ಮಕ್ಕಳು ಸೇರಿದಂತೆ 14 ದಲಿತರನ್ನು ಬಂಧನದಲ್ಲಿಟ್ಟ ಕಾಫಿ ಎಸ್ಟೇಟ್ ಮಾಲೀಕರ ವಿರುದ್ದ ಪ್ರಕರಣ ದಾಖಲು

ಚಿಕ್ಕಮಗಳೂರು: ಇಲ್ಲಿನ ಹುಸನೇಹಳ್ಳಿಯಲ್ಲಿ ಕಾಫಿ ಎಸ್ಟೇಟ್ ಮಾಲೀಕರೊಬ್ಬರು ಹಣಕಾಸಿನ ವಿಚಾರದಲ್ಲಿ 14 ದಲಿತರನ್ನು ಥಳಿಸಿ ಒಂದು ದಿನದ ಮಟ್ಟಿಗೆ ಅವರೆಲ್ಲರನ್ನು ಬಂಧಿಸಿಟ್ಟಿದ ವಿಚಾರದಲ್ಲಿ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಕಾಫಿ ಎಸ್ಟೇಟ್ ಮಾಲೀಕ ಜಗದೀಶಗೌಡ ಮತ್ತು ಅವರ ಪುತ್ರ ತಿಲಕ್ ವಿರುದ್ಧ ಪೊಲೀಸರು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳು ಮತ್ತು ಎಸ್ಸಿ-ಎಸ್ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಗಾಯಗೊಂಡಿರುವ ಮಹಿಳೆಯೊಬ್ಬರು, ಸಂತ್ರಸ್ತರನ್ನು ಹೊಡೆಯುವ […]
ಅಕ್ಟೋಬರ್ 13 ರಿಂದ16 ರವರೆಗೆ ದಕ್ಷಿಣ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ: ಲಾಂಛನ ಬಿಡುಗಡೆ

ಮಂಡ್ಯ: ಇಲ್ಲಿನ ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾಕುಂಭಮೇಳದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶುಕ್ರವಾರದಂದು ಬಿಡುಗಡೆಗೊಳಿಸಿದರು. ಅಕ್ಟೋಬರ್ 13,14,15,16 ರಂದು ಕೆಆರ್ ಪೇಟೆಯ ಅಂಬಿಗರಹಳ್ಳಿ, ಸಂಗಾಪುರ ಹಾಗೂ ಪುರದ ಕಾವೇರಿ-ಹೇಮಾವತಿ-ಲಕ್ಷ್ಮಣ ತೀರ್ಥಗಳ ಸಮಾಗಮವಾಗುವ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರತಿದಿನ ಗಂಗಾರತಿ, ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಮಹಾಕುಂಭಮೇಳದ ವಿಶೇಷ ಲಾಂಛನ ಸಿದ್ದಪಡಿಸಲಾಗಿದೆ. ಮಹಾಕುಂಭಮೇಳದ ಸಿದ್ದತೆ ಕುರಿತು ಬೊಮ್ಮಾಯಿಯವರು ಮಾಹಿತಿ ಪಡೆದುಕೊಂಡಿದ್ದಾರೆ. ಇದು ರಾಜ್ಯದ ಮಹತ್ವದ […]
ಪ.ಜಾತಿ/ಪ.ಪಂಗಡದ ಮೀಸಲಾತಿ ಏರಿಕೆಗೆ ರಾಜ್ಯ ಸರ್ಕಾರ ನಿರ್ಧಾರ: ಪ.ಜಾತಿಗೆ 17ಶೇ ಮತ್ತು ಪ.ಪಂಗಡಕ್ಕೆ 7ಶೇ ಏರಿಕೆ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ ಸಂಬಂಧಿಸಿದಂತೆ ಸರ್ವ ಪಕ್ಷ ಸಭೆಯಲ್ಲಿ ಕಾನೂನು ಮತ್ತು ಸಂವಿಧಾನಾತ್ಮಕವಾಗಿ ಮೀಸಲಾತಿ ಹೆಚ್ಚಿಸುವ ಕುರಿತು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ನ್ಯಾ.ನಾಗಮೋಹನ್ ದಾಸ್ ವರದಿ ಪ್ರಕಾರ ಪರಿಶಿಷ್ಟ ಜಾತಿ ಸಮುದಾಯಕ್ಕೆ ಶೇ.15 ರಿಂದ ಶೇ.17 ಹಾಗೂ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಶೇ.3 ರಿಂದ ಶೇ.7 ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ರಾಜ್ಯದ […]
ಕೂಡಲ ಸಂಗಮ ಕ್ಷೇತ್ರದ ಕಾಮಗಾರಿ ಜನವರಿಯೊಳಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸೂಚನೆ

ಬೆಂಗಳೂರು: 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ಐಕ್ಯ ಸ್ಥಳವಾದ ಕೂಡಲ ಸಂಗಮ ಕ್ಷೇತ್ರದ ಎಲ್ಲಾ ಕಾಮಗಾರಿಗಳನ್ನು 2023ರ ಜನವರಿಯೊಳಗೆ ಪೂರ್ಣಗೊಳಿಸುವಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಸೂಚನೆ ನೀಡಿದ್ದಾರೆ. ಗುರುವಾರ ಇಲ್ಲಿ ನಡೆದ ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರದ 16ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಸವಣ್ಣ ಅಂತರಾಷ್ಟ್ರೀಯ ಕೇಂದ್ರದ ಕಟ್ಟಡ, ಡಿಜಿಟಲ್ ಕೇಂದ್ರ, ವಸ್ತುಪ್ರದರ್ಶನ ಹಾಗೂ ಕೂಡಲ ಸಂಗಮ ವಾಣಿಜ್ಯ ಸಂಕೀರ್ಣ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಈ ಕಾಮಗಾರಿಗಳು ಬಸವಣ್ಣವರ ಬದುಕು, […]
ಭಾರತ್ ಜೋಡೋ ಯಾತ್ರೆ ಪೋಸ್ಟರ್ನಲ್ಲಿ ಸಾವರ್ಕರ್: ದುಷ್ಕರ್ಮಿಗಳ ಕೃತ್ಯ ಎಂದ ಕಾಂಗ್ರೆಸ್

ಮಂಡ್ಯ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ ಪೋಸ್ಟರಿನಲ್ಲಿ ವಿನಾಯಕ ದಾಮೋದರ್ ಸಾವರ್ಕರ್ ಅವರ ಚಿತ್ರವನ್ನು ಹಾಕಲಾಗಿದ್ದು, ಕಾಂಗ್ರೆಸ್ ಪಕ್ಷವು ಇದು ಯಾರೋ ದುಷ್ಕರ್ಮಿಗಳ ಕೃತ್ಯ ಎಂದು ಆರೋಪಿಸಿದೆ. ಈ ಹಿಂದೆ ಕೇರಳದಲ್ಲಿಯೂ ಸಾವರ್ಕರ್ ಅವರ ಚಿತ್ರವನ್ನು ಹೊಂದಿರುವ ಪೋಸ್ಟರ್ ಒಂದನ್ನು ಹಾಕಲಾಗಿತ್ತು. ಇದೀಗ ಮಂಡ್ಯದಲ್ಲಿ ರಾಹುಲ್ ಗಾಂಧಿ ಇರುವ ಪೋಸ್ಟರಿನಲ್ಲಿ ಮತ್ತೆ ಸಾವರ್ಕರ್ ಭಾವಚಿತ್ರ ಹಾಕಲಾಗಿರುವುದು ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ.