ಲೋಕಾಯುಕ್ತಕ್ಕೆ ಮತ್ತೆ ಬಂತು ಬಲ: ಎಸಿಬಿ ರದ್ದುಗೊಳಿಸಿ ಕರ್ನಾಟಕ ಹೈ ಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಮಹತ್ವದ ತೀರ್ಪಿನಲ್ಲಿ, ಭ್ರಷ್ಟಾಚಾರ ತಡೆ (ಪಿಸಿ) ಕಾಯ್ದೆಯಡಿ ಲೋಕಾಯುಕ್ತ ಪೊಲೀಸ್ ವಿಭಾಗದ ಅಧಿಕಾರವನ್ನು ಹಿಂತೆಗೆದುಕೊಳ್ಳುವ ಮೂಲಕ 2016 ರಲ್ಲಿ ರಾಜ್ಯ ಸರ್ಕಾರ ರಚಿಸಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ. ಎಸಿಬಿ ರಚನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ತಂಡಕ್ಕೆ ಅನುಮತಿ ನೀಡಿದ ನ್ಯಾಯಮೂರ್ತಿ ಬಿ ವೀರಪ್ಪ ಮತ್ತು ನ್ಯಾಯಮೂರ್ತಿ ಕೆ ಎಸ್ ಹೇಮಲೇಖಾ ಅವರಿದ್ದ ವಿಭಾಗೀಯ ಪೀಠ, ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಈಗ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲಾಗುವುದು […]

ಒಂದು ತಿಂಗಳಲ್ಲಿ 127 ಟನ್ ನಿಷೇಧಿತ ಪ್ಲಾಸ್ಟಿಕ್ ವಶ: 37 ಲಕ್ಷ ರೂಪಾಯಿ ದಂಡ ವಸೂಲಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜುಲೈ ತಿಂಗಳೊಂದರಲ್ಲೇ ರಾಜ್ಯಾದ್ಯಂತ ಹಠಾತ್ ತಪಾಸಣೆ ನಡೆಸಿ 127.052 ಟನ್ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ವಶಪಡಿಸಿಕೊಂಡಿದೆ ಮತ್ತು 37 ಲಕ್ಷ ರೂಪಾಯಿ ದಂಡವನ್ನು ಸಂಗ್ರಹಿಸಿದೆ. ಅಂಗಡಿಗಳು, ಉತ್ಪಾದನಾ ಘಟಕಗಳು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳ ಮೇಲಿನ ದಾಳಿಯಲ್ಲಿ, ಜುಲೈನಲ್ಲಿ 22,116 ತಪಾಸಣೆಗಳನ್ನು ನಡೆಸಲಾಗಿದ್ದು 15,629 ಉಲ್ಲಂಘನೆಗಳು ಕಂಡುಬಂದಿವೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಹಿರಿಯ ಕೆಎಸ್‌ಪಿಸಿಬಿ ಅಧಿಕಾರಿಯೊಬ್ಬರು ಡಿಎಚ್‌ಗೆ ನೀಡಿದ ಸಂದರ್ಶನದಲ್ಲಿ, ಸೂಕ್ತ ಪರ್ಯಾಯದ ಕೊರತೆಯಿಂದಾಗಿ ಏಕ […]

ಹರ್ ಘರ್ ತಿರಂಗಾ ಯಶಸ್ಸಿಗೆ ಹಗಲು ರಾತ್ರಿ ಶ್ರಮಿಸುತ್ತಿರುವ ಧಾರವಾಡದ ಸಂಜೀವಿನಿ ಮಹಿಳಾ ಸಂಸ್ಥೆ: ವೀಡಿಯೋ ಹಂಚಿಕೊಂಡ ಬೊಮ್ಮಾಯಿ

ಧಾರವಾಡ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಆಗಸ್ಟ್ 13 ರಿಂದ 15 ರವರೆಗೆ ರಾಜ್ಯದ ಮನೆ ಮನೆಯ ಮೇಲೆ ತ್ರಿವರ್ಣ ಧ್ವಜ ಅಭಿಯಾನದ ಯಶಸ್ಸಿಗೆ ಪೂರಕವಾಗಿ ಧಾರವಾಡದ ಸಂಜೀವಿನಿ ಮಹಿಳಾ ಸಂಸ್ಥೆ ಅವಿರತವಾಗಿ ಶ್ರಮಿಸುತ್ತಿರುವ ದೃಶ್ಯ. ಅವರ ಚೈತನ್ಯ, ಉತ್ಸಾಹ ಮತ್ತು ದೇಶಭಕ್ತಿ ಬಣ್ಣಿಸಲಾಗದು. ಜೈ ಹಿಂದ್ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಟ್ವಿಟರ್ ನಲ್ಲಿ ವೀಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. Happy to share that @KarnatakaKsrlps, Dharwad, SHG members are making flags […]

ಜುಲೈ 28 ರಂದು ‘ಪುಣ್ಯಕೋಟಿ ದತ್ತು ಯೋಜನೆ’ಗೆ ಚಾಲನೆ: ದೇಶದಲ್ಲೇ ಪ್ರಥಮ ಪ್ರಯತ್ನಕ್ಕೆ ರಾಜ್ಯ ಸರ್ಕಾರದಿಂದ ಸ್ಪಂದನೆ

ಬೆಂಗಳೂರು: ಗೋಶಾಲೆಗಳಿಂದ ಜಾನುವಾರುಗಳನ್ನು ದತ್ತು ಪಡೆಯುವುದನ್ನು ಉತ್ತೇಜಿಸಲು ರಾಜ್ಯ ಸರ್ಕಾರವು ಜುಲೈ 28 ರಂದು ಹಸು ದತ್ತು ಯೋಜನೆಯನ್ನು ಪ್ರಾರಂಭಿಸಲಿದೆ ಎಂದು  ಪಶುಸಂಗೋಪನಾ ಸಚಿವ ಪ್ರಭು ಭಮಲಾ ಚವ್ಹಾಣ್ ಹೇಳಿದ್ದಾರೆ. ”ಜಾನುವಾರುಗಳನ್ನು ಸಂರಕ್ಷಿಸಲು ಗೋಶಾಲೆಗಳಲ್ಲಿ ಅವುಗಳನ್ನು ಸಾಕುವ ಮತ್ತು ಪೋಷಣೆ ಮಾಡುವ ಉದ್ದೇಶದಿಂದ ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರವು ದೇಶದಲ್ಲೇ ಪ್ರಥಮ ಬಾರಿಗೆ ‘ಪುಣ್ಯಕೋಟಿ ದತ್ತು ಯೋಜನೆ’ ಆರಂಭಿಸಲು ಉತ್ಸುಕವಾಗಿದೆ” ಎಂದು ಅವರು ಹೇಳಿದ್ದಾರೆ. ಜುಲೈ 28ಕ್ಕೆ ಬಸವರಾಜ […]

ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಪೂರೈಸಿದ ಬೆಂಗಳೂರು ಆಗ್ನೇಯ ಪೊಲೀಸ್: ಖಾಕಿ ತೊಟ್ಟು ಡಿಸಿಪಿ ಆದ ಮಕ್ಕಳು

ಬೆಂಗಳೂರು: ಬೆಂಗಳೂರು ಆಗ್ನೇಯ ವಿಭಾಗದ ಪೊಲೀಸರು ಶನಿವಾರ ಕೇರಳದ ಮೊಹಮ್ಮದ್ ಸಲ್ಮಾನ್ ಮತ್ತು ಬೆಂಗಳೂರಿನ ಮಿಥಿಲೇಶ್ ಎಂಬ ಇಬ್ಬರು ಬಾಲಕರನ್ನು ಕೆಲವು ಗಂಟೆಗಳ ಕಾಲ ಉಪ ಪೊಲೀಸ್ ಆಯುಕ್ತರನ್ನಾಗಿ (ಡಿಸಿಪಿ) ಮಾಡಲಾಯಿತು ಎಂದು ಸುದ್ದಿ ಸಂಸ್ಥೆ ಎ.ಎನ್.ಐ ವರದಿ ಮಾಡಿದೆ. ಇದು ಪೊಲೀಸ್ ಅಧಿಕಾರಿಗಳಾಗುವ ಅವರ ಆಸೆಯನ್ನು ಈಡೇರಿಸುವ ಸಣ್ಣ ಪ್ರಯತ್ನವಾಗಿತ್ತು. ಈ ಇಬ್ಬರು ಹುಡುಗರು ಕ್ಯಾನ್ಸರ್‌ ರೋಗಿಗಳಾಗಿದ್ದು, ತೀವ್ರವಾಗಿ ಅಸ್ವಸ್ಥರಾಗಿದ್ದಾರೆ. ಮಕ್ಕಳ ಬದುಕಿನ ಬಗ್ಗೆ ಏನೂ ಹೇಳಲಾಗದಿದ್ದರೂ ಭವಿಷ್ಯದಲ್ಲಿ ಪೊಲೀಸರಾಗುವ ಅವರ ಕನಸನ್ನು ಕೆಲವೆ ಗಂಟೆಗಳ […]