ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ: ರಾಜ್ಯದಲ್ಲಿನ 5 ವರ್ಷದೊಳಗಿನ ಪ್ರತಿ ಮೂರನೇ ಮಗುವಿನ ಬೆಳವಣಿಗೆ ಕುಂಠಿತ

ಬೆಂಗಳೂರು: ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟ ಮತ್ತು ಕ್ಷೀರ ಭಾಗ್ಯದಂತಹ ರಾಜ್ಯ ಸರ್ಕಾರದ ಯೋಜನೆಗಳ ಹೊರತಾಗಿಯೂ, ಕರ್ನಾಟಕದಲ್ಲಿ ಐದು ವರ್ಷದೊಳಗಿನ 35% ಮಕ್ಕಳ ಬೆಳವಣಿಗೆ ಕುಂಠಿತವಾಗಿದೆ. ಮೇ 3 ರಂದು ಬಿಡುಗಡೆ ಮಾಡಲಾದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-5 ರ ಪ್ರಕಾರ, ರಾಜ್ಯದಲ್ಲಿನ 5 ವರ್ಷದೊಳಗಿನ ಪ್ರತಿ ಮೂರನೇ ಮಗುವಿನ ಬೆಳವಣಿಗೆ ಕುಂಠಿತವೆಂದು ತಿಳಿಸಲಾಗಿದೆ. ತೆಳ್ಳಗಿನ ತಾಯಂದಿರಿಗೆ ಜನಿಸುವ ಮಕ್ಕಳು ಕುಂಠಿತಗೊಳ್ಳುತ್ತಾರೆ ಮತ್ತು ನಗರ ಪ್ರದೇಶಗಳಿಗಿಂತ ಗ್ರಾಮೀಣ ಪ್ರದೇಶಗಳಲ್ಲಿ ಕುಂಠಿತಗೊಳ್ಳುವಿಕೆಯ ಪ್ರಮಾಣ ಹೆಚ್ಚಾಗಿರುತ್ತದೆ. ವಯಸ್ಸಿಗಿಂತ ಗಿಡ್ಡವಾಗಿರುವುದು ಅಥವಾ […]

ರಾಜ್ಯದೆಲ್ಲೆಡೆ ಶಾಲೆಗಳ ಪುನರಾರಂಭ: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಖಾದ್ಯದ ಸ್ವಾಗತ

ಬೆಂಗಳೂರು: ರಾಜ್ಯದೆಲ್ಲೆಡೆ ಶಾಲೆಗಳ ಪುನರಾರಂಭದ ದಿನದಂದು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಿಹಿ ಖಾದ್ಯ ನೀಡಿ ಸ್ವಾಗತಿಸಲಾಗುವುದು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಸುತ್ತೋಲೆ ಹೊರಡಿಸಿದ್ದು, ಶಾಲೆಯ ಮೊದಲ ದಿನದ ಮಧ್ಯಾಹ್ನದ ಊಟದ ಜೊತೆಗೆ ಕನಿಷ್ಠ ಒಂದು ಸಿಹಿ ಖಾದ್ಯವನ್ನು ತಯಾರಿಸುವಂತೆ ಶಾಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸುತ್ತೋಲೆಯ ಪ್ರಕಾರ, ಕ್ಷೀರ ಭಾಗ್ಯ ಮತ್ತು ಮಧ್ಯಾಹ್ನದ ಬಿಸಿಯೂಟ ಯೋಜನೆಗಳು ಶಾಲಾ ಪುನರಾರಂಭದ ಮೊದಲ ದಿನದಿಂದಲೆ ಕಾರ್ಯನಿರ್ವಹಿಸಲಿವೆ. ಸಿಹಿ ಖಾದ್ಯದ ಜತೆಗೆ ಶಾಲೆಗಳನ್ನು ಅಲಂಕರಿಸಿ ಹಬ್ಬದ ವಾತಾವರಣ ಮೂಡಿಸುವಂತೆ […]

ಮಿಷನ್ ಕರ್ನಾಟಕ ಟು ಕಾಶಿ; ಕರ್ನಾಟಕದಿಂದ ವಾರಣಾಸಿಗೆ ಶೀಘ್ರವೆ ವಿಶೇಷ ರೈಲು: ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆಯು ವಾರಣಾಸಿಗೆ (ಕಾಶಿ) ವಿಶೇಷ ರೈಲನ್ನು ಆಯೋಜಿಸುತ್ತಿದ್ದು, ಪ್ರತಿ ವರ್ಷ 30,000 ಕಾಶಿ ಯಾತ್ರಾರ್ಥಿಗಳಿಗೆ ತಲಾ 5,000 ರೂ.ಗಳನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈಗಾಗಲೇ ರೈಲ್ವೆ ಸಚಿವರೊಂದಿಗೆ ಮಾತನಾಡಿದ್ದು, ಅವರ ಸಲಹೆಯಂತೆ ಭಾರತ್ ಗೌರವ್ ಪ್ರವಾಸೋದ್ಯಮ ಯೋಜನೆಯಡಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿದ ಹಳೆಯ ರೈಲುಗಳನ್ನು ಪ್ರವಾಸೋದ್ಯಮಕ್ಕಾಗಿ ಗುತ್ತಿಗೆಗೆ ತೆಗೆದುಕೊಳ್ಳಲಾಗುವುದು. ಈ ರೈಲುಗಳ ನೋಂದಣಿಗಾಗಿ 1 ಲಕ್ಷ ರೂಪಾಯಿಯನ್ನು ಈಗಾಗಲೇ ಪಾವತಿಸಲಾಗಿದೆ. ಈ ರೈಲುಗಳು […]

ಬೆಂಗಳೂರಿನ ಕೆಂಗೇರಿಯಲ್ಲಿ ಬಸ್ ಅಫಘಾತ: 29 ಪ್ರಯಾಣಿಕರು ಗಾಯಾಳು

ಬೆಂಗಳೂರು: ಕೆಂಗೇರಿಯ ಮೈಸೂರು ರಸ್ತೆಯಲ್ಲಿ ಭಾನುವಾರ ರಾತ್ರಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತಕ್ಕೀಡಾಗಿ 29 ಜನರು ಗಾಯಗೊಂಡಿದ್ದಾರೆ ಎಂದು ಪಶ್ಚಿಮ ಬೆಂಗಳೂರಿನ ಡಿಸಿಪಿ ಡಾ ಸಂಜೀವ್ ಪಾಟೀಲ್ ಸುದ್ದಿ ಸಂಸ್ಥೆ ಎ ಎನ್ ಐ ಗೆ ತಿಳಿಸಿದ್ದಾರೆ. ಪ್ರಯಾಣಿಕರಲ್ಲಿ ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿದ್ದರೆ, ಉಳಿದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನಲ್ಲಿ 45 ಮಂದಿ ಪ್ರಯಾಣಿಕರಿದ್ದು ಮಡಿಕೇರಿಯಿಂದ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದರು. Karnataka | 25 people received minor injuries and 4 were […]

ಏರುತ್ತಿರುವ ತಾಪಮಾನ: ಶೈಕ್ಷಣಿಕ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲವೆಂದ ಶಿಕ್ಷಣ ಸಚಿವ

ಬೆಂಗಳೂರು: ಕರ್ನಾಟಕದ ಕೆಲವು ಭಾಗಗಳಲ್ಲಿ ತಾಪಮಾನವು ದಿನೇ ದಿನೇ ಏರುತ್ತಿದ್ದು, ಅದಾಗ್ಯೂ ಶಾಲೆಗಳ ಮತ್ತು ಪದವಿ ಪೂರ್ವ ಕಾಲೇಜುಗಳ ಶೈಕ್ಷಣಿಕ ವೇಳಾಪಟ್ಟಿಯ ಮೇಲೆ ಇದು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಗುರುವಾರ ಹೇಳಿದ್ದಾರೆ. ಉತ್ತರ ಕರ್ನಾಟಕದಲ್ಲಿ ಹೆಚ್ಚುತ್ತಿರುವ ತಾಪಮಾನವನ್ನು ಗಮನದಲ್ಲಿಟ್ಟುಕೊಂಡು ಶೈಕ್ಷಣಿಕ ವರ್ಷದ ಆರಂಭವನ್ನು ಮುಂದೂಡುವ ಬಗ್ಗೆ ಪರಿಗಣಿಸುವಂತೆ ವಿಧಾನ ಪರಿಷತ್ತಿನ ಕೆಲವು ಸದಸ್ಯರು ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಕೋರಿದ್ದಾರೆ. “ಸರ್ಕಾರದ ಮುಂದೆ ಅಂತಹ ಯಾವುದೇ […]