ಡಿಸೆಂಬರ್ ಅಂತ್ಯದೊಳಗೆ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ, ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಗಡಿ ಗುರುತಿಸುವಿಕೆಗೆ ಸಂಬಂಧಿಸಿದ ಆಕ್ಷೇಪಣೆ ಸಲ್ಲಿಸುವ ಅವಧಿ ಮೇ 8ರಂದು ಅಂತ್ಯಗೊಂಡಿದ್ದು, ಶೀಘ್ರದಲ್ಲೇ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದರು. ನಂತರ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನೂ ನಡೆಸಲಾಗುವುದು ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಉಂಟಾಗಿರುವ ಕುಡಿಯುವ ನೀರಿನ […]
IFS ಪರೀಕ್ಷೆಯಲ್ಲಿ ಭರ್ಜರಿ ಸಾಧನೆ ಮಾಡಿದ ಕನ್ನಡದ ಹುಡುಗರು, ಬಸವರಾಜ ಕೆಂಪವಾಡ ದೇಶಕ್ಕೆ ಫಸ್ಟ್ ರ್ಯಾಂಕ್, ಮುಖ್ಯಮಂತ್ರಿ ಅಭಿನಂದನೆ

ಬೆಂಗಳೂರು: ಭಾರತೀಯ ಅರಣ್ಯ ಸೇವೆ (IFS) ಪರೀಕ್ಷೆಯಲ್ಲಿ ಕನ್ನಡಿಗರು ಭರ್ಜರಿ ಸಾಧನೆ ಮಾಡಿದ್ದು, ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ. ಅಥಣಿ ತಾಲೂಕಿನ ಸವದಿಯ ಬಸವರಾಜ ಕೆಂಪವಾಡ ಅವರು ದೇಶಕ್ಕೆ ಪ್ರಥಮ ರ್ಯಾಂಕ್ ಪಡೆದು ಅನನ್ಯ ಸಾಧನೆ ಮಾಡಿದ್ದಾರೆ. ಇದೇ ವೇಳೆ ದೀಕ್ಷಿತ್ ಎನ್. ಅವರು 14ನೇ ರ್ಯಾಂಕ್ ಪಡೆದು ರಾಜ್ಯದ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಈ ಸಾಧನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, “ಕನ್ನಡಿಗರ ಪರಿಶ್ರಮ, ಆತ್ಮವಿಶ್ವಾಸ ಮತ್ತು ನಿರಂತರ […]
ನಿವೃತ್ತ ಅಧಿಕಾರಿಯನ್ನು ಬೀದಿಗೆ ತಳ್ಳಿ ಬಿಟ್ಟಿತು, ಆ ಒಂದು ವಾಟ್ಸಾಪ್ ಮೆಸೆಜ್: ಮೈಸೂರಿನ ಈ ಘಟನೆ ನಾಳೆ ನಮ್ಮೂರಲ್ಲೂ ಆಗಬಹುದು ಎಚ್ಚರವಾಗಿರಿ!

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಎಂದರೆ ನೆಮ್ಮದಿಯ ತಾಣ ಎಂದು ಹೇಳಲಾಗುತ್ತದೆ. ಆದರೆ ಇದೀಗ ಅದೇ ನಗರದಲ್ಲಿ ಸೈಬರ್ ಖದೀಮರು ಡಿಜಿಟಲ್ ದರೋಡೆಗೆ ಇಳಿದಿರುವ ಘಟನೆಗಳು ಹೆಚ್ಚಾಗುತ್ತಿವೆ. ನಿವೃತ್ತ ಅಧಿಕಾರಿಯನ್ನು ಬೀದಿಗೆ ತಳ್ಳಿ ಬಿಟ್ಟಿತು ಸೈಬರ್ ಕಳ್ಳರ ಆ ಒಂದು ಮೆಸೆಜ್, ಹೌದು ಕಷ್ಟಪಟ್ಟು ದುಡಿದು ನಿವೃತ್ತಿ ಜೀವನವನ್ನು ಸುಖವಾಗಿ ಕಳೆಯಬೇಕೆಂದಿದ್ದ ಅಧಿಕಾರಿಯೊಬ್ಬರು ಇದೀಗ ಕೋಟಿ ರೂಪಾಯಿ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇವಲ ಒಂದು ವಾಟ್ಸಾಪ್ ಮೆಸೇಜ್ ಇಡೀ ಬದುಕನ್ನೇ ಉಲ್ಟಾಪಲ್ಟಾ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. […]
ಸಲೂನ್ ಗೆ ಬಂದು ನೀಟಾಗಿ ಕಟ್ಟಿಂಗ್ ಮಾಡಿಸಿಕೊಂಡ ಕಪಿರಾಯ: ಕೋತಿಯ ಹೇರ್ ಕಟ್ ಚೇಷ್ಟೆಗೆ ಜನ ದಿಲ್ ಖುಷ್ !

ಚಾಮರಾಜನಗರ: ಜಿಲ್ಲೆಯ ಸಂತೇಮರಹಳ್ಳಿಯಲ್ಲಿ ನಡೆದ ಅಪರೂಪದ ಕೋತಿಪ್ರಸಂಗವೊಂದು ಸ್ಥಳೀಯರನ್ನೇ ಅಚ್ಚರಿ ಮತ್ತು ಖುಷಿಗೆ ಕಾರಣವಾಗಿದೆ. ಸಾಮಾನ್ಯವಾಗಿ ಮನುಷ್ಯರು ಮಾತ್ರ ಭೇಟಿ ನೀಡುವ ಹೇರ್ ಕಟಿಂಗ್ ಸಲೂನ್ಗೆ ಈ ಬಾರಿ ಅತಿಥಿಯಾಗಿ ಬಂದಿದ್ದು ಕೋತಿಯೊಂದು ಬಂದು, ಹೇರ್ ಕಟ್ ಮಾಡಿಸಿಕೊಂಡು ಹೋದ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಸಂತೇಮರಹಳ್ಳಿಯ ‘ದೇವು ಮೆನ್ಸ್ ಸಲೂನ್’ ಬಳಿ ಕಳೆದ ಕೆಲವು ದಿನಗಳಿಂದ ಈ ಮಂಗ ಓಡಾಡುತ್ತಿತ್ತಂತೆ. ಆದರೆ ಇತ್ತೀಚೆಗೆ ಅದು ನೇರವಾಗಿ ಸಲೂನ್ ಒಳಗೆ ಪ್ರವೇಶಿಸಿ ಕನ್ನಡಿಯ […]
ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದೆ. ಇದೀಗ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹೌದು ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. 3 ಹಿರಿಯ ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಬುಧವಾರ (ಮೇ 7) ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಹಿರಿಯ ಪೊಲೀಸ್ ಅಧಿಕಾರಿಗಳಾದ ಸಂದೀಪ್ ಪಾಟೀಲ್, […]