ಅಂಕೋಲ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿ; ಚಾಲಕ ಗಂಭೀರ

ಅಂಕೋಲ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಂಚಿನ ಬಾಗಿಲು ಬಳಿಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಸಂಭವಿಸಿದೆ. ಹೆದ್ದಾರಿಯಲ್ಲಿ ಎಥೆನಾಲ್ ಗ್ಯಾಸ್ ಸೋರಿಕೆಯಾಗುತ್ತಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಗುಜರಾತ್ ನಿಂದ ಉಡುಪಿ‌ ಕಡೆ ಹೋಗುತಿದ್ದ ಗ್ಯಾಸ್ ಟ್ಯಾಂಕರ್ ಅಂಕೋಲದ ಕಂಚಿನ ಬಾಗಿಲು ಸಮೀಪ ಪಲ್ಟಿಯಾಗಿದೆ. ಮಹಾರಾಷ್ಟ್ರ ಮೂಲದ ಚಾಲಕ ಅರುಣ್ ಶೇಖ್ (57) ಗಂಭೀರವಾಗಿ ಗಾಯಗೊಂಡಿದ್ದು, ಉಡುಪಿ ಆಸ್ಪತ್ರೆಗೆ […]

ಬಿಹಾರ ಚುನಾವಣೆಯಲ್ಲಿ ಬಿಜೆಪಿ ವಿಜಯ: ಮೈಥಿಲಿ ಠಾಕೂರ್ ಅತ್ಯಂತ ಕಿರಿಯ ಶಾಸಕಿ!

ಪಾಟ್ನಾ: ಬಿಹಾರ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗ ರಾಜಕೀಯ ಪ್ರವೇಶ ಮಾಡಿದ್ದ ಖ್ಯಾತ ಜಾನಪದ ಮತ್ತು ಭಕ್ತಿಗೀತೆ ಗಾಯಕಿ ಮೈಥಿಲಿ ಠಾಕೂರ್, ದರ್ಭಾಂಗ್ ಜಿಲ್ಲೆಯ ಅಲಿನಗರ ಕ್ಷೇತ್ರದಿಂದ ಗೆದ್ದದ್ದಾರೆ. ಕೇವಲ 25 ವರ್ಷ ವಯಸ್ಸಿನ ಮೈಥಿಲಿ ಬಿಹಾರದ ಅತ್ಯಂತ ಕಿರಿಯ ಶಾಸಕಿ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಮೊದಲ ಬಾರಿಗೆ ಅಲಿನಗದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮೈಥಿಲಿ, ಆರ್​ಜೆಡಿ ಅಭ್ಯರ್ಥಿ ವಿನೋದ್ ಮಿಶ್ರಾ ಅವರನ್ನು 12 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿ ಮೊದಲ ಬಾರಿಗೆ ಕ್ಷೇತ್ರದಲ್ಲಿ ಬಿಜೆಪಿ […]

ಜಮ್ಮು-ಕಾಶ್ಮೀರದಲ್ಲಿ ಭೀಕರ ಸ್ಫೋಟ; ಇಬ್ಬರು ಅಧಿಕಾರಿಗಳು ಸೇರಿ 9 ಮಂದಿ ಮೃತ್ಯು.

ಶ್ರೀನಗರ, ನ.15: ಜಮ್ಮು ಮತ್ತು ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ ಒಂಭತ್ತು ಮಂದಿ ಮೃತಪಟ್ಟು, 24ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಮೂವರು ನಾಗರಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡವರನ್ನು ಶ್ರೀನಗರದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಪೊಲೀಸರು, ವಿಧಿವಿಜ್ಞಾನ ಸಿಬ್ಬಂದಿ ಸೇರಿದ್ದಾರೆ ಎಂದು ಪೊಲೀಸ್ ಮೂಲವನ್ನು ಉಲ್ಲೇಖಿಸಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಸ್ಫೋಟದ ತೀವ್ರತೆಯಿಂದ ಠಾಣೆ ಕಟ್ಟಡಕ್ಕೂ ಹಾನಿಯಾಗಿದೆ. ಸ್ಥಳದಲ್ಲೇ ಏಳು ಮೃತದೇಹಗಳು ಪತ್ತೆಯಾಗಿದ್ದು, […]

ರಾಜಧಾನಿ ದೆಹಲಿಯಲ್ಲಿ ಕಾರು ಸ್ಫೋಟ: ಸಂಚುಕೋರರನ್ನು ಸುಮ್ಮನೆ ಬಿಡುವುದಿಲ್ಲ; ಪ್ರಧಾನಿ ಮೋದಿ!

ದೆಹಲಿ ಕೆಂಪುಕೋಟೆ ಬಳಿ ಬ್ಲ್ಯಾಸ್ಟ್‌ ಮಾಡಿದ ಸಂಚುಕೋರರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಜ್ಞೆ ಮಾಡಿದ್ದಾರೆ. ಇಂದು ನಾನು ತುಂಬಾ ಭಾರವಾದ ಹೃದಯದಿಂದ ಇಲ್ಲಿಗೆ ಬಂದಿದ್ದೇನೆ. ನಿನ್ನೆ ಸಂಜೆ ದೆಹಲಿಯಲ್ಲಿ ನಡೆದ ಭೀಕರ ಘಟನೆ ಎಲ್ಲರನ್ನೂ ಶೋಕಸಾಗರದಲ್ಲಿ ಮುಳುಗುವಂತೆ ಮಾಡಿದೆ. ತನ್ನವರನ್ನು ಕಳೆದುಕೊಂಡ ಕುಟುಂಬದವರ ನೋವು ನನಗೆ ಅರ್ಥವಾಗುತ್ತದೆ. ಇಡೀ ರಾಷ್ಟ್ರ ಇಂದು ಅವರೊಂದಿಗೆ ನಿಂತಿದೆ ಎಂದರು. ನಮ್ಮ ಸಂಸ್ಥೆಗಳು ಈ ಪಿತೂರಿಯ ಆಳವನ್ನು ಕಂಡುಕೊಳ್ಳುತ್ತವೆ. ಈ ಪಿತೂರಿ ಹಿಂದೆ ಯಾರಿದ್ದರೋ ಅವರನ್ನು ಸುಮ್ಮನೆ […]

ಕೆಂಪುಕೋಟೆ ಬಳಿ ಕಾರು ಸ್ಫೋಟ: ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ; ದೆಹಲಿಯಲ್ಲಿ ಹೈ ಅಲರ್ಟ್!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಕಾರು ಸ್ಫೋಟ ಪ್ರಕರಣ ( Delhi Blast ) ದೇಶಾದ್ಯಂತ ಭಾರಿ ಆತಂಕ ಸೃಷ್ಟಿ ಮಾಡಿದೆ. ಆದ್ದರಿಂದ ಇಡೀ ದೇಶದಲ್ಲಿ ಹೈ ಅಲರ್ಟ್​ ಘೋಷಣೆಯಾಗಿದೆ. ನಿನ್ನೆಯಷ್ಟೇ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬರೋಬ್ಬರಿ 2500 ಕೆಜಿ ತೂಕದ ಮದ್ದುಗುಂಡುಗಳನ್ನು ವಶಕ್ಕೆ ಪಡೆದಿದ್ದರು. ಇದರ ಬೆನ್ನಲ್ಲೇ ಇಂಥದ್ದೊಂದು ದುಷ್ಕೃತ್ಯ ನಡೆದಿರುವುದು ದೇಶದ ಜನರಲ್ಲಿ ಭೀತಿ ಉಂಟಾಗಿದೆ. ದೆಹಲಿ ಸ್ಫೋಟವು ಆತ್ಮಾಹುತಿ ಬಾಂಬ್​ ದಾಳಿ ಎಂದು ಅನುಮಾನಿಸಲಾಗಿದೆ. ಅಲ್ಲದೆ, ಶಂಕಿತ ಸೂಸೈಡ್​ ಬಾಂಬರ್​ […]