ನಿಮಗೆ ಪಿ.ಎಂ.ಕಿಸಾನ್ ಸಮ್ಮಾನ್ ಹಣ ಬರುತ್ತಿಲ್ಲವೇ? ಈ ಕೆಲಸ ಮಾಡ್ಲಿಲ್ಲ ಅಂದ್ರೆ ಹಣ ಮಿಸ್ ಆಗ್ಬೋದು!

ದೇಶದ ರೈತರಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಮುಖ ಯೋಜನೆ ಪಿಎಂ ಕಿಸಾನ್ ಸಮ್ಮಾನ್. ಈ ಯೋಜನೆಯಡಿ ವರ್ಷಕ್ಕೆ 6,000 ರೂ.ವನ್ನು ಮೂರು ಕಂತುಗಳಲ್ಲಿ (ಪ್ರತಿ ಕಂತು 2,000 ರೂ.) ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ. ಈಗಾಗಲೇ 22 ಕಂತುಗಳು ಬಿಡುಗಡೆಯಾಗಿದ್ದು, 23ನೇ ಕಂತಿನ ಹಣಕ್ಕಾಗಿ ರೈತರು ಕಾಯುತ್ತಿದ್ದಾರೆ. 23ನೇ ಕಂತು ಯಾವಾಗ ಬರಬಹುದು? ಸಿಕ್ಕಿರುವ ಮಾಹಿತಿಯ ಪ್ರಕಾರ, 2026ರ ಮೇ ಅಥವಾ ಜೂನ್ ತಿಂಗಳಲ್ಲಿ 23ನೇ ಕಂತಿನ ಹಣ ಜಮೆಯಾಗುವ ಸಾಧ್ಯತೆ ಇದೆ. […]
ಏ. 24 ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗೋದು ಡೌಟ್! ಕಾರಣವೇನು?

ಬೆಂಗಳೂರು: ಹೈಕೋರ್ಟ್ ನಲ್ಲಿ ತೃತೀಯ ಭಾಷಾ ವಿಷಯಗಳಿಗೆ ಗ್ರೇಡಿಂಗ್ ಬದಲು ಅಂಕಗಳನ್ನು ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಮರುಪರಿಶೀಲನಾ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಣೆ ವಿಳಂಬವಾಗುವ ಸಾಧ್ಯತೆ ಹೆಚ್ಚಾಗಿದೆ. ಪರೀಕ್ಷೆಗೆ ಮುನ್ನವೇ ಏಪ್ರಿಲ್ 24ರಂದು ಫಲಿತಾಂಶ ಪ್ರಕಟಿಸುವ ಸಂಭಾವ್ಯ ದಿನಾಂಕ ನಿಗದಿಯಾಗಿದ್ದರೂ, ಇದೀಗ ಅದು ಮುಂದೂಡಲ್ಪಡುವ ಸಾಧ್ಯತೆ ಇದೆ. ಈ ಕುರಿತ ಮರುಪರಿಶೀಲನಾ ಅರ್ಜಿ ಏಪ್ರಿಲ್ 21ರಂದು ವಿಚಾರಣೆಗೆ ನಿಗದಿಯಾಗಿದ್ದು, ನ್ಯಾಯಾಲಯದ ತೀರ್ಪಿನ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಭಾರೀ ಕುತೂಹಲ ಮೂಡಿದೆ. ಈ […]
ಏ. 21 ರಿಂದ BMTC-KSRTC ನೌಕರರ ಪ್ರತಿಭಟನೆ; ಬಸ್ಗಳ ಓಡಾಟ ಇರುತ್ತಾ?

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ವಿವಿಧ ಬೇಡಿಕೆಗಳಿಗಾಗಿ ಮತ್ತೆ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ವೇತನ ಪರಿಷ್ಕರಣೆ ಹಾಗೂ ಬಾಕಿ ಇರುವ ಹಣ ಪಾವತಿಸುವಂತೆ ಆಗ್ರಹಿಸಿ, ಅವರು ಹೋರಾಟಕ್ಕೆ ಮುಂದಾಗಿದ್ದಾರೆ. ನಾಲ್ಕು ಸಂಘಟನೆಗಳ ಒಕ್ಕೂಟ ಈ ಪ್ರತಿಭಟನೆಗೆ ಕರೆ ನೀಡಿದ್ದು, ಸಾವಿರಾರು ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲು ತೀರ್ಮಾನಿಸಿದ್ದಾರೆ. ಇದರ ಪರಿಣಾಮವಾಗಿ BMTC ಮತ್ತು KSRTC ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ನಾಳೆಯಿಂದಲೇ ಬಸ್ ಸೇವೆಗಳಲ್ಲಿ ಅಡಚಣೆ ಉಂಟಾಗಬಹುದು ಎಂದು […]
ನೀವೂ ಹೀಗೆ ಮಾಡಿದ್ರೆ ಕಳೆದುಹೋದ ಮೊಬೈಲ್ ಬೇಗ ನಿಮ್ಮ ಕೈ ಸೇರುತ್ತೆ : ಬೆಳಗಾವಿ ಪೊಲೀಸರು ಮಾಡಿದ ಮೊಬೈಲ್ ಬೇಟೆ!

ಬೆಳಗಾವಿ: ಮೊಬೈಲ್ ಕಳೆದುಹೋದರೆ ಅದು ಮರಳಿ ಸಿಗುವುದೇ ಕಷ್ಟ ಎಂಬ ಭಾವನೆ ಹಲವರಲ್ಲಿದೆ. ಆದರೆ ಬೆಳಗಾವಿ ಪೊಲೀಸರು ತಂತ್ರಜ್ಞಾನದ ಸಹಾಯದಿಂದ ಈ ಕಲ್ಪನೆಯನ್ನು ತಪ್ಪು ಎಂದು ಸಾಬೀತುಪಡಿಸಿದ್ದಾರೆ. ಸೈ ಅನ್ನಿಸಿಕೊಂಡಿದ್ದಾರೆ. ಹೌದು. ಬೆಳಗಾವಿ ಉತ್ತರ ವಲಯದ IGP ಚೇತನ್ ಸಿಂಗ್ ರಾಥೋರ್ ಅವರ ಮಾರ್ಗದರ್ಶನದಲ್ಲಿ ಅಥಣಿ ಉಪವಿಭಾಗದಲ್ಲಿ ಕಳೆದುಹೋಗಿದ್ದ 100 ಮೊಬೈಲ್ಗಳನ್ನು ಪತ್ತೆಹಚ್ಚಿ ಸಂಬಂಧಿತ ಮಾಲೀಕರಿಗೆ ಹಸ್ತಾಂತರಿಸಲಾಗಿದೆ. ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಈ ಮೊಬೈಲ್ಗಳು ಮತ್ತೆ ತಮ್ಮ ನಿಜವಾದ ಹಕ್ಕುದಾರರ ಕೈ ಸೇರಿವೆ. ಪೊಲೀಸರ […]
ಕಾರು–ಬಸ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತಕ್ಕೆ ಧಗಧಗನೆ ಹೊತ್ತಿ ಉರಿದ ಬೆಂಕಿ

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಬಳಿಕ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಈ ದುರಂತದಲ್ಲಿ ಕಾರಿನಲ್ಲಿದ್ದ ಆರು ಮಂದಿ ಸಜೀವ ದಹನಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಾರು ಯಾದಗಿರಿಯಿಂದ ರಾಯಚೂರು ಕಡೆಗೆ ತೆರಳುತ್ತಿದ್ದರೆ, ಖಾಸಗಿ ಬಸ್ ಬೆಂಗಳೂರಿನಿಂದ ಕಲಬುರಗಿಗೆ ಬರುತ್ತಿತ್ತು. ಈ ವೇಳೆ ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಘಟನೆ ನಡೆದ ಸ್ಥಳಕ್ಕೆ […]