ಮುಂಗಾಳು ಮಳೆ ವಿಳಂಬ; ಮೋಡ ಬಿತ್ತನೆಗೆ ಚಿಂತನೆ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

ಧಾರವಾಡ: ರಾಜ್ಯದಲ್ಲಿ ಮುಂಗಾರು ಮಳೆ ವಿಳಂಬವಾಗುತ್ತಿದ್ದು, ಕಳೆದ ನಾಲ್ಕೈದು ದಿನಗಳ ಹಿಂದೆಯೇ ರಾಜ್ಯಕ್ಕೆ ಮುಂಗಾರು ಮಾರುತಗಳು ಆಗಮಿಸಿದ್ದರೂ ಮಳೆ ಸುರಿಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳಲ್ಲಿ ಮಳೆಯಾಗದಿದ್ದರೆ ಮೋಡ ಬಿತ್ತನೆ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ತಲೆದೋರುತ್ತದೆ ಎನ್ನುವ ನಂಬಿಕೆ ಇದ್ದು, ಜನಸಾಮಾನ್ಯರು ಅದಾಗಲೇ ಈ ಬಗ್ಗೆ ಮಾತಾಡಿಕೊಳ್ಳುತ್ತಿದ್ದಾರೆ. ಮುಂಗಾರು ಮಳೆ ಬಂದು ಕೃಷಿ ಚಟುವಟಿಕೆಗಳು ಗರಿಗೆದರ ಬೇಕಾಗಿದ್ದ ಈ ಹೊತ್ತಿನಲ್ಲಿ ರಣಬಿಸಿಲು […]
ವಿದ್ಯುತ್ ದರ ಪ್ರತಿ ಯೂನಿಟ್ಗೆ 70 ಪೈಸೆ ಏಪ್ರಿಲ್ನಿಂದಲೇ ಹೆಚ್ಚಳ: ಕೆಇಆರ್ಸಿ ಸ್ಪಷ್ಟನೆ

ಬೆಂಗಳೂರು: ವಿದ್ಯುತ್ ದರವನ್ನು ಪ್ರತಿ ಯೂನಿಟ್ಗೆ 70 ಪೈಸೆ ಏರಿಕೆ ಮಾಡಿರುವ ಹಿನ್ನೆಲೆ ಬೆಸ್ಕಾಂ ಜೂನ್ ತಿಂಗಳಿನಲ್ಲಿ ವಿದ್ಯುತ್ ಬಳಕೆಯ ಬಿಲ್ನಲ್ಲಿ ಪರಿಷ್ಕತ ಶುಲ್ಕವನ್ನು ನಮೂದಿಸಲಾಗಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(ಕೆ.ಇ.ಆರ್.ಸಿ) ಸ್ಪಷ್ಟಪಡಿಸಿದೆ. ಗ್ರಾಹಕರು ಬಳಸುವ ಮೊದಲ 100 ಯೂನಿಟ್ ವಿದ್ಯುತ್ಗೆ ಪ್ರತಿ ಯೂನಿಟ್ ದರ 4.75 ರೂ. 100 ಯೂನಿಟ್ ಮೀರಿದ್ದಲ್ಲಿ ಬಳಸಿದ ಅಷ್ಟೂ ಯೂನಿಟ್ಗೆ 2ನೇ ಶೇಣಿ ದರ ಪ್ರತಿ ಯೂನಿಟ್ಗೆ 7 ರೂ. ನಂತೆ ಅನ್ವಯವಾಗಲಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ […]
ಮಧ್ಯಮ ವರ್ಗದವರ ಜೇಬಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಹಣ ಹಾಕುತ್ತೇವೆ ಎಂದ ಸಿಎಂ

ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬೆಂಗಳೂರು:ಇಂದಿನಿಂದ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಸಾಮಾನ್ಯ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು. ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಪಕ್ಷ ಗೇಲಿ ಮಾಡಿಕೊಂಡೇ ಇರಲಿ ನಾವು ಜನರ ಮಧ್ಯೆ ಇದ್ದು ಕೆಲಸ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಶಕ್ತಿ ಯೋಜನೆ ಜಾರಿ ಬಳಿಕ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ವಿರೋಧ ಪಕ್ಷದವರಿಗೆ ನಡುಕ ಹುಟ್ಟಿದೆ. ಅದಕ್ಕಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರು […]
ಮುಂಬೈ ಮಂಗಳೂರು ಎರಡನೇ ದೈನಂದಿನ ವಿಮಾನ ಹಾರಾಟ ಆರಂಭಿಸಿದ ಏರ್ ಇಂಡಿಯಾ

ಮಂಗಳೂರು: ಏರ್ ಇಂಡಿಯಾದ ಎರಡನೇ ಮುಂಬೈ ಮಂಗಳೂರು ದೈನಂದಿನ ವಿಮಾನ ಹಾರಾಟ ಆರಂಭವಾಗಿದೆ. ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಬೈಗೆ ಎರಡನೇ ದೈನಂದಿನ ವಿಮಾನ ಯಾನವನ್ನು ಆರಂಭಿಸಿದೆ. ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ ಜೂನ್ 10ರಿಂದ ಏರ್ ಇಂಡಿಯಾ ತನ್ನ ಎರಡನೇ ದೈನಂದಿನ ವಿಮಾನಯಾನ ಸೇವೆಯನ್ನು ಆರಂಭಿಸಿದೆ. ಮೇ 22 ರಂದು ಇಂಡಿಗೊ ಮುಂಬೈ-ಮಂಗಳೂರು ವಲಯದಲ್ಲಿ ಮೂರನೇ ದೈನಂದಿನ ವಿಮಾನವನ್ನು ಪ್ರಾರಂಭಿಸಿದ ನಂತರ ಈ ವಿಮಾನ ಸಂಚಾರ ಆರಂಭವಾಗಿದೆ. ಇದರೊಂದಿಗೆ, ಎರಡು […]
ಬೆಂಗಳೂರಿನ ಸ್ಟಾರ್ಟ್ ಕಂಪನಿಯಿಂದ ಅಭಿವೃದ್ದಿಪಡಿಸಲಾದ ಭಾರತದ ಮೊದಲ ಸಂಪೂರ್ಣ ಅಟೋನಾಮಸ್ ಕಾರು zPod

ಬೆಂಗಳೂರು: ಭಾರತದ ಪ್ರರ್ಥಮ ಅಟೋನಾಮಸ್ ಕಾರು ಎನ್ನುವ ಹೆಗ್ಗಳಿಕೆಗೆ ಪಾತ್ರವಾದ zPod ಅನ್ನು 2021 ರಲ್ಲಿ ಬೆಂಗಳೂರಿನಲ್ಲಿ ಸ್ಥಾಪನೆಯಾದ ಮೈನಸ್ ಝೀರೋ ಸ್ಟಾರ್ಟ್ ಅಪ್ ಕಂಪನಿ ಅಭಿವೃದ್ಧಿಪಡಿಸಿದ್ದು, ಇದು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಕೇಂದ್ರೀಕರಿಸಿದೆ. ತೆರೆದ ಬದಿಗಳೊಂದಿಗೆ ಕಾಂಪ್ಯಾಕ್ಟ್, ಕೋನೀಯ ಯಂತ್ರದೊಂದಿಗೆ ಸಂಪೂರ್ಣ ಸ್ವಾಯತ್ತ ವಿದ್ಯುತ್ ವಾಹನವನ್ನು ಯೂಟ್ಯೂಬ್ನಲ್ಲಿ ಮೈನಸ್ ಝೀರೋ ಲೈವ್ಸ್ಟ್ರೀಮ್ ಮಾಡಿದ ಸಮಾರಂಭದಲ್ಲಿ ಅನಾವರಣಗೊಳಿಸಲಾಯಿತು. ಸೊಸೈಟಿ ಆಫ್ ಆಟೋಮೋಟಿವ್ ಇಂಜಿನಿಯರ್ಸ್ ವ್ಯಾಖ್ಯಾನಿಸಿದಂತೆ ಸ್ಟೀರಿಂಗ್ ಚಕ್ರವನ್ನು ಹೊಂದಿರದ zPod 5 ನೇ ಹಂತದ ಸ್ವಾಯತ್ತತೆಯನ್ನು ನೀಡಲು […]