ಆನ್ ಲೈನ್ ಗೇಮ್ಸ್ ಗಳಿಗೆ ನಿಯಂತ್ರಣ ಹೇರುವ ಮಸೂದೆಗೆ ಅನುಮೋದನೆ

ನವದೆಹಲಿ: ಆನ್ಲೈನ್ ಗೇಮಿಂಗ್ ವೇದಿಕೆಗಳನ್ನು ನಿಯಂತ್ರಿಸುವ ಉದ್ದೇಶದ ‘ಆನ್ಲೈನ್ ಗೇಮಿಂಗ್ ಮಸೂದೆ’ಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ ಎಂದು ಸರ್ಕಾರದ ಮೂಲಗಳು ಹೇಳಿವೆ.‘ಆನ್ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಮಸೂದೆ-2025’ ಅನ್ನು ಸಂಸತ್ನಲ್ಲಿ ಬುಧವಾರ ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ಆನ್ಲೈನ್ ಬೆಟ್ಟಿಂಗ್ ಅನ್ನು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸುವುದು, ಹಣ ಆಧಾರಿತ ಎಲ್ಲ ಆನ್ಲೈನ್ ಗೇಮ್ಗಳನ್ನು ನಿಷೇಧಿಸುವುದು, ಆನ್ಲೈನ್ ಗೇಮಿಂಗ್ಗೆ ಸಂಬಂಧಿಸಿದ ಹಣಕಾಸು ವ್ಯವಹಾರ ನಡೆಸಲು ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳಿಗೆ […]
ನಟಿ ರಮ್ಯಾಗೆ ಅಶ್ಲೀಲ ಸಂದೇಶ ಪ್ರಕರಣ: ಉಡುಪಿ ಮೂಲದ ಇಬ್ಬರು ಪೊಲೀಸರ ವಶಕ್ಕೆ.

ಬೆಂಗಳೂರು: ನಟಿ ರಮ್ಯಾಗೆ (Actress Ramya) ಅಶ್ಲೀಲ ಕಮೆಂಟ್ ಮಾಡಿದ್ದ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಉಡುಪಿ ಮೂಲದ ಸುಜನ್ ಮತ್ತು ಆದರ್ಶ್ ಬಂಧಿತರು. ಆರೋಪಿಗಳು ದರ್ಶನ್ ಅಭಿಮಾನಿಗಳಾಗಿದ್ದು, ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು. ಈ ಹಿಂದೆ ಇದೇ ಪ್ರಕರಣದಲ್ಲಿ ಕೋಲಾರ, ಚಿಕ್ಕಮಗಳೂರು, ಬೆಂಗಳೂರು ಸೇರಿ ವಿವಿಧೆಡೆ 7 ಮಂದಿಯನ್ನು ಬಂಧಿಸಲಾಗಿತ್ತು. ಇತ್ತೀಚೆಗೆ ರಮ್ಯಾ ರೇಣುಕಾಸ್ವಾಮಿಗೆ ನ್ಯಾಯ ಸಿಗಬೇಕೆನ್ನುವ ನಿಟ್ಟಿನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದರು. […]
ಧರ್ಮಸ್ಥಳ:ಎಸ್ ಐ ಟಿ ತನಿಖೆಯ ದಿಕ್ಕು ತಪ್ಪಿಸುತ್ತಿದೆಯಾ ಮಾಧ್ಯಮಗಳು? ಮಾಧ್ಯಮಗಳೇ ಜವಾಬ್ದಾರಿ ಮರೆತು ಗಾಳಿ ಸುದ್ದಿಗೆ ಮಣೆ ಹಾಕಿದವಾ?

-ವಿಶೇಷ ಬರಹ ಧರ್ಮಸ್ಥಳ ಅಸಹಜ ಶವಗಳನ್ನು ಹೂತು ಹಾಕಲಾಗಿದೆ ಎನ್ನುವ ದೂರಿನ ಕುರಿತು ಸರಕಾರ ಎಸ್ ಐಟಿ ರಚನೆ ಮಾಡಿ ತನಿಖೆ ನಡೆಯುತ್ತಿದೆ. ಸೋಮವಾರ ಸದನದಲ್ಲಿ ಗೃಹ ಸಚಿವರಾದ ಜಿ ಪರಮೇಶ್ವರ್, ಎಸ್ ಐಟಿ ನೀಡಿದ ಒಂದಷ್ಟು ವರದಿಯನ್ನೂ ವಿವರಿಸಿದ್ದಾರೆ. ಎರಡು ಕಡೆಗಳಲ್ಲಿ ಅಸ್ಥಿಪಂಜರ, ಮೂಳೆ ಸಿಕ್ಕಿರುದಾಗಿ ಮತ್ತು ಮಣ್ಣಿನಲ್ಲಿ ಆಸಿಡ್ ಅಂಶವಿದ್ದು ಕೆಲವೊಂದು ಮೂಳೆಗಳು ಕರಗಿ ಹೋಗುವ ಸಾಧ್ಯತೆ ಇದ್ದು ಮಣ್ಣನ್ನೂ ಪರೀಕ್ಷೆಗೆ ಕಳಿಸಲಾಗಿದೆ. ಯಾವುದೇ ಕಾರಣಕ್ಕೂ ಸರಕಾರ ತನಿಖೆಯನ್ನು ಅರ್ಧಕ್ಕೆ ನಿಲ್ಲಿಸುದಿಲ್ಲ,ತಪ್ಪಿತಸ್ಥರು ಯಾರೇ ಆಗಿದ್ದರೂ ಶಿಕ್ಷೆ […]
ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಮಾನುಷ ಕೃತ್ಯಗಳು ಎಸ್ಐಟಿ ತನಿಖೆ ಮೂಲಕ ಬೆಳಕಿಗೆ ಬರಲಿ: ಮುಖ್ಯಮಂತ್ರಿಗೆ ಪತ್ರ ಬರೆದ ಜಾಗೃತ ನಾಗರಿಕರು ಕರ್ನಾಟಕದ ಮುಖಂಡರು

ಬೆಂಗಳೂರು: ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಅಮಾನುಷ ಘಟನೆಗಳು ನಡೆದಿದೆ. ಈ ಘಟನೆಗಳ ಎಸ್ಐಟಿ ತನಿಖೆಗೆ ಬೆಂಬಲಿಸಿ ಜಾಗೃತ ನಾಗರಿಕರು ಕರ್ನಾಟಕ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸಚಿವ ಸಂಪುಟದ ಸದಸ್ಯರ ಮತ್ತು ವಿರೋಧ ಪಕ್ಷದ ಸದಸ್ಯರ ಕಾನೂನು ವಿರೋಧಿ, ಸಂವಿಧಾನ ವಿರೋಧಿ ಹೇಳಿಕೆಗಳಿಗೆ ಜಾಗೃತ ನಾಗರಿಕರು ಕರ್ನಾಟಕದ ಮುಖಂಡರು ಖಂಡಿಸಿದ್ದಾರೆ. ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಕಳೆದ ನಾಲ್ಕು ದಶಕಗಳಿಂದ ಅತ್ಯಾಚಾರ, ಕೊಲೆ, ಭೂ ಕಬಳಿಕೆ ಪ್ರಕರಣಗಳು ಆಗಾಗ ಮುನ್ನೆಲೆಗೆ ಬರುತ್ತಲೇ ಇವೆ. ಶಾಲಾ ಕಾಲೇಜುಗಳಿಗೆ ಹೋದ ವಿದ್ಯಾರ್ಥಿನಿಯರು […]
ಮಹೇಶ್ ಶೆಟ್ಟಿ ತಿಮರೋಡಿಯನ್ನು ತಕ್ಷಣ ಬಂಧಿಸುವಂತೆ ಉಡುಪಿ ಜಿಲ್ಲಾ ಬಿಜೆಪಿ ಆಗ್ರಹ

ಉಡುಪಿ: ಹಿಂದೂಗಳ ಧಾರ್ಮಿಕ ಶೃದ್ಧಾ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಟಾರ್ಗೆಟ್ ಮಾಡಿರುವ ಸಮಾಜ ಕಂಟಕ ಮಹೇಶ್ ಶೆಟ್ಟಿ ತಿಮರೋಡಿ, ಹಿಂದೂ ಧಾರ್ಮಿಕ ಕೇಂದ್ರಗಳ ರಕ್ಷಣೆಯ ಪರ ನಿಂತಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಹಿತ ಬಿಜೆಪಿ ನಾಯಕರುಗಳನ್ನು ವಾಚಾಮಗೋಚರವಾಗಿ ನಿಂದಿಸಿ ಮಾನ ಹಾನಿಕರ, ಅಸಹ್ಯಕರ ಮಾತುಗಳನ್ನಾಡಿರುವುದು ಸಾಮಾಜಿಕ ಜಾಲತಾಣದ ಮೂಲಕ ಜಗಜ್ಜಾಹೀರಾಗಿದ್ದು, ಗೂoಡಾಗಿರಿ ಪ್ರವೃತ್ತಿಯೊಂದಿಗೆ ಆಧಾರ ರಹಿತ ಸುಳ್ಳು ಆರೋಪಗಳ ಮೂಲಕ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು […]