ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತನ ಹೊಸ ಚಿತ್ರ ಬಿಡುಗಡೆ: ಪತ್ತೆ ಹಚ್ಚಲು ನಾಗರಿಕರ ಸಹಕಾರ ಕೋರಿದ ತನಿಖಾ ಸಂಸ್ಥೆ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ (Rameshwarma Cafe Blast) ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA), ಅಪರಾಧಕ್ಕೆ ಸಂಬಂಧಿಸಿದ ಶಂಕಿತನ ಹೊಸ ಚಿತ್ರಗಳನ್ನು ಬಿಡುಗಡೆ ಮಾಡಿದೆ ಮತ್ತು ಆತನನ್ನು ಪತ್ತೆಹಚ್ಚಲು ಸಾರ್ವಜನಿಕ ಸಹಕಾರವನ್ನು ಕೋರಿದೆ. ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದು ತನಿಖಾ ಸಂಸ್ಥೆ ಹೇಳಿದೆ. “ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದ ಶಂಕಿತನನ್ನು ಗುರುತಿಸಲುೀನ್.ಐ.ಎ ನಾಗರಿಕರ ಸಹಕಾರವನ್ನು ಕೋರಿದೆ. ಯಾವುದೇ ಮಾಹಿತಿಯೊಂದಿಗೆ 08029510900, 8904241100 ಕರೆ ಮಾಡಿ ಅಥವಾ[email protected] ಮಾಡಿ. ನಿಮ್ಮ ಗುರುತು ಗೌಪ್ಯವಾಗಿ ಇಡಲಾಗುವುದು” […]
ರಾಜ್ಯಸಭೆಗೆ ಸುಧಾ ಮೂರ್ತಿ; ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನಾಮನಿರ್ದೇಶನ

ನವದೆಹಲಿ: ಸುಧಾ ಮೂರ್ತಿ (Sudha Murthy) ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು (President Of India) ಅವರು ರಾಜ್ಯಸಭೆಗೆ (Rajya Sabha) ನಾಮನಿರ್ದೇಶನ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 8 ರಂದು ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ತಿಳಿಸಿದ್ದಾರೆ. “ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶ್ರೀಮತಿ ಸುಧಾಮೂರ್ತಿ ಜಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಸಂತೋಷ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಜಿಯವರ ಕೊಡುಗೆ ಅಪಾರ […]
ರಾಮೇಶ್ವರಂ ಕೆಫೆ ಸ್ಪೋಟದ ಶಂಕಿತ ಉಗ್ರನ ಊಹಾತ್ಮಕ ರೇಖಾಚಿತ್ರ ಬಿಡುಗಡೆ: ಮಾಹಿತಿ ಕೊಟ್ಟವರಿಗೆ 10 ಲಕ್ಷ ರೂಪಾಯಿ ಬಹುಮಾನ

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಪೋಟದ( Rameshwaram Cafe Blast) ಶಂಕಿತ ಉಗ್ರನ ಹುಡುಕಾಟಕ್ಕೆ ಬಲೆ ಬೀಸಲಾಗಿದೆ. ಆತನ ಮುಖ ಚಹರೆ ಸ್ಪಷ್ಟವಾಗಿ ಗೋಚರಿಸದ ಕಾರಣ ಪತ್ತೆ ಕಷ್ಟವಾಗಿದೆ. ಶಂಕಿತ ಉಗ್ರ ಎಲ್ಲಿಯೂ ತನ್ನ ಮುಖ ಕಾಣದಂತೆ ಟೋಪಿ ಹಾಗೂ ಮಾಸ್ಕ್ ಬಳಸಿದ್ದಾನೆ. ಸ್ಪೋಟದ ಮುಂಚೆ ಹಾಗೂ ಸ್ಪೋಟದ ನಂತರ ಎಲ್ಲೆಲ್ಲಿ ಓಡಾಡಿದ್ದರೂ ಯಾವ ಸಿಸಿಟಿವಿಯಲ್ಲಿಯೂ ಆತನ ಮುಖ ಸ್ಪಷ್ಟವಾಗಿ ಕಂಡು ಬಂದಿಲ್ಲ. ಶಂಕಿತನ ಅರ್ಧ ಮುಖ ಕಾಣುವ ಸಿಸಿಟಿವಿಯ ಫೋಟೊವನ್ನು NIA ಬಿಡುಗಡೆ ಮಾಡಿದ್ದು, ಹುಡುಕಿಕೊಟ್ಟವರಿಗೆ 10 […]
5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು: ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿನ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು (Board Exam) ರದ್ದು ಮಾಡಿ ಹೈಕೋರ್ಟ್ (High Court) ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ 5,8,9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಿಗದಿಪಡಿಸಿತ್ತು. ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ರೂಪ್ಸಾ ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಅವರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಪೀಠ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು […]
ಸಾರ್ವಜನಿಕ ಸ್ಥಳಗಳಲ್ಲಿ ಸ್ಪೋಟದ ಬೆದರಿಕೆ ನೀಡಿ ಸಿಎಂ, ಡಿಸಿಎಂಗೆ ಇಮೇಲ್ : 2.5 ಮಿಲಿಯನ್ ಡಾಲರ್ ಗೆ ಬೇಡಿಕೆ

ಬೆಂಗಳೂರು: 2.5 ಮಿಲಿಯನ್ ಡಾಲರ್ ನೀಡಿ ಇಲ್ಲವಾದರೆ ಕರ್ನಾಟಕದಾದ್ಯಂತ ಹೋಟೆಲ್ಗಳು, ದೇವಸ್ಥಾನಗಳು, ರೈಲುಗಳು ಮತ್ತು ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಸ್ಫೋಟಗಳು ಸಂಭವಿಸುತ್ತವೆ ಎನ್ನುವ ಬೆದರಿಕೆ ಇಮೇಲ್ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹ ಸಚಿವರು, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಕಳುಹಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಐಇಡಿ ಸ್ಫೋಟಗೊಂಡ ಒಂದು ದಿನದ ನಂತರ, ಮಾರ್ಚ್ 2 ರಂದು ಈ ಇಮೇಲ್ ಕಳುಹಿಸಲಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ […]