ಹೊಟ್ಟೆ ನೋವೆಂದು ಆಸ್ಪತ್ರೆಗೆ ಬಂದಿದ್ದ ವ್ಯಕ್ತಿಯ ಹೊಟ್ಟೆಯಲ್ಲಿತ್ತು 187 ನಾಣ್ಯಗಳು: ತಬ್ಬಿಬ್ಬಾದ ವೈದ್ಯರು

ಬಾಗಲಕೋಟೆ: ಇಲ್ಲಿ ವ್ಯಕ್ತಿಯೊಬ್ಬರು ವಾಂತಿ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭ ಆತನ ಹೊಟ್ಟೆಯೊಳಗೆ ನಾಣ್ಯಗಳನ್ನು ಕಂಡು ವೈದ್ಯರು ತಬ್ಬಿಬ್ಬಾಗಿದ್ದಾರೆ. ಹಾನಗಲ್ ನ ಶ್ರೀ ಕುಮಾರೇಶ್ವರ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವೈದ್ಯರು ವ್ಯಕ್ತಿಯ ಹೊಟ್ಟೆ ನೋವು ಮತ್ತು ವಾಂತಿಗೆ ಕಾರಣವಾಗುವ ಸಮಸ್ಯೆ ಏನೆಂಬುದನ್ನು ಹುಡುಕುತ್ತಿದ್ದಾಗ ಆತನ ಹೊಟ್ಟೆಯಲ್ಲಿ ನಾಣ್ಯಗಳಿರುವುದು ಪತ್ತೆಯಾಗಿದೆ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಈತ ಕಳೆದ 2-3 ತಿಂಗಳಿಂದ ನಾಣ್ಯಗಳನ್ನು ನುಂಗುತ್ತಿದ್ದ. ವಾಂತಿ, ಹೊಟ್ಟೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ […]

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೀವನಾಧಾರಿತ ಚಲನ ಚಿತ್ರ ತೆರೆಗೆ: ನಿರ್ಮಾಪಕರ ಜೊತೆ ಮಾತುಕತೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜೀವನಾಧಾರಿತ ಕನ್ನಡ ಚಲನಚಿತ್ರವು ತೆರೆಗೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ. ಕರ್ನಾಟಕದಲ್ಲಿ ಏಪ್ರಿಲ್-ಮೇ 2023 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಈ ಚಿತ್ರ ತೆರೆಕಾಣುವ ನಿರೀಕ್ಷೆ ಇದೆ. ಮಾಜಿ ಶಾಸಕ ಶಿವರಾಜ್ ತಂಗಡಗಿ ಮತ್ತು ಶಾಸಕ ಬಿ ಜೆಡ್ ಜಮೀರ್ ಅಹಮದ್ ಖಾನ್ ಅವರು ಸಿದ್ದರಾಮಯ್ಯ ಅವರ ವೈಯಕ್ತಿಕ ಮತ್ತು ರಾಜಕೀಯ ಪ್ರಯಾಣವನ್ನು ಬಿಂಬಿಸುವ ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ‘ಹೌದು ಹುಲಿಯಾ’ […]

ಕೆ.ಎಸ್.ಆರ್.ಟಿ.ಸಿಯ ಹೊಸ ಮಾದರಿ ಬಸ್ ಗಳಿಗೆ ಬ್ರ್ಯಾಂಡ್ ನೇಮ್ ಮತ್ತು ಗ್ರಾಫಿಕ್ ನೀಡಿ ನಗದು ಬಹುಮಾನ ಗೆಲ್ಲಿ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಯು ತನ್ನ ಪ್ರಯಾಣಿಕರಿಗೆ ಅತ್ಯುನ್ನತ ಶ್ರೇಣಿಯ ಪ್ರವಾಸದ ಅನುಭವವನ್ನು ನೀಡಲು ನೂತನ ಶ್ರೇಣಿಯ ವಾಹನ ಸೇವೆಯನ್ನು ಪರಿಚಯಿಸುತ್ತಿದ್ದು, ಸಂಸ್ಥೆಯ ಬಿಎಸ್ ವಿಐ- 9600 ವೋಲ್ವೋ ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ ಮತ್ತು ಒಲೆಕ್ಟ್ರಾ ಎಲೆಕ್ಟ್ರಿಕ್ ಬಸ್ ಗಳಿಗೆ ಸಾರ್ವಜನಿಕರಿಂದ ಬ್ರ್ಯಾಂಡ್ ನೇಮ್, ಟ್ಯಾಗ್ ಲೈನ್ ಹಾಗೂ ಗ್ರಾಫಿಕ್ ವಿನ್ಯಾಸವನು ನಿರೀಕ್ಷಿಸುತ್ತಿದೆ. ಉತ್ತಮ ಟ್ಯಾಗ್ ಲೈನ್ ನೊಂದಿಗೆ ಬ್ರ್ಯಾಂಡ್ ಹೆಸರನ್ನು ಸೂಚಿಸಿದವರಿಗೆ ಪ್ರತಿ ಮಾದರಿ ಬಸ್ಸಿಗೆ 10,000 ರೂ ನಗದು ಬಹುಮಾನ ಹಾಗೂ ಉತ್ತಮ ಗ್ರಾಫಿಕ್ಸ್ […]

ರಿಷಭ್ ಶೆಟ್ಟಿಯವರನ್ನು ಭೇಟಿಯಾದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್: ಚಿತ್ರ ನಿರ್ಮಾಣಕ್ಕೆ ಸರ್ಕಾರದ ಬೆಂಬಲದ ಬಗ್ಗೆ ಚರ್ಚೆ

ಪಣಜಿ: ಭಾರತದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಲು ರಿಷಭ್ ಶೆಟ್ಟಿ ಗೋವಾಕ್ಕೆ ತೆರಳಿದ್ದ ಸಂದರ್ಭದಲ್ಲಿ ಅವರು ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ. ರಿಷಭ್ ಅವರನ್ನು ಭೇಟಿಯಾದ ಬಳಿಕ ಸಾವಂತ್ ಟ್ವೀಟ್ ಮಾಡಿ, “ನಟ, ಬರಹಗಾರ, ಚಲನಚಿತ್ರ ನಿರ್ಮಾಪಕ ರಿಷಭ್ ಶೆಟ್ಟಿ ಅವರನ್ನು ಮಹಾಲಕ್ಷ್ಮಿ, ಪಣಜಿಯಲ್ಲಿ ಭೇಟಿ ಮಾಡಿ ಸಂವಾದ ನಡೆಸಿದೆ. ಅವರ ಕಾಂತಾರ ಚಿತ್ರ ಜನಮನ್ನಣೆ ಗಳಿಸಿದೆ. ವಿವಿಧ ವಿಷಯಗಳ ಕುರಿತು ಚರ್ಚಿಸಿದೆ ಮತ್ತು ಗೋವಾದಲ್ಲಿ ಚಲನಚಿತ್ರ ನಿರ್ಮಾಣಕ್ಕೆ ಗೋವಾ ಸರ್ಕಾರದ ಬೆಂಬಲವನ್ನು ಪುನರುಚ್ಚರಿಸಿದೆ” […]

ನಾಡದೇವಿಯ ಚಿತ್ರ ಅಂತಿಮಗೊಳಿಸಿದ ಸಮಿತಿ: ಸರ್ಕಾರಕ್ಕೆ ಶಿಫಾರಸು ಸಲ್ಲಿಕೆ

ಬೆಂಗಳೂರು: ರಾಜ್ಯ ಸರ್ಕಾರವು ಎಲ್ಲ ಅಧಿಕೃತ ಉದ್ದೇಶಗಳಿಗೆ ಕನ್ನಡ ಮಾತೆ, ಭುವನೇಶ್ವರಿ ದೇವಿಯ ಚಿತ್ರವನ್ನು ಚಿತಪಡಿಸಲು ಸರ್ಕಾರವು ನೇಮಿಸಿದ ಐದು ಸದಸ್ಯರ ಸಮಿತಿಯು ಚಿತ್ರವನ್ನು ಅಂತಿಮಗೊಳಿಸಿದೆ. ನಾಡದೇವಿಯ ನಿರ್ದಿಷ್ಟ ಚಿತ್ರದ ಕೊರತೆಯಿರುವುದನ್ನು ಮನಗಂಡ ಸರ್ಕಾರ ಎಲ್ಲ ಅಧಿಕೃತ ಉದ್ದೇಶಗಳಿಗೆ ಉಪಯೋಗಿಸಲು ಏಕಪ್ರಕಾರದ ಚಿತ್ರವನ್ನು ಆಯ್ಕೆ ಮಾಡಲು ಡಿ.ಮಹೇಂದ್ರ ಅವರ ಅಧ್ಯಕ್ಷತೆಯಲ್ಲಿ ಐವರು ಚಿತ್ರಕಲಾವಿದರ ಸಮಿತಿಯನ್ನು ರಚಿಸಿತ್ತು. ಲಲಿತಾ ಕಲಾ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷ ಡಿ. ಮಹೇಂದ್ರ ಅವರ ಅಧ್ಯಕ್ಷತೆಯ ಈ ಸಮಿತಿಯು ಕರ್ನಾಟಕ ರಾಜ್ಯದ ನಾಡದೇವತೆಯ ಅಧಿಕೃತ […]