24ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಏರ್ ಫೋರ್ಸ್​ ಇಂಜಿನಿಯರ್!

ಬೆಂಗಳೂರು: ಬೆಂಗಳೂರಿನಲ್ಲಿ ಭಾರತೀಯ ವಾಯುಪಡೆಯ ಎಂಜಿನಿಯರ್ ಒಬ್ಬರು ಸೆ.14 ರಂದು ಸಂಜೆ 24ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹಲಸೂರು ಮಿಲಿಟರಿ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದ 25 ವರ್ಷದ ಲೋಕೇಶ್ ಪವನ್ ಕೃಷ್ಣ ಎಂದು ಮೃತನನ್ನು ಗುರುತಿಸಲಾಗಿದೆ. ಬೆಂಗಳೂರಿನ ಪ್ರೆಸ್ಟೀಜ್ ಜಿಂದಾಲ್ ಸಿಟಿ ಅಪಾರ್ಟ್‌ಮೆಂಟ್‌ನ 24 ನೇ ಮಹಡಿಯಿಂದ ಭಾರತೀಯ ವಾಯುಪಡೆಯ ಎಂಜಿನಿಯರ್ ಲೋಕೇಶ್ ಜಿಗಿದಿದ್ದಾರೆ. ನಿನ್ನೆ ಸಂಜೆ ಲೋಕೇಶ್ ತಮ್ಮ ಸಹೋದರಿ ಲಕ್ಷ್ಮಿ ಅವರನ್ನು ಭೇಟಿ ಮಾಡಿದ್ದರು, ಅಲ್ಲಿ ಯಾವುದೋ ವಿಷಯದಿಂದ ಅವರ ಮನಸ್ಥಿತಿ […]

ನೇಪಾಳ ಪ್ರತಿಭಟನೆ; ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆ: ಸಿಎಂ

ಬೆಂಗಳೂರು: ನೇಪಾಳದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಘಟನೆ ಬೆನ್ನಲ್ಲೇ ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ. ನೇಪಾಳ ಪರಿಸ್ಥಿತಿ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ […]

ನೇಪಾಳದಲ್ಲಿ ಫೇಸ್‌ಬುಕ್, ಯೂಟ್ಯೂಬ್, ಇನ್‌ಸ್ಟಾಗ್ರಾಮ್’ನಂತಹ 26 ಸಾಮಾಜಿಕ ಮಾಧ್ಯಮ ಬ್ಯಾನ್ ವಿರುದ್ಧ ಪ್ರತಿಭಟನೆ

ನೇಪಾಳ: ನೇಪಾಳದ ಕೆಪಿ ಓಲಿ ಸರ್ಕಾರವು ಫೇಸ್‌ಬುಕ್, ಯೂಟ್ಯೂಬ್ ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್‌ನಂತಹ 26 ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಷೇಧಿಸುವ ನಿರ್ಧಾರದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಹಿಂಸಾಚಾರದಲ್ಲಿ 19 ಮಂದಿ ಸಾವನ್ನಪ್ಪಿದ್ದು 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಯುವಕರು ರೀಲ್ಸ್ ಮಾಡುವುದಕ್ಕೆ ಸರ್ಕಾರ ಕಡಿವಾಣ ಹಾಕಿದ ಬೆನ್ನಲ್ಲೇ ಯುವಜನತೆ ಬೀದಿಗಿಳಿದು ಪ್ರಶ್ನೆಗಳನ್ನು ಕೇಳಲು ಪ್ರಾರಂಭಿಸಿದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಪ್ರಾರಂಭಿಸಿದ್ದು ಉದ್ಯೋಗಗಳು ಎಲ್ಲಿವೆ ಎಂದು ಕೇಳಲು ಪ್ರಾರಂಭಿಸಿದ್ದಾರೆ. ಸರ್ಕಾರವು ಸೈನ್ಯವನ್ನು ನಿಯೋಜಿದ್ದು ಕರ್ಫ್ಯೂ ವಿಧಿಸಿದೆ. […]

ಮಹಾರಾಷ್ಟ್ರ: ಗಣೇಶ ಮೂರ್ತಿ ಕೈಯಲ್ಲಿದ್ದ ಮೋದಕ 1.58 ಲಕ್ಷ ರೂ.ಗೆ ಹರಾಜು

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರ್​ನಾಥ್​ದಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ಮೂರ್ತಿ ಕೈಯಲ್ಲಿದ್ದ ಮೋದಕ(ಸಿಹಿ ಕಡುಬು)1.85 ಲಕ್ಷ ರೂ.ಗೆ ಸೋಮವಾರ ಹರಾಜಾಗುವ ಮೂಲಕ ಎಲ್ಲರ ಗಮನ ಸೆಳೆದಿದೆ. ಹೌದು, ಇಲ್ಲಿನ ಶ್ರೀ ಖತುಶ್ಯಾಮ್​ ಗಣಪತಿ ಮಂಡಳಿ ಪ್ರತಿ ವರ್ಷದಂತೆ ಈ ಬಾರಿ ಕೂಡ ಮೋದಕ ಹರಾಜಾಗಿದೆ. ಆದರೆ, ಬರೊಬ್ಬರಿ 1.85 ಲಕ್ಷ ರೂ.ಗೆ ಹರಾಜಾಗಿರೋದು ಎಲ್ಲರ ಕಣ್ಣು ಹುಬ್ಬೆರುವಂತೆ ಮಾಡಿದೆ.10 ದಿನಗಳ ಉತ್ಸವದ ಕೊನೆಯ ದಿನದಂದು ಮೋದಕವನ್ನು ವಿಗ್ರಹದ ಕೈಯಲ್ಲಿ ಇರಿಸಿದ ನಂತರ ಹರಾಜು ಮಾಡುವುದು ಕಳೆದ 11 […]

ಕೇಂದ್ರ ಸರಕಾರದ ಜಿಎಸ್ ಟಿ ರಿಯಾಯಿತಿಯನ್ನು ಜನಸಾಮಾನ್ಯರಿಗೆ ತಲುಪಿಸಿ- ಅಂಡಾರು ದೇವಿಪ್ರಸಾದ್ ಶೆಟ್ಟಿ

ಉಡುಪಿ: ವೈಯಕ್ತಿಕ ವೈದ್ಯಕೀಯ ವಿಮೆ ಹಾಗೂ ಜೀವ ವಿಮೆಯನ್ನು ಸೊನ್ನೆ ಮಾಡಿ ಶೇ. 99ರಷ್ಟು ದಿನ ಬಳಕೆಯ ವಸ್ತುಗಳನ್ನು ಶೇ. 5ರ ವ್ಯಾಪ್ತಿಗೆ ತಂದು ಶೇ. 98ರ ವ್ಯಾಪ್ತಿಯಲ್ಲಿ ಇದ್ದ ಐಷಾರಾಮಿ ವಸ್ತುಗಳನ್ನು ಕೂಡ ಶೇ. 18ರ ಮಿತಿಗೆ ತಂದಿರುವ ಕ್ರಮವನ್ನು ವಾಣಿಜ್ಯ ಮತ್ತು ಕೈಗಾರಿಕೆಗಳು ಮುಕ್ತ ಕಂಠದಿಂದ ಸ್ವಾಗತಿಸುತ್ತೇವೆ. ಇದರಿಂದ ಉತ್ಪಾದನಾ ರಂಗಕ್ಕೆ ಹೊಸ ಪ್ರೋತ್ಸಾಹ ಬರುತ್ತಿದ್ದು, ದೇಶಿಯ ವಸ್ತುಗಳು ಜನ ಸಾಮಾನ್ಯರಿಗೆ ಕೈಗೆಟಕುವ ದರಗಳಲ್ಲಿ ದೊರಕಲಿದೆ. ಉತ್ಪಾದಕರು ಸರಕಾರ ನೀಡಿದ ರಿಯಾಯಿತಿಯನ್ನು ಜನ ಸಾಮಾನ್ಯರಿಗೆ […]