ಜಲ್ಲಿಕಟ್ಟು- ಕಂಬಳ-ಎತ್ತಿನ ಗಾಡಿ ಓಟಕ್ಕೆ ಅನುಮತಿ: ಸಾಂಸ್ಕೃತಿಕ ಪರಂಪರೆ ನ್ಯಾಯಾಂಗದ ಭಾಗವಾಗಬಾರದು ಎಂದ ಸುಪ್ರೀಂ ಕೋರ್ಟ್

ನವದೆಹಲಿ: ತಮಿಳುನಾಡು, ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಸಾಂಪ್ರದಾಯಿಕ ಗೂಳಿ ಪಳಗಿಸುವ ಕ್ರೀಡೆಯಾದ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನ ಗಾಡಿ ಓಟದ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಗುರುವಾರ ಎತ್ತಿಹಿಡಿದಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ನ್ಯಾಯಮೂರ್ತಿ ಕೆ ಎಂ ಜೋಸೆಫ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು, “ ಶಾಸಕಾಂಗವು ಇದನ್ನು ರಾಜ್ಯದ ಸಾಂಸ್ಕೃತಿಕ ಪರಂಪರೆಯ ಭಾಗವಾಗಿದೆ ಎಂಬ ದೃಷ್ಟಿಕೋನವನ್ನು ತೆಗೆದುಕೊಂಡಿದೆ ಆದ್ದರಿಂದ ನಾವು ಶಾಸಕಾಂಗದ ದೃಷ್ಟಿಕೋನವನ್ನು ಅಡ್ಡಿಪಡಿಸುವುದಿಲ್ಲ. ಸಂವಿಧಾನದ ಮುನ್ನುಡಿಯಲ್ಲಿ ಇದನ್ನು ತಮಿಳುನಾಡಿನ ಸಂಸ್ಕೃತಿ […]
ಮುಂಬೈನಿಂದ ಗೋವಾ ತಲುಪಲು ಕೇವಲ 7 ಗಂಟೆ ಸಾಕು: ವಂದೇ ಭಾರತ್ ಎಕ್ಸ್ಪ್ರೆಸ್ ಪ್ರಯೋಗ ಯಶಸ್ವಿ

ಮುಂಬೈ: ಗೋವಾ- ಮುಂಬೈ ಮಾರ್ಗದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಜೂನ್ನಿಂದ ಕಾರ್ಯಾಚರಣೆಯನ್ನು ಪ್ರಾರಂಭಿಸುವ ಸಾಧ್ಯತೆಯಿದೆ ಎಂದು ವರದಿಗಳಾಗಿವೆ. ಸೆಮಿ ಹೈಸ್ಪೀಡ್ ರೈಲು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ಮತ್ತು ಮಡಗಾಂವ್ ನಡುವೆ ಚಲಿಸುತ್ತದೆ ಮತ್ತು ತೇಜಸ್ ಎಕ್ಸ್ಪ್ರೆಸ್ಗೆ ಹೋಲಿಸಿದರೆ ಮುಂಬೈ ಮತ್ತು ಗೋವಾ ನಡುವಿನ ಪ್ರಯಾಣದ ಸಮಯವನ್ನು ಕನಿಷ್ಠ 45 ನಿಮಿಷಗಳಷ್ಟು ಕಡಿಮೆ ಮಾಡುತ್ತದೆ. ಮುಂಬೈ-ಗೋವಾ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮಾರ್ಗದ ಪ್ರಯೋಗಗಳನ್ನು ಮಂಗಳವಾರ ಯಶಸ್ವಿಯಾಗಿ ನಡೆಸಲಾಯಿತು. ರೈಲು ಏಳು ಗಂಟೆಗಳಿಗಿಂತ ಸ್ವಲ್ಪವೇ ಹೆಚ್ಚು […]
ರಾಜ್ಯದ ಮುಂದಿನ ಮುಖ್ಯಮಂತ್ರಿ ಆಯ್ಕೆ: ದೆಹಲಿಗೆ ತೆರಳಿದ ಡಿ.ಕೆ ಶಿವಕುಮಾರ್

ಬೆಂಗಳೂರು: ಮುಖ್ಯಮಂತ್ರಿಯಾಗಬೇಕೆಂಬ ಹಂಬಲದಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಇಂದು ರಾಷ್ಟ್ರ ರಾಜಧಾನಿಗೆ ತೆರಳುತ್ತಿದ್ದು, ಮುಖ್ಯಮಂತ್ರಿ ಅಭ್ಯರ್ಥಿ ಮತ್ತು ಕಾಂಗ್ರೆಸ್ ಸರ್ಕಾರ ರಚನೆ ಕುರಿತು ಕಾಂಗ್ರೆಸ್ ಪಕ್ಷದ ಕೇಂದ್ರ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, “ನಾನು ಒಬ್ಬನೇ ದೆಹಲಿಗೆ ಹೋಗುತ್ತಿದ್ದೇನೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ನನ್ನನ್ನು ಏಕಾಂಗಿಯಾಗಿ ದೆಹಲಿಗೆ ಕರೆದಿದ್ದಾರೆ. ನಾನು ಏಕಾಂಗಿಯಾಗಿ ಹೋಗುತ್ತಿದ್ದೇನೆ” ಎಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅದಾಗಲೆ ತಮ್ಮ ನಿಷ್ಠಾವಂತ ಶಾಸಕರೊಂದಿಗೆ […]
ಮುಸ್ಲಿಂ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ; ಐದು ಉನ್ನತ ಖಾತೆಗಳ ಬೇಡಿಕೆ: ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಾದಿ

ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಸ್ಥಾನವನ್ನು ತಮ್ಮ ಸಮುದಾಯದ ಅಭ್ಯರ್ಥಿಗಳಿಗೆ ನೀಡಬೇಕು ಎಂದು ಸುನ್ನಿ ಉಲ್ಮಾ ಮಂಡಳಿಯ ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ. ಜೊತೆಗೆ ಐವರು ಮುಸ್ಲಿಂ ಶಾಸಕರನ್ನು ಗೃಹ, ಕಂದಾಯ, ಆರೋಗ್ಯ ಮತ್ತು ಇತರ ಇಲಾಖೆಗಳಂತಹ ಉತ್ತಮ ಖಾತೆಗಳ ಸಚಿವರನ್ನಾಗಿ ಮಾಡಬೇಕು ಎಂದು ಅವರು ಕೋರಿದ್ದಾರೆ. “ಉಪಮುಖ್ಯಮಂತ್ರಿ ಮುಸ್ಲಿಂ ಆಗಿರಬೇಕು, 30 ಸೀಟು ಕೊಡಿ ಎಂದು ಚುನಾವಣೆಗೂ ಮುನ್ನವೇ ಹೇಳಿದ್ದೆವು… ನಮಗೆ 15 ಸಿಕ್ಕಿದ್ದು, ಒಂಬತ್ತು ಮುಸ್ಲಿಂ ಅಭ್ಯರ್ಥಿಗಳು ಗೆದ್ದಿದ್ದಾರೆ. ಸುಮಾರು 72 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು […]
ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಬೊಮ್ಮಾಯಿ: ಇಂದು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿ ನಿರ್ಧಾರ

ಹೊಸದಿಲ್ಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. “ನಾನು ನನ್ನ ರಾಜೀನಾಮೆಯನ್ನು ನೀಡಿದ್ದೇನೆ ಮತ್ತು ಅದನ್ನು ಅಂಗೀಕರಿಸಲಾಗಿದೆ” ಎಂದು ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದಿದ್ದು, ಬಿಜೆಪಿ 65 ಮತ್ತು ಜೆಡಿಎಸ್ 19 ಸ್ಥಾನಗಳನ್ನು ಗಳಿಸಿದೆ. ಫಲಿತಾಂಶಗಳನ್ನು ಒಪ್ಪಿಕೊಂಡಿರುವ ಬೊಮ್ಮಾಯಿ, ಬಹುಮತ ಪಡೆಯಲು ಸಾಧ್ಯವಾಗದ ಕೊರತೆಗಳನ್ನು ವಿಶ್ಲೇಷಿಸುವುದಾಗಿ ಹೇಳಿದ್ದಾರೆ. ಪ್ರಧಾನಿ ಮತ್ತು ಬಿಜೆಪಿ ಕಾರ್ಯಕರ್ತರು […]