ಮಹಿಳೆಯರಿಗೆ ಸಿಹಿ ಸುದ್ದಿ: ಹೊರಗುತ್ತಿಗೆ ಸಿಬ್ಬಂದಿಯಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ಕೊಡುವ ಮಹತ್ವದ ಕ್ರಮವಾಗಿ, ಹೊರಗುತ್ತಿಗೆ ಸಿಬ್ಬಂದಿಯಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ಖಚಿತಪಡಿಸಿಕೊಳ್ಳಲು ಕರ್ನಾಟಕ ಸರ್ಕಾರವು ಶುಕ್ರವಾರ ಎಲ್ಲಾ ಇಲಾಖೆಗಳಿಗೆ ನಿರ್ದೇಶನ ನೀಡಿದೆ. ಸರ್ಕಾರವು ನಿಯಮಿತವಾಗಿ ಚಾಲಕರು, ಡೇಟಾ ಎಂಟ್ರಿ ಆಪರೇಟರ್‌ಗಳು, ಹೌಸ್‌ಕೀಪಿಂಗ್ ಸಿಬ್ಬಂದಿ ಮತ್ತು ಗ್ರೂಪ್ ‘ಡಿ’ ಕಾರ್ಮಿಕರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳುತ್ತದೆ. ಈ ಎಲ್ಲಾ ಕೆಲಸಗಳನ್ನು ನಿಭಾಯಿಸಲು ಮಹಿಳೆಯರು ಸಮಾನವಾಗಿ ಸಮರ್ಥರಾಗಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಶುಕ್ರವಾರ ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯಲ್ಲಿ ಸೂಚಿಸಿದಂತೆ […]

ಮೇ-19 ಮಧ್ಯಾಹ್ನ 12.30ಕ್ಕೆ ಹತ್ತನೇ ತರಗತಿ ಫಲಿತಾಂಶ ಪ್ರಕಟ

ಬೆಂಗಳೂರು: ಮೇ-19 ರಂದು ಮಧ್ಯಾಹ್ನ 12.30ಕ್ಕೆ ಹತ್ತನೆ ತರಗತಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಬಗ್ಗೆ ಬುಧವಾರ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ‘ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಮತ್ತು ಶಾಲೆಗಳಲ್ಲಿ ಫಲಿತಾಂಶ ಲಭ್ಯವಿರಲಿದೆ. https://karresults.nic.in ಗೆ ಲಾಗಿನ್ ಆಗಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು’. ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ […]

ಮನೆ ಬಾಗಿಲಲ್ಲೆ ಪಡೆಯಿರಿ ರುಚಿ ರುಚಿ ಮಾವು: ಗ್ರಾಹಕರ ಮನೆ ಬಾಗಿಲಿಗೆ ಮಾವು ತಲುಪಿಸಲು ಸರ್ಕಾರದ ವೆಬ್ ಪೋರ್ಟಲ್

ಬೆಂಗಳೂರು: ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ (ಕರ್ನಾಟಕ ಸರ್ಕಾರದ ಒಂದು ಉದ್ಯಮ) ತನ್ನ ಗ್ರಾಹಕರಿಗೆ ರುಚಿಕರವಾದ ಬಗೆ ಬಗೆ ಮಾವಿನ ಹಣ್ಣುಗಳನ್ನು ಮಾರಾಟ ಮಾಡುವ ಸಲುವಾಗಿ ಮಾವಿನ ಪೋರ್ಟಲ್ ಒಂದನ್ನು ತೆರೆದಿದೆ. ಮೇ16 ರಂದು ಬಿಡುಗಡೆಯಾಗಿರುವ ಈ ಪೋರ್ಟಲ್ ನಲ್ಲಿ ವಿವಿಧ ತಳಿಗಳ ಮಾವಿನ ಹಣ್ಣುಗಳು ಲಭ್ಯವಿದೆ. ಈಗಾಗಲೇ ಪೋರ್ಟಲ್ ನಲ್ಲಿ  ವಿವಿಧ ಪ್ರಭೇದಗಳ ಮಾವಿನ ಹಣ್ಣಿನ ಆರ್ಡರ್ ಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಲಾಗಿದೆ. ಇಂಡಿಯಾ ಪೋಸ್ಟ್ ಸಹಯೋಗದಲ್ಲಿ ಈ ವೆಬ್‌ಸೈಟ್ ಅನ್ನು ಪ್ರಾರಂಭಿಸಲಾಗಿದ್ದು, ಇದು […]

ಮುಂದಿನ ಶೈಕ್ಷಣಿಕ ವರ್ಷದಿಂದ ಪ.ಪೂ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ನಡೆದ ಹಿಜಾಬ್‌ ಗದ್ದಲದಿಂದಾಗಿ 2022-23 ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಕಡ್ಡಾಯಗೊಳಿಸಲು ಪ.ಪೂ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಸೋಮವಾರ ಬಿಡುಗಡೆ ಮಾಡಲಾದ ಇಲಾಖೆಯ ಪ್ರವೇಶ ಮಾರ್ಗಸೂಚಿಯಲ್ಲಿ ಸಮವಸ್ತ್ರದ ಬಗ್ಗೆ ಇದೇ ಮೊದಲ ಬಾರಿಗೆ ಉಲ್ಲೇಖಿಸಲಾಗಿದೆ. ಮಾರ್ಗಸೂಚಿಗಳಲ್ಲಿ ತಿಳಿಸಿರುವಂತೆ ಪದವಿ ಪೂರ್ವ ವಿಶ್ವವಿದ್ಯಾಲಯದ ಮೊದಲನೇ ಮತ್ತು ಎರಡನೇ ವರ್ಷದ ವಿದ್ಯಾರ್ಥಿಗಳು ಸಂಬಂಧಪಟ್ಟ ಕಾಲೇಜು ಅಭಿವೃದ್ಧಿ ಸಮಿತಿಗಳು(ಸಿಡಿಸಿ) ಸೂಚಿಸಿದ ಏಕರೂಪದ ಮಾನದಂಡಗಳಿಗೆ ಬದ್ದರಾಗಿರಬೇಕು. ಇಲಾಖೆಯ ಸೂಚನೆಗಳ ಪ್ರಕಾರ, ವಿದ್ಯಾರ್ಥಿಗಳು ಹಿಜಾಬ್ ಕುರಿತು […]

ಪಿಎಸ್ಐ ನೇಮಕಾತಿ ಹಗರಣ: ಪ್ರಧಾನಿ ಮೋದಿಗೆ ರಕ್ತದಲ್ಲಿ ಬರೆದ ಅನಾಮಧೇಯ ಪತ್ರ ವೈರಲ್!

ಬೆಂಗಳೂರು : ಹಗರಣಗಳಿಂದ ಹತಾಶರಾಗಿರುವ ಪಿಎಸ್ಐ ಅಭ್ಯರ್ಥಿಗಳು ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಿಎಸ್ಐ ಅಭ್ಯರ್ಥಿಗಳು ಬರೆದಿದ್ದಾರೆ ಎನ್ನಲಾಗುವ ಈ ಪತ್ರದಲ್ಲಿ ಯಾರದ್ದೇ ಹೆಸರು ಉಲ್ಲೇಖವಾಗಿಲ್ಲ. ರಾಜ್ಯದಲ್ಲಿ ಪಿಎಸ್ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮದ ಸುದ್ದಿಯ ನಡುವೆ, ಪಿಎಸ್ಐ ಅಭ್ಯರ್ಥಿಗಳು ಪ್ರಧಾನಿಗೆ ರಕ್ತದಲ್ಲಿ ಬರೆದಿದ್ದಾರೆ ಎನ್ನಲಾದ ಪತ್ರ ಸಂಚಲನ ಮೂಡಿಸಿದೆ. ಪಿಎಸ್ ಐ ಪರೀಕ್ಷೆಯ ಅಕ್ರಮದಿಂದಾಗಿ ಮೋಸ ಹೋದವರಿಗೆ ನ್ಯಾಯ ಸಿಗಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ. ಅನ್ಯಾಯ ಮಾಡಿದವರನ್ನ ಜೈಲಿಗೆ […]