ಜಿಎಸ್ ಟಿ ಸ್ಲ್ಯಾಬ್ ಗಳಲ್ಲಿ ಮಹತ್ತರ ಬದಲಾವಣೆ: ಇನ್ನು ಎರಡು ತೆರಿಗೆ ಮಾತ್ರವೆಂದ ಕೇಂದ್ರ!

ನವದೆಹಲಿ: ದೇಶದ ಜನತೆಗೆ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಮಂಡಳಿಯು ಸ್ಲ್ಯಾಬ್ ಗಳಲ್ಲಿ ಮಹತ್ವದ ಬದಲಾವಣೆಗೆ ಬುಧವಾರ ಅನುಮೋದನೆ ನೀಡಿದೆ. ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ 56ನೇ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಈ ಮಹತ್ವದ ತೆರಿಗೆ ಬದಲಾವಣೆಗಳಿಗೆ ಅನುಮೋದನೆ ನೀಡಲಾಗಿದೆ. ಜಿಎಸ್ ಟಿ ಸ್ಲ್ಯಾಬ್’ಗಳು ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿದೆ. ಪ್ರಸ್ತುತ, ನಾಲ್ಕು ಜಿಎಸ್ ಟಿ ಸ್ಲ್ಯಾಬ್‌ಗಳಿದ್ದು, ಶೇ. 5, ಶೇ, […]

ಬೇರೆ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಸುಟ್ಟು ಹಾಕಿದ ಅಪ್ಪ!

ಕಲಬುರಗಿ: ಅನ್ಯಜಾತಿ ಯುವಕನನ್ನು ಲವ್ ಮಾಡಿದ್ದಕ್ಕೆ ತಂದೆ ತನ್ನ ಸ್ವಂತ 18 ವರ್ಷದ ಮಗಳನ್ನು ಕೊಂದು ಸುಟ್ಟು ಹಾಕಿರುವಂತಹ ಘಟನೆ ಕಲಬುರಗಿ ತಾಲೂಕಿನ ಮೇಳಕುಂದಾ ಗ್ರಾಮದಲ್ಲಿ ‌ನಡೆದಿದೆ. ಕವಿತಾ ಕೊಲೆಯಾದ ಮಗಳು. ಸದ್ಯ ಫರಹತಬಾದ್ ಠಾಣೆ ಪೊಲೀಸರು ತಂದೆ ಶಂಕರ್ ಕೊಳ್ಳುರು ಬಂಧಿಸಿದ್ದಾರೆ. ಕೊಲೆಗೆ ಸಾಥ್ ನೀಡಿದ್ದ ಶರಣು ಮತ್ತು ದತ್ತಪ್ಪ ಬಂಧನಕ್ಕೆ ಬಲೆ ಬಿಸಿದ್ದಾರೆ. ಲಿಂಗಾಯತ ಸಮಾಜದ ಯುವತಿ ಅದೇ ಗ್ರಾಮದ ಕುರುಬ ಸಮಾಜದ ಯುವಕ ಮಾಳಪ್ಪ ಪೂಜಾರಿಯನ್ನು ಪ್ರೀತಿಸುತ್ತಿದ್ದಳು. ಕಲಬುರಗಿ ನಗರಕ್ಕೆ ಪಿಯುಸಿ ಅಧ್ಯಯನಕ್ಕೆ […]

ಕೊಲ್ಲೂರು: ಬೆಂಗಳೂರು ಮೂಲದ ಮಹಿಳೆ ನಾಪತ್ತೆ

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸಮೀಪದ ಸೌರ್ಪಣಿಕ ನದಿಯಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿರುವ ಬೆಂಗಳೂರು ಮೂಲದ ಮಹಿಳೆಯ ಹುಡುಕಾಟ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದು, ಈವರೆಗೆ ಯಾವುದೇ ಸುಳಿವು ಲಭ್ಯವಾಗಿಲ್ಲ ಎಂದು ತಿಳಿದು ಬಂದಿದೆ. ನಾಪತ್ತೆಯಾದವರನ್ನು ಬೆಂಗಳೂರಿನ ವಸುಧಾ(46) ಎಂದು ಗುರುತಿಸಲಾಗಿದೆ. ಇವರು ಆಗಾಗ್ಗೆ ಕೊಲ್ಲೂರು ದೇವಳಕ್ಕೆ ಬರುತ್ತಿದ್ದು, ಆ.27ರಂದು ದೇವಸ್ಥಾನಕ್ಕೆ ಆಗಮಿಸಿದ ವಸುಧಾ, ಅಕಸ್ಮಿಕವಾಗಿ ಸೌರ್ಪಣಿಕ ನದಿಯಲ್ಲಿ ಕಾಲು ಜಾರಿ ಬಿದ್ದು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ನಾಪತ್ತೆಯಾದ ಮಹಿಳೆಗಾಗಿ ಮುಳುಗು ತಜ್ಞ […]

IMF ಕಾರ್ಯನಿರ್ವಾಹಕ ನಿರ್ದೇಶಕರಾಗಿ ಆರ್ ಬಿಐ’ನ ಮಾಜಿ ಗವರ್ನರ್ ಉರ್ಜಿತ್ ಪಟೇಲ್ ನೇಮಕ

ನವದೆಹಲಿ: ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ RBIನ ಮಾಜಿ ಗವರ್ನರ್ ಉರ್ಜಿತ್ ಪಟೇಲ್ ನೇಮಕರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗುರುವಾರ (ಆ.28) ನಡೆದ ನೇಮಕಾತಿ ಸಭೆಯಲ್ಲಿ ಉರ್ಜಿತ್ ಪಟೇಲ್ ಅವರ ಹೆಸರನ್ನು ಅನುಮೋದಿಸಲಾಗಿತ್ತು. ಅದರಂತೆ ಮೂರು ವರ್ಷಗಳ ಅವಧಿಗೆ ಆರ್‌ಬಿಐನ ಮಾಜಿ ಗವರ್ನರ್ ಉರ್ಜಿತ್ ಪಟೇಲ್ ಅವರು ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. 2018ರಲ್ಲಿ ಆರ್‌ಬಿಐನ ಗವರ್ನರ್ ಹುದ್ದೆಗೆ ರಾಜೀನಾಮೆ ನೀಡಿದ ಏಳು ವರ್ಷಗಳ ನಂತರ ಇದೀಗ ಮತ್ತೆ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ.

ಒಟ್ಟು 14,670 ಸಹಕಾರ ಸಂಘಗಳು ನಷ್ಟದಲ್ಲಿ: ಪುನಶ್ಚೇತನಕ್ಕೆ ಸಿಎಂ ಆದೇಶ

ಬೆಂಗಳೂರು: ಸಾಲ ವಸೂಲಾತಿ ಕೆಲಸ ಸಮರ್ಪಕವಾಗಿ ನಡೆಯದೇ 2,200 ಹಾಲು ಉತ್ಪಾದಕ ಸಂಘಗಳೂ ಸೇರಿ ರಾಜ್ಯದಲ್ಲಿ 14,670 ಸಹಕಾರ ಸಂಘಗಳು ನಷ್ಟದಲ್ಲಿವೆ.ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಗುರುವಾರ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಕುರಿತು ಮಾಹಿತಿ ನೀಡಿದರು. *28,516 ಸಹಕಾರ ಸಂಘಗಳು ಲಾಭದಲ್ಲಿವೆ. ಅವುಗಳ ಅರ್ಧದಷ್ಟು ಸಂಘಗಳು ನಷ್ಟದಲ್ಲಿವೆ. ಸಾಲ ವಸೂಲಾತಿಯಲ್ಲಿನ ಸಮಸ್ಯೆಗಳೇ ಈ ನಷ್ಟಕ್ಕೆ ಕಾರಣ. ವಸೂಲಾತಿಗೆ ಕೈಗೊಂಡ ಕ್ರಮಗಳ ಬಗ್ಗೆ ತ್ವರಿತವಾಗಿ ಪರಿಶೀಲನೆ ನಡೆಸಬೇಕು. ಹಾಲು ಉತ್ಪಾದಕ ಸಹಕಾರ ಸಂಘಗಳ ವೆಚ್ಚದ […]