ಪಿಂಚಣಿ: ಶಂಕಾಸ್ಪದ 17 ಲಕ್ಷ ಮಂದಿಗೆ ನೋಟಿಸ್

ಸಾಮಾಜಿಕ ಭದ್ರತಾ ಯೋಜನೆಯ ಹಣ ನಕಲಿ ಫಲಾನುಭವಿಗಳ ಪಾಲು ಬೆಂಗಳೂರು: ಸಾಮಾಜಿಕ ಭದ್ರತಾ ಯೋಜನೆಯಡಿ ನೀಡುತ್ತಿರುವ ವಿವಿಧ ಪಿಂಚಣಿಯ ಹಣ ನಕಲಿ ಫಲಾನುಭವಿಗಳ ಪಾಲಾಗಿರುವುದು ಕಂಡು ಬಂದಿದ್ದು, 17 ಲಕ್ಷಕ್ಕೂ ಅಧಿಕ ಮಂದಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ. ಈ ತಿಂಗಳ ಅಂತ್ಯದ ಒಳಗೆ ಸೂಕ್ತ ದಾಖಲೆಗಳನ್ನು ಸಲ್ಲಿಸದಿದ್ದರೆ ಸರ್ಕಾರ ಅವರನ್ನು ಯೋಜನೆಯಿಂದ ಕೈಬಿಡಲಿದೆ.ರಾಜ್ಯದಲ್ಲಿ ಒಟ್ಟು 83 ಲಕ್ಷ ಫಲಾನುಭವಿಗಳಿದ್ದು, ಇದರಲ್ಲಿ 23 ಲಕ್ಷ ಫಲಾನುಭವಿಗಳ ಬಗ್ಗೆ ಸಂದೇಹ ಬಂದಿರುವುದರಿಂದ ಪರಿಶೀಲನೆಗೆ ಒಳಪಡಿಸಲಾಗಿತ್ತು. ದಾಖಲೆಗಳ ತಪಾಸಣೆ ಬಳಿಕ 23 […]
NEET Protest: ಆಸ್ಪತ್ರೆಯಲ್ಲಿ ಸೊನಮ್ ವಾಂಗ್ರೂಕ್ ಭೇಟಿಯಾದ ಕೇಂದ್ರ ಸಚಿವರುಪಿಟಿಐ

ನವದೆಹಲಿ: ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೋರಾಟಗಾರ ಸೊನಮ್ ವಾಂಗ್ಟಕ್ ಅವರನ್ನು ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ, ಜಿತೇಂದ್ರ ಸಿಂಗ್ ಅವರು ಮಂಗಳವಾರ ತಡರಾತ್ರಿ ಭೇಟಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಸೊನಮ್ ವಾಂಗ್ಟಕ್ ಅವರನ್ನು, ದೆಹಲಿ ಹೈಕೋರ್ಟ್ ಆದೇಶದಂತೆ ಅಲ್ಲಿನ ಪೊಲೀಸರು ಸಫರ್ಜಂಗ್ ಆಸ್ಪತ್ರೆಗೆ ಬಲವಂತವಾಗಿ ಕರೆದೊಯ್ದಿದ್ದರು.ಸಫರ್ಜಂಗ್ […]
ಗಣಿ ಇಲಾಖೆಗೆ ಮೇಜರ್ ಸರ್ಜರಿ: 160 ಅಧಿಕಾರಿಗಳ ವರ್ಗಾವಣೆಗೊಳಿಸುವಂತೆ ಸಿಎಂ ಡಿಕೆ ಶಿವಕುಮಾರ್ ಸೂಚನೆ

ಬೆಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಭಾರೀ ಆಡಳಿತಾತ್ಮಕ ಬದಲಾವಣೆ ಕೈಗೊಂಡಿರುವ ರಾಜ್ಯ ಸರ್ಕಾರ, ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳಿಗೆ ಮೇಜರ್ ಶಾಕ್ ನೀಡಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸೂಚನೆಯಂತೆ ಇಲಾಖೆಯ ಶೇ.80ರಷ್ಟು ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಒಂದೇ ಬಾರಿಗೆ 160 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಇವರಲ್ಲಿ 131 ಭೂವಿಜ್ಞಾನಿಗಳು, 23 ಹಿರಿಯ ಭೂವಿಜ್ಞಾನಿಗಳು ಹಾಗೂ 6 ಉಪನಿರ್ದೇಶಕರು ಸೇರಿದ್ದಾರೆ. ದಶಕಗಳ ಕಾಲ ಸ್ವಂತ ಜಿಲ್ಲೆ ಅಥವಾ ನೆರೆಯ […]
ಶೃಂಗೇರಿ, ಕುದುರೆಮುಖ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಸರಣಿ ಅಪಘಾತ

ಕಾರ್ಕಳ: ಕಾರ್ಕಳದಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಮಾರ್ಗವಾಗಿ ಸಾಗುವ ರಸ್ತೆ, ರಾಷ್ಟ್ರೀಯ ಹೆದ್ದಾರಿ 169 (NH 169). ಇದು ಮಂಗಳೂರಿನಿಂದ ಕಾರ್ಕಳ, ಬಜಗೋಳಿ, ಮಾಳ ಘಾಟ್, ಎಸ್.ಕೆ. ಬಾರ್ಡರ್ ಹಾಗೂ ಕೆರೆಕಟ್ಟೆ ಮಾರ್ಗವಾಗಿ ಶೃಂಗೇರಿ ಮತ್ತು ಶಿವಮೊಗ್ಗವನ್ನು ಸಂಪರ್ಕಿಸುತ್ತದೆ. ಅಲ್ಲದೇ ಕುದುರೆಮುಖ, ಕಳಸ, ಹೊರನಾಡಿಗೂ ಸಂಪರ್ಕ ಕೊಂಡಿಯಾಗಿದೆ. ಮಾಳ ಚೆಕ್ ಪೋಸ್ಟ್ ದಾಟಿದ ನಂತರ ಒಂದು ವಾಹನದ ಆಯಿಲ್ ಲೀಕೇಜ್ ಹೆಚ್ಚಿನ ಪ್ರಮಾಣದಲ್ಲಿ ಆಗಿರುವ ಕಾರಣ ಇಂದು ಬೆಳಗ್ಗೆ ನಿಯಂತ್ರಣ ತಪ್ಪಿ ಸರಣಿ ಅಪಘಾತವಾಗಿದೆ.
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ನಿಧನ

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು ಹೃದಯಘಾತದಿಂದ ಕೊನೆಯುಸಿರೆಳೆದಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಚೆನ್ನಮ್ಮ ಅವರನ್ನ ಕಳೆದ 4 ದಿನಗಳ ಹಿಂದಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ 4:50 ರ ಸುಮಾರಿಗೆ ವಿಧಿವಶರಾಗಿದ್ದಾರೆ.