ಮಹಾರಾಷ್ಟ್ರ: ವಿದ್ಯಾರ್ಥಿನಿ ಮೇಲೆ ಮತ್ತೆ ಮತ್ತೆ ಅತ್ಯಾಚಾರ ಎಸಗಿದ ಶಿಕ್ಷಕ; ಬಾಲಕಿ ಮೃತ್ಯು.

ಯವತ್ಮಾಲ್: 17 ವರ್ಷದ ವಿದ್ಯಾರ್ಥಿನಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಟ್ಯೂಷನ್ ಶಿಕ್ಷಕನನ್ನು ಬಂಧಿಸಿರು ಘಟನೆ ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಲ್ಲಿ ನಡೆದಿದೆ. ಗರ್ಭಪಾತ ಮಾಡಿಸುವ ವೇಳೆ ಸಂತ್ರಸ್ತೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಒಂಬತ್ತು ತಿಂಗಳ ಕಾಲ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಶೋಷಿಸಿದ ಮತ್ತು ಗರ್ಭಿಣಿಯನ್ನಾಗಿಸಿದ್ದ 27 ವರ್ಷದ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪೊಲೀಸರ ದೂರಿನ ಪ್ರಕಾರ, ಟ್ಯೂಷನ್ ನೀಡಿದ್ದ ಆರೋಪಿ, ವಿದ್ಯಾರ್ಥಿನಿಯ ಸ್ನೇಹ ಬೆಳೆಸಿಕೊಂಡು ಕಳೆದ ಒಂಬತ್ತು ತಿಂಗಳಲ್ಲಿ ಹಲವು […]

ರಾಜ್ಯದಲ್ಲಿ ಸಿನಿಮಾಗಳಿಗೆ 200 ರೂ. ಏಕರೂಪ ದರ ನಿಗದಿ: ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

ಮಲ್ಟಿಪ್ಲೆಕ್ಸ್​ ಸೇರಿದ ರಾಜ್ಯ ಎಲ್ಲಾ ಚಿತ್ರಮಂದಿರಗಳಲ್ಲಿ ತೆರಿಗೆ ಹೊರತುಪಡಿಸಿ ಎಲ್ಲಾ ಭಾಷೆಯ ಸಿನಿಮಾಗಳಿಗೆ 200 ರೂಪಾಯಿಯ ಏಕರೂಪದ ದರದ ಟಿಕೆಟ್​ ನಿಗದಿಪಡಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಮಂಗಳವಾರ (ಸೆ.23) ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಕಂಬೈನ್ಸ್​, ಮಲ್ಟಿಪ್ಲೆಕ್ಸ್​ ಅಸೋಷಿಯೇಷನ್ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಸದರಿ ವಿಚಾರಣೆ ನಡೆಸಿರುವ ಕೋರ್ಟ್​ ಸರ್ಕಾರದ ಆದೇಶಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ.ಕರ್ನಾಟಕ ಸಿನಿಮಾ (ನಿಯಂತ್ರಣ) ನಿಯಮಗಳು 2014 […]

ಠಾಣೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ದೂರು ಸ್ವೀಕರಿಸದೇ ಇರಲು ಸಾಧ್ಯವಿಲ್ಲ: ಹೈ ಕೋರ್ಟ್

ಬೆಂಗಳೂರು: ‘ನಾಪತ್ತೆ ಪ್ರಕರಣಗಳಲ್ಲಿ ನಾಪತ್ತೆಯಾದವರ ಬಗ್ಗೆ ದೂರು ಸ್ವೀಕರಿಸುವಾಗ ಪೊಲೀಸರು; ‘ಸಂಬಂಧಿಸಿದ ಪ್ರದೇಶ ನಮ್ಮ ಠಾಣೆ ವ್ಯಾಪ್ತಿಗೆ ಒಳಪಡುವುದಿಲ್ಲ’ ಎಂದು ನಿರಾಕರಣೆ ಮಾಡುವಂತಿಲ್ಲ ಎಂದು ಹೈಕೋರ್ಟ್‌ ಆದೇಶಿಸಿದೆ. ‘ನನ್ನ ಪುತ್ರಿ 2023ರಲ್ಲಿ ನಾಪತ್ತೆಯಾಗಿದ್ದಾಳೆ. ಪೊಲೀಸರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ’ ಎಂದು ಆರೋಪಿಸಿ ಹುಬ್ಬಳಿಯ ರಾಮಕೃಷ್ಣ ಭಟ್‌ ಸಲ್ಲಿಸಿದ್ದ ಹೇಬಿಯಸ್‌ ಕಾರ್ಪಸ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌.ಜಿ.ಪಂಡಿತ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ (ಧಾರವಾಡ), ಇಂತಹ ದೂರುಗಳು ಬಂದಾಗ ಪೊಲೀಸರು ಯಾವ ಕ್ರಮ ಅನುಸರಿಸಬೇಕು ಎಂಬ ಬಗ್ಗೆ ಮಾರ್ಗಸೂಚಿ […]

ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ: ಶಿಕ್ಷಣ ಇಲಾಖೆ ಆದೇಶ.

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಕೇಂದ್ರ ಕಚೇರಿ, 6 ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿ ಹಾಗೂ ಎಲ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಆಧಾರ್ ಸಹಿತ ಬಯೋಮೆಟ್ರಿಕ್ ಹಾಜರಾತಿಯನ್ನು ಜಾರಿಗೊಳಿಸುತ್ತಿದೆ.ಈ ಹಿನ್ನಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಮತ್ತು ಅತಿಥಿ ಉಪನ್ಯಾಸಕರು ತಮ್ಮ ವೈಯಕ್ತಿಕ ವಿವರಗಳನ್ನು ಇಲಾಖೆ ಪೋರ್ಟಲ್‌ನಲ್ಲಿ ಸೆ.30ರೊಳಗೆ ನೋಂದಣಿ ಮಾಡಿಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಮೊಬೈಲ್ ಆೃಪ್‌ಗಳನ್ನು ತಮ್ಮ ಮೊಬೈಲ್‌ಗಳಲ್ಲಿ ಇನ್‌ಸ್ಟಾಲ್ ಮಾಡಿಕೊಂಡು ಕಡ್ಡಾಯವಾಗಿ ಹಾಜರಾತಿ […]

ಸಾಮಾನ್ಯ ಮತ್ತು ಮಧ್ಯಮ ವರ್ಗದ ಜನರಿಗೆ ಕೇಂದ್ರ ಸರ್ಕಾರದಿಂದ ‘ದಸರಾ ಗಿಫ್ಟ್’: ದಿನನಿತ್ಯ ಬಳಸುವ ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆ? ಹಳೆಯ ದರ ಎಷ್ಟಿತ್ತು? ಇಲ್ಲಿದೆ ಮಾಹಿತಿ.!

ಸಾಮಾನ್ಯ ಮತ್ತು ಮಧ್ಯಮ ವರ್ಗದ ಜನರಿಗೆ ಕೇಂದ್ರ ಸರ್ಕಾರ ‘ದಸರಾ ಗಿಫ್ಟ್‌’ ಕೊಟ್ಟಿದೆ. ಇಂದಿನಿಂದಲೇ ಹೊಸ ಜಿಎಸ್‌ಟಿ ದರ ಜಾರಿಗೆ ಬರಲಿದೆ. ಇದರಿಂದ ಅದೆಷ್ಟೋ ದಿನಬಳಕೆ ವಸ್ತುಗಳ ಬೆಲೆ ಕೈಗೆಟುಕುವ ದರದಲ್ಲಿ ಸಿಗಲಿದೆ. ನಾವು ದಿನನಿತ್ಯ ಬಳಸುವ ಬಹುತೇಕ ವಸ್ತುಗಳ ಬೆಲೆ ಕಡಿಮೆಯಾಗಿದೆ. ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆಯಾಗಿದೆ? ಹಳೆಯ ದರ ಎಷ್ಟಿತ್ತು? ಇಲ್ಲಿದೆ ವಿವರ. ಯಾವ ಉತ್ಪನ್ನಗಳ ಬೆಲೆ ಎಷ್ಟು? * ವಿಕ್ಸ್ ಆಕ್ಷನ್ 500 ಅಡ್ವಾನ್ಸ್‌ & ವಿಕ್ಸ್‌ ಇನ್ಹೆಲರ್‌ ಹೊಸ ದರ […]