ಬೆಂಗಳೂರು: ಬೋಯಿಂಗ್ ವಿಮಾನ ತಯಾರಿಕಾ ಸಂಸ್ಥೆಯ ಕ್ಯಾಂಪಸ್ ಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಾಣವಾಗಿರುವ ನೂತನ ಬೋಯಿಂಗ್ ವಿಮಾನ ತಯಾರಿಕಾ ಸಂಸ್ಥೆಯ ಕ್ಯಾಂಪಸ್ ಗೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಶುಕ್ರವಾರ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ದೇವನಹಳ್ಳಿಯಲ್ಲಿ ಬೋಯಿಂಗ್‌ನ ಅತ್ಯಾಧುನಿಕ ಜಾಗತಿಕ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಆವಿಷ್ಕಾರ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಈ ನೂತನ ಬೋಯಿಂಗ್ ಕ್ಯಾಂಪಸ್ ಅನ್ನು 1,600 ಕೋಟಿ ರೂ.ಗಳ ಬಂಡವಾಳದಲ್ಲಿ ನಿರ್ಮಿಸಲಾಗಿದ್ದು, 43-ಎಕರೆ ಕ್ಯಾಂಪಸ್ ಅಮೆರಿಕದಿಂದ […]

ಜ. 22 ರಂದು ರಾಜ್ಯದಲ್ಲಿ ಶಾಲೆಗಳಿಗೆ ರಜೆ ಇಲ್ಲ: ಶಿಕ್ಷಣ ಇಲಾಖೆ ಸ್ಪಷ್ಟನೆ

ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಜನವರಿ 22 ರಂದು ಶಾಲೆಗಳಿಗೆ ರಜೆ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. “ನಾವು ಜನವರಿ 22 ರಂದು ಶಾಲೆಗಳಿಗೆ ರಜೆ ಘೋಷಿಸುತ್ತಿಲ್ಲ. ಅದು ಕೆಲಸದ ದಿನವಾಗಿರುತ್ತದೆ. (ಬೆಂಗಳೂರು) ನಗರ ಅಥವಾ ರಾಜ್ಯದಲ್ಲಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಉಂಟಾದರೆ, ಆಯಾ ಜಿಲ್ಲಾಧಿಕಾರಿಗಳು ರಜೆ ಘೋಷಿಸಲು ಕರೆ ನೀಡುತ್ತಾರೆ” ಎಂದು ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಗುರುವಾರ ತಿಳಿಸಿರುವುದಾಗಿ ದ ಇಂಡಿಯನ್ ಎಕ್ಸ್ಪ್ರೆಸ್ ವರದಿ ಹೇಳಿದೆ. ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್ ಆಫ್ ಸ್ಕೂಲ್ಸ್ […]

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: SSLC ಮತ್ತು ದ್ವಿತೀಯ PUC ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮತ್ತು ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದೆ.

ವ್ಯಕ್ತಿಗಳ ಪಾಸ್‌ಪೋರ್ಟ್ ಅಥವಾ ಓಸಿಐ ಕಾರ್ಡ್ ಗಳನ್ನು ಬ್ಯಾಂಕ್ ಗಳು ಇಟ್ಟುಕೊಳ್ಳುವುದು ಕಾನೂನುಬಾಹಿರ: ಕರ್ನಾಟಕ ಹೈಕೋರ್ಟ್

ಬೆಂಗಳೂರು: ವ್ಯಕ್ತಿಗಳ ಪಾಸ್‌ಪೋರ್ಟ್ ಅಥವಾ ಓಸಿಐ ಕಾರ್ಡ್ಗಳನ್ನು ಬ್ಯಾಂಕ್‌ ಗಳು ತಮ್ಮ ಬಳಿ ಇಟ್ಟುಕೊಳ್ಳುವುದು ಕಾನೂನುಬಾಹಿರ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಹೇಳಿದೆ. ಬ್ಯಾಂಕ್‌ನಿಂದ ಯಾವುದೇ ವ್ಯಕ್ತಿಯ ಪಾಸ್‌ಪೋರ್ಟ್ ಮತ್ತು ಒಸಿಐ ಕಾರ್ಡ್ ಅನ್ನು ಉಳಿಸಿಕೊಳ್ಳುವುದು ಕಾನೂನುಬಾಹಿರ ಎಂದು ತಿಳಿಸಿದ ಕರ್ನಾಟಕ ಹೈಕೋರ್ಟ್, ವಿಡಿಬಿ ಪ್ರಾಪರ್ಟಿ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಲ್ಲಿ ಒಬ್ಬರಾದ ಅರ್ಜಿದಾರ ಕೋಶಿ ವರ್ಗೀಸ್‌ ಅವರ ಪಾಸ್‌ಪೋರ್ಟ್ ಮತ್ತು ಓವರ್‌ಸೀಸ್ ಸಿಟಿಜನ್ ಆಫ್ ಇಂಡಿಯಾ (ಓಸಿಐ) ಕಾರ್ಡ್ ಅನ್ನು ಅವರಿಗೆ ವಾಪಸ್ ಮರಳಿಸುವಂತೆ ಬ್ಯಾಂಕಿಗೆ […]

ಸಂಗೀತ ನಿರ್ದೇಶಕ ಗುರುಕಿರಣ್ ಅತ್ತೆ ಮನೆಯಲ್ಲಿ 2.50 ಲಕ್ಷ ರೂ ನಾಪತ್ತೆ

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಅತ್ತೆ ಮನೆಯಲ್ಲಿ ಕಳ್ಳತನವಾಗಿದೆ. ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಡಿಸೆಂಬರ್ 31ರಂದು ಮಧ್ಯಾಹ್ನ ಚಂದ್ರ ಲೇಔಟ್​ನಲ್ಲಿರುವ ತಮ್ಮ ಮನೆಯ ಕೋಣೆಯ ಕಪಾಟಿನಲ್ಲಿ 2.50 ಲಕ್ಷ ರೂ.ಗಳನ್ನು ಗುರುಕಿರಣ್ ಅತ್ತೆ ಕಸ್ತೂರಿ ಶೆಟ್ಟಿ ಇಟ್ಟಿದ್ದರು. ಜ.5 ರಂದು ಹಣಕ್ಕಾಗಿ ಹುಡುಕಿದಾಗ ಹಣ ಅಲ್ಲಿರಲಿಲ್ಲ. ಎಷ್ಟು ಹುಡುಕಾಡಿದರೂ ಹಣ ಸಿಗದೇ ಇದ್ದಾಗ ಜನವರಿ 7 ರಂದು ಚಂದ್ರಲೇಔಟ್ ಪೊಲೀಸ್ ಠಾಣೆಗೆ ಗುರುಕಿರಣ್ ಅತ್ತೆ ದೂರು ನೀಡಿದ್ದಾರೆ. ಈ ಸಂಬಂಧ ಪೊಲೀಸ್ […]