ಶಾಲೆಯ ವಾರ್ಷಿಕೋತ್ಸವ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಅಶ್ಲೀಲ ಹಾಡಿಗೆ ನೃತ್ಯ ಮಾಡುವಂತಿಲ್ಲ:ಶಿಕ್ಷಣ ಇಲಾಖೆ ಖಡಕ್ ಆದೇಶ!

ಬೆಂಗಳೂರು: ಶಾಲೆ ಹಾಗೂ ಕಾಲೇಜುಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ವಾರ್ಷಿಕೋತ್ಸವಗಳಲ್ಲಿ ವಿದ್ಯಾರ್ಥಿಗಳು ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡುವುದನ್ನು ನಿಷೇಧಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಅಶ್ಲೀಲ ಹಾಡುಗಳು ವಿದ್ಯಾರ್ಥಿಗಳ ಮನೋವಿಕಾಸದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇದೆ. ಇದರಿಂದ ಶಿಸ್ತುಭಂಗ ಉಂಟಾಗುವುದರ ಜೊತೆಗೆ ಶಿಕ್ಷಣ ಸಂಸ್ಥೆಗಳ ಗೌರವಕ್ಕೂ ಧಕ್ಕೆ ತಲುಪಬಹುದು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಇಂತಹ ಹಾಡುಗಳಿಗೆ […]

ಬೆಂಗಳೂರು ಪ್ರಯಾಣಿಕರಿಗೆ ಗುಡ್ ನ್ಯೂಸ್: ಸದ್ಯದಲ್ಲೇ ಬರಲಿದೆ BMTC–ಮೆಟ್ರೋ ಸ್ಮಾರ್ಟ್ ಕಾರ್ಡ್

ನಗರ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ವೇದಿಕೆ ಸಿದ್ಧವಾಗುತ್ತಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಒಂದೇ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರಲು ಸಾರಿಗೆ ಇಲಾಖೆ ಮುಂದಾಗಿದೆ. ನಗರದಲ್ಲಿ ಪ್ರತಿದಿನ ಲಕ್ಷಾಂತರ ಪ್ರಯಾಣಿಕರು ಮೆಟ್ರೋ ಹಾಗೂ ಬಿಎಂಟಿಸಿ ಬಸ್‌ಗಳನ್ನು ಬಳಸಿ ಸಂಚರಿಸುತ್ತಿದ್ದಾರೆ. ಆದರೆ, ಇಂದಿನ ವ್ಯವಸ್ಥೆಯಲ್ಲಿ ಎರಡಕ್ಕೂ ಬೇರೆ ಬೇರೆ ಟಿಕೆಟ್ ಅಥವಾ ಕಾರ್ಡ್ ಬಳಸಬೇಕಾದ ಅನಿವಾರ್ಯತೆ ಇದೆ. ಇದರಿಂದ ಪ್ರಯಾಣಿಕರಿಗೆ ಅನಾನುಕೂಲವಾಗುತ್ತಿದ್ದು, ಸಮಯವೂ ವ್ಯರ್ಥವಾಗುತ್ತಿದೆ. ಈ ಸಮಸ್ಯೆಗೆ ಪರಿಹಾರವಾಗಿ, […]

ನೀವು ಬುಕ್ ಮಾಡಿದ್ದ ಟ್ರೈನ್ ಮಿಸ್ ಆದ್ರೆ ಹೀಗೂ ಮಾಡ್ಬೋದು!

ಪ್ರಯಾಣದ ಗಡಿಬಿಡಿಯಲ್ಲಿ ಹಲವರು ಎದುರಿಸುವ ಸಾಮಾನ್ಯ ಸಮಸ್ಯೆ ಎಂದರೆ ಟ್ರೈನ್ ಮಿಸ್ ಆಗುವುದು. ಆದರೆ ಇಂತಹ ಸಂದರ್ಭದಲ್ಲಿ ಕೈಯಲ್ಲಿರುವ ಟಿಕೆಟ್‌ನೊಂದಿಗೆ ಮತ್ತೊಂದು ರೈಲಿನಲ್ಲಿ ಪ್ರಯಾಣಿಸಬಹುದೇ ಎಂಬ ಪ್ರಶ್ನೆ ಬಹುತೇಕ ಜನರಲ್ಲಿ ಮೂಡುತ್ತದೆ. ಈ ಬಗ್ಗೆ ಭಾರತೀಯ ರೈಲ್ವೆ ನಿಯಮಗಳು ಸ್ಪಷ್ಟ ಸೂಚನೆ ನೀಡಿವೆ. ರಿಸರ್ವೇಷನ್ ಟಿಕೆಟ್ ಇದ್ದರೆ ಏನು? ಕನ್ಫರ್ಮ್ ರಿಸರ್ವೇಷನ್ ಟಿಕೆಟ್ ಹೊಂದಿದ್ದರೆ, ನೀವು ಟ್ರೈನ್ ಮಿಸ್ ಮಾಡಿದ ಬಳಿಕ ಅದೇ ಟಿಕೆಟ್ ಮೂಲಕ ಬೇರೆ ರೈಲಿನಲ್ಲಿ ಪ್ರಯಾಣಿಸಲು ಅವಕಾಶ ಇರುವುದಿಲ್ಲ. ಹೀಗೆ ಪ್ರಯಾಣಿಸಿದರೆ ಟಿಟಿಇ […]

ಶೃಂಗೇರಿ ವಿಧಾನಸಭಾ ಕ್ಷೇತ್ರದತ್ತ ಮತದಾರರ ಚಿತ್ತ, ಅಂಚೆ ಮತಗಳ ಮರುಎಣಿಕೆ, ಕಾದಿದೆಯಾ ಟ್ವಿಸ್ಟ್?

ಶೃಂಗೇರಿ: ಹೈಕೋರ್ಟ್ ನಿರ್ದೇಶನದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಕಾರ್ಯ ಮೇ 2ರಂದು ನಡೆಯಲಿದೆ. ಐಡಿಎಸ್‌ಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮರುಎಣಿಕೆಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಯನ್ನು ಜಿಲ್ಲಾಡಳಿತ ಸಿದ್ಧಪಡಿಸಿದೆ. ಮರುಎಣಿಕೆಯಲ್ಲಿ ಏನಾಗಲಿದೆ? ಯಾವ ಅಭ್ಯರ್ಥಿಗೆ ಜಾಸ್ತಿ ಮತಗಳು ಬಿದ್ದಿದೆ ಎನ್ನುವುದು ಬಹಿರಂಗವಾಗಲಿದೆ. ಹಾಗಾಗಿ ಶೃಂಗೇರಿ ವಿಧಾನಸಭಾ ಕ್ಷೇತ್ರದತ್ತ ಮತದಾರರ ಚಿತ್ತ ಮರುಎಣಿಕೆಯತ್ತ ವಾಲಿದೆ. ಮೇ 2ರಂದು ಬೆಳಿಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಹೆಚ್ಚುವರಿ ಜಿಲ್ಲಾಧಿಕಾರಿ ಗೌರವ್ ಶೆಟ್ಟಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. […]

ಉಡುಪಿ- ದ.ಕ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿತ, ಪರಿಸರ, ಅರಣ್ಯ ನಾಶದಿಂದ ಭವಿಷ್ಯ ಘೋರ ! ವರದಿ ಹೇಳಿದ್ದೇನು?

ಉಡುಪಿ/ದ.ಕ: ರಾಜ್ಯದ ಅತ್ಯಧಿಕ ಮಳೆಯ ಪ್ರದೇಶಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಈ ಬಾರಿ ಪರಿಸ್ಥಿತಿ ಭೀಕರವಾಗಿದೆ. ಹೆಸರಿಗೆ ಸ್ಮಾರ್ಟ್ ಸಿಟಿ ಎಂದು ಕರೆಸಿಕೊಳ್ಳುತ್ತಿರುವ ಮಂಗಳೂರು ಮತ್ತು ಇಡೀ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿಯುತ್ತಿದೆ. ಅಲ್ಲದೇ ಸಾಮಾನ್ಯವಾಗಿ ಮಳೆಯ ಸಮೃದ್ಧಿಯಿಂದ ಪ್ರಸಿದ್ಧಿಯಾಗಿರುವ ದ.ಕ ಜಿಲ್ಲೆಯಲ್ಲಿ ಈಗ ಬಿಸಿಲಿನ ತೀವ್ರತೆ ಹೆಚ್ಚಾಗಿ ಜನರನ್ನು ಕಂಗೆಡಿಸಿದೆ. ನೀರಿನ ಮೂಲಗಳೇ ಮಾಯ:ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ತಾಪಮಾನ 35ರಿಂದ 36 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗಿದ್ದು, ಅದರ ಪರಿಣಾಮವಾಗಿ […]