ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ: ಯಡಿಯೂರಪ್ಪ ಭವಿಷ್ಯ

ಬೆಂಗಳೂರು: ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಾದಿ ಅಂತ್ಯವಾಗಲಿದೆ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಮಂಗಳವಾರ ಭವಿಷ್ಯ ನುಡಿದಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಶಕ್ತಿಕೇಂದ್ರ ಪ್ರಮುಖರ ಸಭೆಯಲ್ಲಿ ಯಡಿಯೂರಪ್ಪ ಅವರು ಚಾಮರಾಜನಗರ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಅವರಿಗೆ 60,000 ಮತಗಳ ಮುನ್ನಡೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಮ್ಮ ತವರು ಕ್ಷೇತ್ರ ವರುಣಾದಲ್ಲಿ ಮತದಾರರಿಗೆ ಕರೆ ನೀಡಿದ್ದನ್ನು ಉಲ್ಲೇಖಿಸಿ ಮಾತನಾಡಿದರು. ಸಿದ್ದರಾಮಯ್ಯನವರು ತಮ್ಮ ಸಮಯ […]

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಮುಖ್ಯ ಸಂಚುಕೋರನ ಬಂಧನ

ಬೆಂಗಳೂರು: ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Blast) ಪ್ರಕರಣದ ಆರೋಪಿ ಎನ್ನಲಾದ ಮುಜಾಮೀಲ್ ಶರೀಫ್‌ನನ್ನು ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಗುರುವಾರ ಬಂಧಿಸಿದ್ದು, ಪ್ರಕರಣದಲ್ಲಿ ಮೊದಲ ವ್ಯಕ್ತಿ ಬಂಧನ ಇದಾಗಿದೆ. ಮಾರ್ಚ್‌ 1ರಂದು ನಡೆದಿದ್ದ ಬಾಂಬ್‌ ಸ್ಫೋಟ ಪ್ರಕರಣದ ಸಂಚಿನಲ್ಲಿ ಮುಜಾಮಿಲ್ ಶರೀಫ್ ಭಾಗಿಯಾಗಿದ್ದ. ಬಾಂಬ್ ಇರಿಸಿದ್ದಾನೆ ಎನ್ನಲಾದ ಮುಸಾವೀರ್ ಹುಸೇನ್ ಶಾಜೀಬ್‌ ಹಾಗೂ ಅಬ್ದುಲ್ ಮಥೀನ್ ತಾಹಾಗೆ ಸಹಕಾರ ನೀಡಿದ್ದ ಎಂದು ಎನ್‌ಐಎ ಮೂಲಗಳು ಹೇಳಿವೆ. 18 ಪ್ರಮುಖ ಸ್ಥಳಗಳ ಮೇಲೆ […]

ಮಹಾರಾಷ್ಟ್ರದ ಅಂಬಾಜೋಗಿಯಲ್ಲಿ ಯಾದವ ರಾಜವಂಶದ ಎರಡು ಪುರಾತನ ದೇವಾಲಯದ ನೆಲೆಗಳು ಪತ್ತೆ

ಮುಂಬೈ: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಅಂಬಾಜೋಗಿ ಬಳಿಯ ಸಕಲೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ಉತ್ಖನನದ ಸಂದರ್ಭದಲ್ಲಿ, ಒಂದು ವಿಶಿಷ್ಟವಾದ ಉತ್ಖನನವು ಸ್ಥಳೀಯರು ಮತ್ತು ತಜ್ಞರನ್ನು ಸಹ ಬೆಚ್ಚಿಬೀಳಿಸಿದೆ. ಮಹಾರಾಷ್ಟ್ರ ಸರ್ಕಾರದ ಪುರಾತತ್ವ ಇಲಾಖೆಯು (Archeological Survey) ಮಹತ್ವದ ಉತ್ಖನನವನ್ನು ಮಾಡಿದ್ದು, ಇದನ್ನು ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ಪುರಾತತ್ವ ಇಲಾಖೆಯು ಸಕಲೇಶ್ವರ ದೇವಾಲಯದ ಆವರಣದಲ್ಲಿ ಎರಡು ಪುರಾತನ ದೇವಾಲಯದ ಅಡಿಪಾಯಗಳನ್ನು ಕಂಡುಹಿಡಿದಿದ್ದು ಇದನ್ನು ‘ಬಾರಾಖಂಬಿ’ ದೇವಾಲಯ ಎಂದೂ ಕರೆಯುತ್ತಾರೆ. ದೇವಾಲಯವನ್ನು 1228 ಎ.ಡಿ ಸುಮಾರಿಗೆ ನಿರ್ಮಿಸಿರಬಹುದು. ಶಾಸನದ ಪ್ರಕಾರ ಇದನ್ನು […]

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಮತ್ತಿಬ್ಬರನ್ನು ವಶಕ್ಕೆ ಪಡೆದ ಎನ್.ಐ.ಎ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ (Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತಿಬ್ಬರನ್ನು ಬಂಧಿಸಿದೆ. ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿರುವ ಎನ್‌ಐಎ, ಶೋಧವನ್ನು ಮುಂದುವರೆಸಿದೆ. ಸದ್ಯ ಬಂಧನದಲ್ಲಿರುವ ಇವರಿಬ್ಬರು ನಿಷೇಧಿತ ಅಲ್ ಹಿಂದ್ ಟ್ರಸ್ಟ್ ಜೊತೆ ನಂಟು ಹೊಂದಿದ್ದರು ಎಂದು ತಿಳಿದು ಬಂದಿದೆ. ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಹಿಂದಿನ ಕೆಲವು ಸ್ಫೋಟಗಳಿಗೂ ಸಾಮ್ಯತೆ ಇರುವುದರಿಂದ ಈ ಹಿಂದಿನ ಸ್ಫೋಟಗಳಲ್ಲಿ ಭಾಗಿಯಾಗಿರುವ ಹಲವರ ಮೇಲೆ ಎನ್‌ಐ ಕಣ್ಣಿಟ್ಟಿದೆ. ಶಂಕಿತರಿಗೆ […]

ಗ್ರಾಹಕರ ಕಣ್ಣು ಕತ್ತಲೆ ಬರಿಸುತ್ತಿದೆ ಗೃಹಜ್ಯೋತಿ: ವಿದ್ಯುತ್ ಬಳಕೆ ಹೆಚ್ಚಳದಿಂದ ಬಿಲ್ ನಲ್ಲಿ ಏರಿಕೆ ಕಂಡು ಜನ ಶಾಕ್

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ನಿರಂತರವಾಗಿ ಏರುತ್ತಿದ್ದು, ಕಳೆದ ವರ್ಷದ ಫೆಬ್ರುವರಿ–ಮಾರ್ಚ್‌ಗಿಂತ ಈ ಬಾರಿ ಗೃಹ ವಿದ್ಯುತ್ ಬಳಕೆ ಶೇ 30ರಷ್ಟು ಹೆಚ್ಚಳವಾಗಿದೆ. ಇದೀಗ ಗೃಹ ಜ್ಯೋತಿ ಫಲಾನುಭವಿಗಳಿಗೆ ಇದರ ಬಿಸಿ ತಟ್ಟಿದೆ. ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ನಿಯಮಗಳ ಪ್ರಕಾರ ಸೌಲಭ್ಯ ಪಡೆದಿರುವ ಕುಟುಂಬಗಳು ಹಿಂದಿನ ಒಂದು ವರ್ಷ ಬಳಸಿದ್ದ ಸರಾಸರಿ ಯೂನಿಟ್‌ ಹಾಗೂ ಅದರ ಮೇಲೆ 10 ಹೆಚ್ಚುವರಿ ಯೂನಿಟ್‌ ಮಾತ್ರ ಉಚಿತವಾಗಿ ಪಡೆಯಬಹುದಾಗಿದೆ. ಅದಕ್ಕಿಂತ ಎಷ್ಟು ಹೆಚ್ಚು ಬಳಕೆ ಮಾಡಲಾಗುತ್ತದೆಯೋ ಅಷ್ಟು […]