮಾನ: ಮುಖ್ಯಮಂತ್ರಿಯವರ ಮುಖ್ಯ ಸಲಹೆಗಾರರಾಗಿ ನೇಮಕ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಭರ್ಜರಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎನ್ನಲಾದ ಕಾಂಗ್ರೆಸ್ ಚುನಾವಣಾ ತಂತ್ರಗಾರ ಸುನಿಲ್ ಕನುಗೋಳು ಅವರನ್ನು ಸಂಪುಟ ಸಚಿವರ ದರ್ಜೆಯೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಖ್ಯ ಸಲಹೆಗಾರರಾಗಿ ಬುಧವಾರ ನೇಮಿಸಲಾಗಿದೆ. ಸುನಿಲ್ ಕಳೆದೊಂದು ವರ್ಷದಿಂದ ರಾಜ್ಯದಲ್ಲಿ ಕಾಂಗ್ರೆಸ್ ಜೊತೆಗೂಡಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕದ ಬಳ್ಳಾರಿ ಜಿಲ್ಲೆಯಲ್ಲಿ ಜನಿಸಿರುವ ಸುನಿಲ್ ಅಲ್ಲೇ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ಮೂಲತಃ ತೆಲುಗು ಭಾಷಿಕರಾಗಿದ್ದರೂ, ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಈ ಹಿಂದೆ ಬಿಜೆಪಿ, ಡಿಎಂಕೆ, […]
ಚಿಕ್ಕಮಗಳೂರು: ಹಾವು ಹಿಡಿಯುತ್ತಿದ್ದ ಸ್ನೇಕ್ ನರೇಶ್ ತಾನೇ ಹಿಡಿದ ನಾಗರಹಾವು ಕಚ್ಚಿ ಮೃತ

ಚಿಕ್ಕಮಗಳೂರು: ಇಲ್ಲಿನ ಹಾವು ಹಿಡಿಯುವ ಸ್ನೇಕ್ ನರೇಶ್ ಎಂಬ ವ್ಯಕ್ತಿಯು ತಾವೇ ಹಿಡಿದ ನಾಗರಹಾವು ಕಚ್ಚಿ ಮಂಗಳವಾರ ಮೃತಪಟ್ಟಿದ್ದಾರೆ. ನರೇಶ್ (55) ಕೆಲವು ದಿನಗಳ ಹಿಂದೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಬೆಳಗ್ಗೆ ನಾಗರಹಾವು ಹಿಡಿದು ರಕ್ಷಣೆ ಮಾಡಿ ಸ್ಕೂಟಿಯಲ್ಲಿ ಇಟ್ಟು ಮತ್ತೊಂದು ಹಾವಿದೆ ಎಂದು ಹಿಡಿಯಲು ಹೊರಟ್ಟಿದ್ದರು. ಈ ವೇಳೆ ಸ್ಕೂಟಿಯ ಸೀಟ್ ತೆಗೆದು ಹಾವಿದ್ದ ಚೀಲ ಸರಿಪಡಿಸಲು ಮುಂದಾದಾಗ ನಾಗರಹಾವು ನರೇಶ್ ಅವರ ಕೈಗೆ ಕಚ್ಚಿದೆ. ಹಾವು ಕಚ್ಚಿದ ತಕ್ಷಣವೇ ಸ್ಥಳೀಯರು ನರೇಶ್ […]