ತೇಜಸ್ವಿ ಸೂರ್ಯ ವಿಮಾನ ತುರ್ತು ನಿರ್ಗಮನ ಬಾಗಿಲು ತೆರೆದ ಪ್ರಕರಣ: ಸಹ ಪ್ರಯಾಣಿಕ ಅಣ್ಣಾಮಲೈ ಸ್ಪಷ್ಟನೆ

ಚೆನ್ನೈ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಚೆನ್ನೈ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದ ತುರ್ತು ನಿರ್ಗಮನವನ್ನು ಅನಧಿಕೃತವಾಗಿ ತೆರೆದಿದ್ದಾರೆ ಎನ್ನುವ ಆರೋಪದ ನಂತರ, ಬಿಜೆಪಿ ತಮಿಳುನಾಡು ಘಟಕದ ಮುಖ್ಯಸ್ಥ ಕೆ ಅಣ್ಣಾಮಲೈ ಗುರುವಾರದಂದು ಮೌನ ಮುರಿದು ಘಟನೆಯ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ. ಡಿಸೆಂಬರ್ 10 ರಂದು ನಡೆದಿದೆ ಎನ್ನಲಾದ ಘಟನೆಯ ಸಮಯ ವಿಮಾನದಲ್ಲಿ ತೇಜಸ್ವಿ ಸೂರ್ಯ ಅವರ ಪಕ್ಕದಲ್ಲಿ ಕುಳಿತಿದ್ದ ಅಣ್ಣಾಮಲೈ ಅವರು ತಮ್ಮ ಪಕ್ಷದ ಸಹೋದ್ಯೋಗಿ ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ. TN […]

ಜನವರಿ 29ರಂದು ಮೈಸೂರಿನಲ್ಲಿ ಸಾಹಸಸಿಂಹ ಡಾ.ವಿಷ್ಣುವರ್ಧನ್ ರವರ ಸ್ಮಾರಕ ಉದ್ಘಾಟನೆ

ಮೈಸೂರು: ಇಲ್ಲಿನ ಎಚ್​.ಡಿ. ಕೋಟೆ ರಸ್ತೆಯ ಅಲ್ಲಾಳು ಗ್ರಾಮದಲ್ಲಿ ಜನವರಿ 29ರಂದು ಬೆಳಗ್ಗೆ 11 ಗಂಟೆಗೆ ಡಾ.ವಿಷ್ಣುವರ್ಧನ್​ ಅವರ ಸ್ಮಾರಕದ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಚಿತ್ರನಟ ಅನಿರುದ್ದ್ ಹೇಳಿದ್ದಾರೆ. ‘ಸಾಹಸ ಸಿಂಹ’ ಡಾ.ವಿಷ್ಣವರ್ಧನ್ ರವರ ಸ್ಮಾರಕದ ಉದ್ಘಾಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರಲಿದ್ದಾರೆ.ಉದ್ಘಾಟನಾ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಪಾಲ್ಗೊಳ್ಳಬೇಕು ಎಂದು ಅನಿರುದ್ಧ್ ಹೇಳಿದ್ದಾರೆ.

ಸ್ಮಶಾನ ಕಾರ್ಮಿಕರಿಗೆ ‘ಸತ್ಯ ಹರಿಶ್ಚಂದ್ರ ಬಳಗ’ವೆಂದು ಸಂಬೋಧನೆ: ಮುಖ್ಯಮಂತ್ರಿ ಬೊಮ್ಮಾಯಿ ಆದೇಶ

ಬೆಂಗಳೂರು: ಇನ್ನು ಮುಂದೆ ಸ್ಮಶಾನ ಕಾರ್ಮಿಕರನ್ನು ‘ಸತ್ಯ ಹರಿಶ್ಚಂದ್ರ ಬಳಗ’ ಎಂದು ಸಂಬೋಧಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಬಿಬಿಎಂಪಿ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಇದರ ಜೊತೆಗೆ ಪೌರ ಕಾರ್ಮಿಕರನ್ನು ಖಾಯಂ ಮಾಡುವ ಬಗ್ಗೆಯೂ ಸೂಚನೆ ನೀಡಿದ್ದಾರೆ. ಸ್ಮಶಾನ ಕಾರ್ಮಿಕರು ಎಲ್ಲರಿಗೂ ಮುಕ್ತಿ ಕೊಡುವ ಕಾರ್ಯಮಾಡುತ್ತಾರೆ. ಅವರಿಗೆ ಸತ್ಯ ಹರಿಶ್ಚಂದ್ರ ಬಳಗ ಎಂದು ನಾಮಕರಣ ಮಾಡಿ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ತಮ್ಮ ರೇಸ್ ಕೋರ್ಸ್ ರಸ್ತೆಯ ನಿವಾಸದಲ್ಲಿ ಸ್ಮಶಾನ ಕಾರ್ಮಿಕರೊಂದಿಗೆ ಬೆಳಗ್ಗಿನ ಉಪಾಹಾರ ಸೇವಿಸುವ ಕಾರ್ಯಕ್ರಮದಲ್ಲಿ ಅವರು ಈ […]

ಕೆ.ಪಿ.ಟಿ.ಸಿ.ಎಲ್ ನೇರ ನೇಮಕಾತಿ ಪರೀಕ್ಷೆಗಳ ಫಲಿತಾಂಶ ಪ್ರಕಟ

ಬೆಂಗಳೂರು: ಕೆಪಿಟಿಸಿಎಲ್ (ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ) ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್​ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಇಂಧನ ಸಚಿವ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಕೆ.ಪಿ.ಟಿ.ಸಿ.ಎಲ್ ನಲ್ಲಿ ವಿವಿಧ ಹುದ್ದೆಗಳಿಗಾಗಿ ನಡೆದ ನೇರ ನೇಮಕಾತಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೂ ಹಾರ್ದಿಕ ಅಭಿನಂದನೆಗಳು. ನಿಮ್ಮ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸುತ್ತೇನೆ. ಫಲಿತಾಂಶವನ್ನು ತಿಳಿಯಲು  https://cetonline.karnataka.gov.in/kea/kptcl2022 ಲಿಂಕ್ ಅನ್ನು […]

ಬೆಂಗಳೂರು-ಮಂಗಳೂರು ಮಾರ್ಗಕ್ಕೆ ಗತಿ ಶಕ್ತಿ: ರಾ.ಹೆ -75ರ ನೆಲಮಂಗಲ-ದೇವಿಹಳ್ಳಿ ರಸ್ತೆ ಕಾಮಗಾರಿ ಸಂಪೂರ್ಣ

ಬೆಂಗಳೂರು: ಬೆಂಗಳೂರು-ಮಂಗಳೂರು ರಾ.ಹೆ-75 ರಲ್ಲಿ ನೆಲಮಂಗಲ-ದೇವಿಹಳ್ಳಿ ನಡುವಿನ ವಿಭಾಗವನ್ನು ಯಶಸ್ವಿಯಾಗಿ ನಿರ್ಮಿಸಲಾಗಿದೆ. ಈ ವಿಭಾಗವು ಮೈಸೂರು, ಸಕಲೇಶಪುರ, ಹೆಳೇಬೀಡು, ಧರ್ಮಸ್ಥಳ ಮುಂತಾದ ಪ್ರವಾಸಿ ತಾಣಗಳಿಗೆ ವೇಗದ ಸಂಪರ್ಕವನ್ನು ಸಶಕ್ತಗೊಳಿಸುತ್ತದೆ . ವಾರಾಂತ್ಯದಲ್ಲಿ ಈ ಮಾರ್ಗವು ಸುಮಾರು 30000 ವಾಹನಗಳನ್ನು ಧಾರಣೆ ಮಾಡುವ ಸಾಮಾರ್ಥ್ಯ ಹೊಂದಿದೆ ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಇದು ಬೆಂಗಳೂರು-ಮಂಗಳೂರು, ಬೆಂಗಳೂರು-ಮೈಸೂರು, ಬೆಂಗಳೂರು-ಹಾಸನ-ಸಕಲೇಶಪುರ-ಧರ್ಮಸ್ಥಳವನ್ನು ಸಂಪರ್ಕಿಸುವ ಮಾರ್ಗವಾಗಿಯೂ ಕಾರ್ಯನಿರ್ವಹಿಸುತ್ತದೆ. ಮೈಕ್ರೊ-ಸರ್ಫೇಸಿಂಗ್ ಮಿಶ್ರಣದ ಬಾಗುವ ಶಕ್ತಿಯನ್ನು ಹೆಚ್ಚಿಸಲು ಫೈಬರ್ ಬಲವರ್ಧಿತ […]