ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆ ವಾಪಾಸು ಕಳುಹಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಾಪಾಸು ಕಳುಹಿಸಿದ್ದಾರೆ ಎನ್ನಲಾಗಿದೆ. ಇಲಾಖೆಯ ವ್ಯಾಪ್ತಿಯಲ್ಲಿರುವ ಶ್ರೀಮಂತ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ‘ಸಾಮಾನ್ಯ ಸಂಗ್ರಹಣಾ ನಿಧಿ’ಯನ್ನು ಆದಾಯ ಇಲ್ಲದಿರುವ ‘ಸಿ’ ವರ್ಗದ ದೇವಸ್ಥಾನಗಳಿಗೆ ಬಳಸುವುದನ್ನು ಕಡ್ಡಾಯಗೊಳಿಸುವ ತಿದ್ದುಪಡಿ ಮಸೂದೆಯನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿ ಹೇಳಿದೆ. ಹೈಕೋರ್ಟ್‌ನ ಧಾರವಾಡ ಪೀಠವು ರಿಟ್‌ ಅರ್ಜಿ 3440/2005ರಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ […]

ಕೇರಳದ ಪುರಕ್ಕಾಡ್ ನಲ್ಲಿ 50 ಮೀಟರ್ ಹಿಂದೆ ಸರಿದ ಸಮುದ್ರ: ಆತಂಕದಲ್ಲಿ ರಾತ್ರಿ ಕಳೆದ ಸ್ಥಳೀಯರು

ಪುರಕ್ಕಾಡ್: ಕೇರಳದ ಪುರಕ್ಕಾಡ್‌ನಲ್ಲಿ ಸಮುದ್ರವು ಏಕಾಏಕಿ ತೀರದಿಂದ ಸುಮಾರು 50 ಮೀಟರ್ ಹಿಂದೆ ಸರಿದಿದ್ದು ಕರಾವಳಿ ನಿವಾಸಿಗರಲ್ಲಿ ಭಯ ಹುಟ್ಟಿಸಿದೆ. ಸ್ಥಳೀಯ ನಿವಾಸಿಗಳ ಪ್ರಕಾರ, ಅಯ್ಯಂಕೋಯಿಕ್ಕಲ್‌ನಿಂದ ಪುರಕ್ಕಾಡ್ ಬೀಚ್‌ನ ದಕ್ಷಿಣಕ್ಕೆ ಎಸ್‌ಡಿವಿ ಶಾಲೆಯವರೆಗೆ 500 ಮೀಟರ್ ಉದ್ದದ ತೀರದುದ್ದಕ್ಕೂ ಸಮುದ್ರವು ಹಿಂದೆಸರಿದಿದೆ. ಮಂಗಳವಾರ ಬೆಳಿಗ್ಗೆ 6.30 ಕ್ಕೆ ಈ ವಿದ್ಯಮಾನ ಘಟಿಸಿದ್ದು, ಜನರು ಆತಂಕಗೊಂಡಿದ್ದಾರೆ. 2004 ರ ಸುನಾಮಿ ಸಂದರ್ಭದಲ್ಲೂ ಇಂತಹ ವಿದ್ಯಾಮಾನ ನಡೆದಿತ್ತು ಎಂದು ಸ್ಥಳೀಯರು ನೆನಪಿಸಿಕೊಂಡಿದ್ದಾರೆ. ಸಮುದ್ರ ಹಿಂದಕ್ಕೆ ಸರಿದಿರುವ ಕಾರಣ ದಡದಲ್ಲಿ ಹೂಳು […]

ದೇಶದ ಅತ್ಯಂತ ಕಿರಿಯ ಮಿಲಿಯನೇರ್!! ನಾಲ್ಕು ತಿಂಗಳ ಮೊಮ್ಮಗನಿಗೆ 240 ಕೋಟಿ ಮೌಲ್ಯದ ಷೇರು ಉಡುಗೊರೆಯಾಗಿ ನೀಡಿದ ನಾರಾಯಣ ಮೂರ್ತಿ

ಬೆಂಗಳೂರು: ಇನ್ಫೋಸಿಸ್ (Infosys) ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಲೇಖಕಿ ಸುಧಾ ಮೂರ್ತಿ ಅವರ ಮಗ ರೋಹನ್ ಮೂರ್ತಿ ಮತ್ತು ಸೊಸೆ ಅಪರ್ಣಾ ಕೃಷ್ಣನ್ ಅವರಿಗೆ ನವೆಂಬರ್ 10, 2023 ರಂದು ಜನಿಸಿದ ಏಕಾಗ್ರಹ ರೋಹನ್ ಮೂರ್ತಿ ದೇಶದ ಅತ್ಯಂತ ಕಿರಿಯ ಮಿಲಿಯನೇರ್ ಆಗಿ ಹೊರಹೊಮ್ಮಿದ್ದಾನೆ. ನಾಲ್ಕು ತಿಂಗಳ ಮಗುವೀಗ ಇನ್ಫೋಸಿಸ್‌ನಲ್ಲಿ 0.04 ರಷ್ಟು ಷೇರುಗಳ ಮಾಲೀಕನಾಗಿದ್ದಾನೆ. ಏಕೆಂದರೆ, 240 ಕೋಟಿ ಮೌಲ್ಯದ ಷೇರುಗಳನ್ನು ನಾರಾಯಣ ಮೂರ್ತಿ ಮೊಮ್ಮಗನಿಗೆ ಉಡುಗೊರೆಯಾಗಿ ನೀಡಿದ್ದಾರೆ.

ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ‘ಸಿಂಟಾಕ್ಸಿಯಾ’

ಬೆಂಗಳೂರು: ಸಂತ ಜೋಸೆಫ್ ಯೂನಿವರ್ಸಿಟಿಯ ವಾರ್ಷಿಕ ಕಾರ್ಯಕ್ರಮವಾದ ‘ಸಿಂಟಾಕ್ಸಿಯಾ’ ಮಾರ್ಚ್ 12 ಮತ್ತು 13ರಂದು ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ನಡೆಯಿತು. ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ ಕಾರ್ಯಕ್ರಮದಲ್ಲಿ 20ಕ್ಕೂ ಹೆಚ್ಚಿನ ಈವೆಂಟ್ ಗಳು ನಡೆದವು. ಎಐ ನೆಕ್ಸಸ್‌ ಹೆಲ್ತ್ಕೇರ್‌ನ ಭಾರತ ಮತ್ತು ಉಪಖಂಡದ ವ್ಯವಸ್ಥಾಪಕ ಮತ್ತು ಸಂಸ್ಥಾಪಕ ಪೀಟರ್‌ ಪುಷ್ಪರಾಜ್‌ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಸೇಂಟ್‌ ಜೋಸೆಫ್‌ ವಿಶ್ವವಿದ್ಯಾಲಯದ ಐಟಿ ವಿದ್ಯಾರ್ಥಿಗಳ ಪರಿಶ್ರಮದ ಪ್ರಯತ್ನಗಳನ್ನು ಶ್ಲಾಘಿಸಿ ಅವರ ಸಾಧನೆಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಸ್ಕೂಲ್ ಆಫ್ ಇನ್ಪರ್ಮೆಶನ್ ಟೆಕ್ನಾಲಜಿ, […]

ಆಟವಾಡುತ್ತಿದ್ದ ಮಕ್ಕಳಿಗೆ ದೊರೆಯಿತು ಚೋಳರ ಕಾಲದ 12 ನೇ ಶತಮಾನದ ಅಪರೂಪದ ಮುರುಗನ್ ವಿಗ್ರಹ!!

ಚೆನ್ನೈ: ತಮಿಳುನಾಡಿನ ತಿರುವಲಂಗಾಡು ಎಂಬ ಪ್ರದೇಶದ ಬಳಿ ಕೊಸಸ್ತಲೈಯಾರ್ ನದಿಪಾತ್ರದಲ್ಲಿ ಆಟವಾಡುತ್ತಿದ್ದ ಚಿಕ್ಕ ಹುಡುಗರ ಗುಂಪೊಂದಕ್ಕೆ 12 ನೇ ಶತಮಾನದ ಅಪರೂಪದ ಮುರುಗನ್ ಪ್ರತಿಮೆ ದೊರೆತಿದೆ. 150 ಕೆಜಿ ತೂಕ ಮತ್ತು 3.5 ಅಡಿ ಎತ್ತರದ ಮೂರ್ತಿ ವಿಶಿಷ್ಟ ಲಕ್ಷಣಗಳು ಮತ್ತು ಹತ್ತಿರದ ಕಲಾಕೃತಿಗಳೊಂದಿಗೆ ಮುರುಗನನ್ನು ‘ಬ್ರಹ್ಮಶಾಸ್ತ’ ಎಂದು ಚಿತ್ರಿಸುತ್ತದೆ. ಪುರಾತತ್ವ ಇಲಾಖೆಯು ವಿಗ್ರಹವನ್ನು ಸಂರಕ್ಷಿಸಿ ಸಾರ್ವಜನಿಕ ವೀಕ್ಷಣೆಗೆ ಇಟ್ಟಿದೆ. ಬ್ರಹ್ಮಶಾಸ್ತ ಎಂದು ಕರೆಯಲ್ಪಡುವ ದೇವತೆಯ ಅಪರೂಪವಾಗಿ ಕಾಣುವ ಅಭಿವ್ಯಕ್ತಿಯನ್ನು ಚಿತ್ರಿಸುವ ಜಪಮಾಲೆ ಮತ್ತು ಕಮಂಡಲದಿಂದ ಅಲಂಕರಿಸಲ್ಪಟ್ಟ […]