ನ್ಯಾಯ ವಿತರಣೆಯಲ್ಲಿ ಮೊದಲ ಸ್ಥಾನದಲ್ಲಿದೆ ಕರ್ನಾಟಕ ರಾಜ್ಯ ಪೊಲೀಸ್

ನವದೆಹಲಿ: ಕರ್ನಾಟಕ ರಾಜ್ಯ ಪೊಲೀಸ್ (KSP) ಭಾರತದಲ್ಲಿ ನ್ಯಾಯ ವಿತರಣೆಯಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಇತ್ತೀಚಿನ ‘ಭಾರತ ನ್ಯಾಯ ವರದಿ’ ತೋರಿಸಿದೆ. ದಕ್ಷಿಣ ರಾಜ್ಯಗಳು ಪಟ್ಟಿಯಲ್ಲಿ ಪ್ರಾಬಲ್ಯವನ್ನು ಮುಂದುವರೆಸಿವೆ ಮತ್ತು ಪೊಲೀಸ್ ಅಧಿಕಾರಿಗಳು ಮತ್ತು ಕಾನ್‌ಸ್ಟಾಬ್ಯುಲರಿಗಳಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡಗಳು (ಎಸ್‌ಟಿ) ಮತ್ತು ಇತರ ಹಿಂದುಳಿದ ವರ್ಗಗಳ (ಒಬಿಸಿ) ಕೋಟಾಗಳನ್ನು ಪೂರೈಸಿದ ಏಕೈಕ ರಾಜ್ಯ ಕರ್ನಾಟಕವಾಗಿದೆ ಎಂದು ವರದಿ ತಿಳಿಸಿದೆ. ಬೇರೆ ಯಾವುದೇ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶ ಎಲ್ಲಾ ಮೂರು ಕೋಟಾಗಳನ್ನು ಪೂರೈಸಿಲ್ಲ. […]

ಇದ್ರಿಷ್ ಹತ್ಯೆ ಪ್ರಕರಣ: ಚುನಾವಣಾ ನೀತಿ ಸಂಹಿತೆ ಜಾರಿ; ಪ್ರತಿಭಟನೆಗೆ ಅವಕಾಶ ನಿರಾಕರಿಸಿದ ಉಡುಪಿ ಚುನಾವಣಾಧಿಕಾರಿ

ಉಡುಪಿ: ಇದ್ರಿಷ್ ಹತ್ಯೆಯನ್ನು ಖಂಡಿಸಿ, ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಮತ್ತು ಕುಟುಂಬಕ್ಕೆ ಸರಕಾರಿ ಉದ್ಯೋಗ ನೀಡಬೇಕೆಂದು ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ ನಡೆಸಲು ಅನುಮತಿಗಾಗಿ ಭಾರತ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಉಡುಪಿ ಜಿಲ್ಲಾ ಸಮಿತಿ ಸಲ್ಲಿಸಿದ ಮನವಿಗೆ ಉಡುಪಿಯ ಚುನಾವಣಾಧಿಕಾರಿಯೂ ಆಗಿರುವ ತಹಶೀಲ್ದಾರ್ ಸೀತಾ ಅವರು ಅನುಮತಿ ನಿರಾಕರಿಸಿದ್ದಾರೆ ಎಂದು ಪಕ್ಷದ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪಕ್ಷ ಎ.4ರ ಮಂಗಳವಾರದಂದು ಪತ್ರ ನೀಡಿದ್ದು, ಎ.7 ಅದಕ್ಕೆ ಹಿಂಬರಹ […]

ಮೂರು ಶೂಟೌಟ್‌ ಪ್ರಕರಣಗಳಲ್ಲಿ ಬನ್ನಂಜೆ ರಾಜಾ ಖುಲಾಸೆ – ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು..!

ಮಂಗಳೂರು: ಮಂಗಳೂರಿನಲ್ಲಿ ದಾಖಲಾಗಿದ್ದ 3 ಶೂಟೌಟ್‌ ಪ್ರಕರಣಗಳಲ್ಲಿ ಬನ್ನಂಜೆರಾಜನನ್ನು ಖುಲಾಸೆಗೊಳಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2000ನೇ ಇಸವಿಯಲ್ಲಿ ಬಂಟ್ಸ್‌ ಹಾಸ್ಟೆಲ್‌ ನಿವಾಸಿ ಇರವಿನ್‌ ಪಿಂಟೋ ಮತ್ತು ಅವರ ಪತ್ನಿ ರಾತ್ರಿ ಮದುವೆ ಸಮಾರಂಭಕ್ಕೆ ಹೋಗಿ ಮನೆಗೆ ವಾಪಸಾಗುವ ವೇಳೆ ಹೊಯ್ಗೆ ಬಜಾರ್‌ ಬಳಿ ಬೆ„ಕ್‌ ನಲ್ಲಿ ಬಂದಂತಹ ಅಪರಿಚಿತರು ಕಾರನ್ನು ಅಡ್ಡಗಟ್ಟಿ ಶೂಟೌಟ್‌ ಮಾಡಿ ಕೊಲೆ ಯತ್ನ ನಡೆಸಿ ಹಣಕ್ಕೆ ಬೇಡಿಕೆ ಇಟ್ಟ ಬಗ್ಗೆ ಪಾಂಡೇಶ್ವರ ಪೊಲೀಸ್‌ಠಾಣೆಯಲ್ಲಿ ಬನ್ನಂಜೆರಾಜ […]

ಏ.10ಕ್ಕೆ ಬಿಜೆಪಿ 100 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಬೆಂಗಳೂರು: ವಿಧಾನಸಭಾ ಚುನಾವಣಾಗೆ ಭರ್ಜರಿ ತಯಾರಿ ನಡೆಸುತ್ತಿರುವ ರಾಜಕೀಯ ಪಕ್ಷಗಳ ನಡುವೆ  , ಕೊನೆಗೂ ಆಡಳಿತರೂಢ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಭಾನುವಾರ ರಾತ್ರಿ ಅಂತಿಮಗೊಳ್ಳಲಿದೆ 2018 ರಲ್ಲಿ ನಾಲ್ಕು ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ ಈ ಬಾರಿ ಮೂರು ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡಲು ಚಿಂತನೆ ನಡೆಸಿದದ್ದು, ಮೊದಲ ಪಟ್ಟಿಯಲ್ಲಿ 100 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಲಿದೆ. ಇನ್ನೂ ಮೊದಲ ಪಟ್ಟಿಯಲ್ಲಿ ಹಾಲಿ ಶಾಸಕರಿಗೆ ಮಣೆ ಹಾಕುವಂತಹ ಸಾಧ್ಯತೆ ಹೆಚ್ಚಾಗಿದೆ. ಈ ನಡುವೆ […]

ಏಪ್ರಿಲ್‌ 8ರಂದು ಮಂಗಳೂರಿನಿಂದ ಮುಂಬೈಗೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ವಿಶೇಷ ರೈಲು…!!

ನವದೆಹಲಿ: ಮಂಗಳೂರು ಜಂಕ್ಷನ್‌ನಿಂದ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್‌ಗೆ ಏಕಮುಖ ವಿಶೇಷ ರೈಲನ್ನು ಭಾರತೀಯ ರೈಲ್ವೆ ಇಲಾಖೆ ಘೋಷಿಸಿದೆ. ಈ ಮೂಲಕ ಮಂಗಳೂರಿನಿಂದ ಮುಂಬೈಗೆ ಪ್ರಯಾಣಿಸುವ ಜನರು ಈಗ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. 06007 ಸಂಖ್ಯೆಯ ರೈಲನ್ನು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ಆರಂಭಿಸಲಾಗುತ್ತಿದೆ. ಮೂಲಗಳ ಪ್ರಕಾರ, ಮಂಗಳೂರು ಜಂಕ್ಷನ್‌ನಿಂದ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್‌ಗೆ ಹೊರಡುವ ವಿಶೇಷ ರೈಲು ಮಂಗಳೂರಿನಿಂದ ಏಪ್ರಿಲ್‌ 8ರಂದು ಸಂಜೆ 6.10ಕ್ಕೆ ಹೊರಟು 9ರಂದು ಮಧ್ಯಾಹ್ನ 1.15ಕ್ಕೆ ಮುಂಬೈ ತಲುಪಲಿದೆ. […]