ಹಿರಿಯ ನಾಯಕರಿಗೆ ಬೇಡವಾದ ಗೃಹ ಖಾತೆ; ನೀರಾವರಿ, ವಿದ್ಯುತ್ ಮತ್ತು ಕಂದಾಯ ಖಾತೆಗಳಿಗೆ ಬಹು ಬೇಡಿಕೆ

ಬೆಂಗಳೂರು: ಸಿಎಂ ಹುದ್ದೆ ಬಳಿಕ ಎರಡನೇ ಶಕ್ತಿಯುತ ಸ್ಥಾನ ಎಂದು ಪರಿಗಣಿಸಲ್ಪಡುವ ಗೃಹ ಖಾತೆ ಪಡೆಯಲು ಯಾವ ಹಿರಿಯ ನಾಯಕರೂ ಮುಂದೆ ಬರುತ್ತಿಲ್ಲ ಎಂದು ವರದಿಯಾಗಿದೆ. ಯಾವುದೇ ಹಿರಿಯ ನಾಯಕರು ಪೊಲೀಸ್ ಇಲಾಖೆಯನ್ನು ನಿಭಾಯಿಸಲು ಉತ್ಸುಕರಾಗಿಲ್ಲ, ಆದರೆ ನೀರಾವರಿ, ವಿದ್ಯುತ್ ಮತ್ತು ಕಂದಾಯದಂತಹ ಖಾತೆಗಳಿಗೆ ಹೆಚ್ಚಿನ ಬೇಡಿಕೆಯಿದೆ. ರಾಜ್ಯದಲ್ಲಿ ಸೌಹಾರ್ದತೆ ಕದಡುವವರ ವಿರುದ್ಧ ಕಡಿವಾಣ ಹಾಕುವಂತೆ ಕರ್ನಾಟಕದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪೊಲೀಸ್ ಇಲಾಖೆಗೆ ಸೂಚಿಸಿದ್ದರೂ, ಗೃಹ ಇಲಾಖೆ ಹುದ್ದೆ ವಹಿಸುವವರಿಲ್ಲದೆ ಉಳಿದುಕೊಂಡಿದೆ ಎಂದು ವಿಷಯದ ಬಗ್ಗೆ […]

ಹಿಂದಿನ ಸರ್ಕಾರದ ಮಂಡಳಿ-ನಿಗಮಗಳ ಕಾಮಗಾರಿ ಆದೇಶಗಳಿಗೆ ಹಣ ಬಿಡುಗಡೆ ಸ್ಥಗಿತ: ಸರ್ಕಾರದ ಆದೇಶ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವು ಮಂಡಳಿಗಳು ಮತ್ತು ನಿಗಮಗಳು ಸೇರಿದಂತೆ ಯಾವುದೇ ಇಲಾಖೆಯಲ್ಲಿ ಹಿಂದಿನ ಸರ್ಕಾರ ನೀಡಿದ್ದ ಯಾವುದೇ ಆದೇಶಗಳಿಗೆ ಹಣ ಬಿಡುಗಡೆ ಮಾಡುವುದನ್ನು ನಿಲ್ಲಿಸಲು ಸೋಮವಾರ ಆದೇಶಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ. ಇನ್ನೂ ಆರಂಭವಾಗದೇ ಬಾಕಿ ಉಳಿದಿರುವ ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ಸರ್ಕಾರ ಆದೇಶ ನೀಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಶನಿವಾರ (ಮೇ 20) ಅಧಿಕಾರ ಸ್ವೀಕರಿಸಿದ್ದರು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಅವರು ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ […]

ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯುಟಿ ಖಾದರ್ ಆಯ್ಕೆ: ನಾಳೆ ಚುನಾವಣೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯುಟಿ ಖಾದರ್ ಅವರನ್ನು ಅಂತಿಮಗೊಳಿಸಲಾಗಿದೆ. ಪ್ರಸ್ತುತ ಆರ್.ವಿ.ದೇಶಪಾಂಡೆ ಹಂಗಾಮಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸ್ಪೀಕರ್ ಸ್ಥಾನಕ್ಕೆ ಗದಗ ಶಾಸಕ ಎಚ್‌ಕೆ ಪಾಟೀಲ್, ಶಿರಾ ಶಾಸಕ ಟಿಬಿ ಜಯಚಂದ್ರ, ಮಧುಗಿರಿ ಶಾಸಕ ಕೆಎನ್ ರಾಜಣ್ಣ, ಮುದ್ದೇಬಿಹಾಳ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ಸೇರಿದಂತೆ ಹಲವು ಹಿರಿಯ ಶಾಸಕರ ಹೆಸರನ್ನು ಪರಿಗಣಿಸಲಾಗಿತ್ತು. ಮೂಲಗಳ ಪ್ರಕಾರ, ಸೋಮವಾರ ರಾತ್ರಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಖಾದರ್ ಅವರಿಗೆ ದೂರವಾಣಿ […]

ಕಾಂಗ್ರೆಸ್ ಗ್ಯಾರಂಟಿಗೆ ಷರತ್ತುಗಳು ಅನ್ವಯ: ಕೊಟ್ಟ ಭರವಸೆ ಈಡೇರಿಸಿ ಎಂದ ವಿರೋಧ ಪಕ್ಷದ ನಾಯಕರು

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗಳಿಗೆ ಷರತ್ತುಗಳು ಅನ್ವಯವಾಗಿದ್ದು, ಈ ಬಗ್ಗೆ ವಿರೋಧ ಪಕ್ಷ, ಬಿಜೆಪಿಯ ನಾಯಕರು ಸರಕಾರದ ವಿರುದ್ದ ಮುಗಿಬಿದ್ದಿದ್ದಾರೆ. ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ. ವಿದ್ಯುತ್ ಬಿಲ್ ಬಂದ್ರೆ ಮುಖ್ಯಮಂತ್ರಿಗಳಿಗೆ ಕಳುಹಿಸಿ ಕೊಡಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ದಿನಕ್ಕೆ ಕಾಂಗ್ರೆಸ್‌ನವರು ಬಣ್ಣ ಬದಲಾಯಿಸಿದ್ದಾರೆ. ಇನ್ನು ದಿನ ಕಳೆದಂತೆ ಇನ್ಯಾವ ಬಣ್ಣ ಬದಲಾಯಿಸ್ತಾರೋ ನೋಡಬೇಕು. ಮೊದಲು ಎಲ್ಲ ಪದವೀಧರ ನಿರುದ್ಯೋಗಿಗಳಿಗೂ […]

ಬೆಂಗಳೂರು: ಭಾರೀ ಮಳೆಗೆ ಕುಸಿದ ಕಟ್ಟಡ; ಪ್ರಾಣಾಪಾಯವಿಲ್ಲ

ಕರ್ನಾಟಕ: ಭಾರೀ ಮಳೆಗೆ ಬೆಂಗಳೂರಿನ ವಿದ್ಯಾರಾಯನಪುರದಲ್ಲಿ ಹಳೆ ಕಟ್ಟಡ ಒಂದು ಕುಸಿದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಭಾನುವಾರ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದ್ದು, ನಗರದ ಹಲವೆಡೆ ನೀರು ತುಂಬಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಹಲವೆಡೆ ಮರಗಳು ಉರುಳಿದ್ದು, ಕೆ.ಆರ್ ಸರ್ಕಲ್ ಪ್ರದೇಶದಲ್ಲಿ ನೀರು ತುಂಬಿ ಜನರು ಅಂಡರ್ ಪಾಸ್ ಬಳಿ ಪರದಾಡುವಂತಾಗಿದ್ದು, ಬಳಿಕ ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಯಿತು. ಈ ಬಾರಿ ಮುಂಗಾರು ಮಳೆಯು ಜೂನ್ 4 ರಂದು ಕೇರಳ ಪ್ರವೇಶಲಿದೆ ಎಂದು ಭಾರತೀಯ […]