ಪುಣ್ಯಕೋಟಿ ದತ್ತು ಸ್ವೀಕಾರ ಯೋಜನೆಗೆ ನಟ ಕಿಚ್ಚ ಸುದೀಪ್ ರಾಯಭಾರಿ

ಬೆಂಗಳೂರು: ಗೋಶಾಲೆಯಲ್ಲಿ ರಕ್ಷಿಸಲ್ಪಟ್ಟ ಅನಾಥ ಗೋವುಗಳ ಪಾಲನೆ, ಪೋಷಣೆಗೆ ನೆರವಾಗುವ ನಿಟ್ಟಿನಲ್ಲಿ ಜಾರಿಮಾಡಲಾದ ಸರ್ಕಾರದ ಮಹತ್ವಾಕಾಂಕ್ಷೆಯ ಪುಣ್ಯಕೋಟಿ ದತ್ತು ಯೋಜನೆಗೆ ಸುಪ್ರಸಿದ್ಧ ನಟ ಕಿಚ್ಚ ಸುದೀಪ್ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಈ ಬಗ್ಗೆ ಪಶು ಸಂಗೋಪನಾ ಇಲಾಖೆ ಸಚಿವ ಪ್ರಭು ಚವ್ಹಾಣ್ ಮಾಹಿತಿ ಹಂಚಿಕೊಂಡಿದ್ದಾರೆ. “ಗೋಶಾಲೆಯಲ್ಲಿ ರಕ್ಷಿಸಲ್ಪಟ್ಟ ಅನಾಥ ಗೋವುಗಳ ಪಾಲನೆ – ಪೋಷಣೆಗೆ ನೆರವಾಗುವ ನಿಟ್ಟಿನಲ್ಲಿ ಜಾರಿಮಾಡಲಾದ ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ “ಪುಣ್ಯಕೋಟಿ ಯೋಜನೆ”ಯ ರಾಯಭಾರಿಯಾದ ಸುಪ್ರಸಿದ್ಧ ನಟ, ಅಭಿನಯ ಚಕ್ರವರ್ತಿ ಶ್ರೀ ಕಿಚ್ಚ ಸುದೀಪ್ ಅವರಿಗೆ […]

ಶ್ರೀ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣ ಸ್ವಾಮೀಜಿ ಬಂಧನ

ಚಿತ್ರದುರ್ಗ: ಶ್ರೀ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ನಿನ್ನೆ ರಾತ್ರಿ ಬಂಧಿಸಲಾಗಿದೆ. ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ 6 ದಿನಗಳ ನಂತರ ಶಿವಮೂರ್ತಿ ಅವರನ್ನು ಬಂಧಿಸಲಾಯಿತು. ಚಿತ್ರದುರ್ಗ ಜಿಲ್ಲೆಯ ತಮ್ಮ ಮಠದಿಂದ ನಡೆಸಲ್ಪಡುವ ಹಾಸ್ಟೆಲ್‌ನಲ್ಲಿ ಇಬ್ಬರು ಅಪ್ರಾಪ್ತ ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಇವರ ಮೇಲಿದೆ. ಶಿವಮೂರ್ತಿಯವರನ್ನು ಬಂಧಿಸುವ […]

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಪ್ರಕರಣ: ಅನುಮತಿ ನೀಡಿದ ಹೈ ಕೋರ್ಟ್

ಹುಬ್ಬಳ್ಳಿ: ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಹಿಂದೂ ಸಂಘಟನೆಗಳು ಮುಂದಾಗಿದ್ದು, ಇದಕ್ಕೆ ಅನುಮತಿ ನೀಡದಂತೆ ಅಂಜುಮನ್ ಎ ಇಸ್ಲಾಂ ಕಡೆಯಿಂದ ಹೈಕೋರ್ಟ್ ನಲ್ಲಿ ಅರ್ಜಿ ದಾಖಲಾಗಿದ್ದವು. ಈ ಪೈಕಿ ಕರ್ನಾಟಕದ ಹೈಕೋರ್ಟ್ ಅಂಜುಮನ್ ಎ ಇಸ್ಲಾಂ ಅರ್ಜಿಯನ್ನು ತಡರಾತ್ರಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬಕ್ಕೆ ಸಿದ್ಧತೆ ಆರಂಭವಾಗಿದೆ ಎಂದು ಝೀ ನ್ಯೂಸ್ ವರದಿ ಮಾಡಿದೆ. ಕೇಂದ್ರ ಸರ್ಕಾರದ ಸಚಿವ ಪ್ರಹ್ಲಾದ್ ಜೋಶಿ ಸ್ಥಳದಲ್ಲಿದ್ದು, ಹೈಕೋರ್ಟ್ ತೀರ್ಪಿಗೆ ಹರ್ಷ ವ್ಯಕ್ತ ಪಡಿಸಿ, ಯಾವುದೇ […]

ತುಮಕೂರು ಭೀಕರ ಅಪಘಾತ: ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರಿಗೆ 2 ಲಕ್ಷ ರೂ ಪರಿಹಾರ

ತುಮಕೂರು: ಗುರುವಾರ ಬೆಳಗ್ಗೆ ಜಿಲ್ಲೆಯಲ್ಲಿ ಲಾರಿ ಮತ್ತು ಟೆಂಪೋ ಟ್ರಾಕ್ಸ್ ಕ್ರೂಸರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 13 ಜನರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ 200 ಕಿಮೀ ದೂರದಲ್ಲಿರುವ ಬಾಳೇನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ. ಪೊಲೀಸರು ಸಂಗ್ರಹಿಸಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ಬಲಿಯಾದವರಲ್ಲಿ ಹೆಚ್ಚಿನವರು ರಾಯಚೂರು ಜಿಲ್ಲೆಯ ಕಾರ್ಮಿಕರಾಗಿದ್ದಾರೆ. ಟ್ರಾಕ್ಸ್ ಕ್ರೂಸರ್‌ನಲ್ಲಿ ಸುಮಾರು 24 ಜನರು ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿದ್ದು, ಮೃತರಲ್ಲಿ ಚಾಲಕ ಕೃಷ್ಣಪ್ಪ ಕೂಡ […]

ಗೃಹ ಸಚಿವ ಅರಗ ಜ್ಞಾನೇಂದ್ರ ಬೆಂಗಾವಲು ವಾಹನಕ್ಕೆ ಕಾರು ಢಿಕ್ಕಿ; ಭದ್ರಾವತಿ ಬಳಿ ಅಪಘಾತ

ಭದ್ರಾವತಿ: ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನಕ್ಕೆ ಎದುರುಗಡೆಯಿಂದ ಬರುತ್ತಿದ್ದಂತ ಮತ್ತೊಂದು ಕಾರು ಢಿಕ್ಕಿ ಹೊಡೆದಿರುವ ಘಟನೆ ಭದ್ರಾವತಿಯ ಜಂಕ್ಷನ್ ಬಳಿ ನಡೆದಿದೆ. ಸಚಿವ ಅರಗ ಜ್ಞಾನೇಂದ್ರ ತುಮಕೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದು ಈ ವೇಳೆ ಎದುರುಗಡೆ ಬರುತ್ತಿದ್ದ ಕಾರೊಂದು ಬೆಂಗಾವಲು ವಾಹನಕ್ಕೆ ಢಿಕ್ಕಿಯಾಗಿದೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.